ಆದರೆ ಕರ್ತನ ಕೈ ಎಲೀಯನ ಮೇಲೆ ಇದ್ದದರಿಂದ ಅವನು ತನ್ನ ನಡುವನ್ನು ಕಟ್ಟಿಕೊಂಡು ಇಜ್ರೇಲಿನ ವರೆಗೂ ಅಹಾಬನಿಗೆ ಮುಂದಾಗಿ ಓಡಿದನು.
Cross references
ಅದಕ್ಕವರು--ಅವನು ಕೂದಲುಳ್ಳ ಮನು ಷ್ಯನು; ಅವನ ನಡುವಿನ ಸುತ್ತಲು ತೊಗಲಿನ ನಡುಕಟ್ಟು ಇತ್ತು ಅಂದರು. ಅದಕ್ಕೆ ಅವನು--ತಿಷ್ಬೀಯನಾದ ಎಲೀಯನು ಎಂದು ಹೇಳಿದನು.
ಆದರೆ ಈಗ ವಾದ್ಯ ಬಾರಿಸುವವನನ್ನು ನನ್ನ ಬಳಿಗೆ ಕರಕೊಂಡು ಬಾ ಅಂದನು. ಆಗ ವಾದ್ಯ ಬಾರಿಸುವ ವನು ಬಾರಿಸಿದಾಗ ಕರ್ತನ ಕೈ ಅವನ ಮೇಲೆ ಬಂತು.
ಆಗ ಅವನು ಗೇಹಜಿಗೆ--ನೀನು ನಿನ್ನ ನಡುವನ್ನು ಕಟ್ಟಿ ಕೊಂಡು ನನ್ನ ಕೋಲನ್ನು ನಿನ್ನ ಕೈಯಲ್ಲಿ ಹಿಡುಕೊಂಡು ಹೋಗು. ನಿನಗೆ ಯಾವನಾದರೂ ಎದುರುಗೊಂಡರೆ ಅವನನ್ನು ವಂದಿಸಬೇಡ; ಯಾವನಾದರೂ ನಿನ್ನನ್ನು ವಂದಿಸಿದರೆ ಅವನಿಗೆ ಪ್ರತ್ಯುತ್ತರ ಹೇಳಬೇಡ; ನನ್ನ ಕೋಲನ್ನು ಆ ಹುಡುಗನ ಮುಖದ ಮೇಲೆ ಹಾಕು ಅಂದನು.
ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಕ್ಕಳಲ್ಲಿ ಒಬ್ಬನನ್ನು ಕರೆದು ಅವನಿಗೆ--ನಡುವನ್ನು ಕಟ್ಟಿಕೊಂಡು ಈ ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋಗು.
ಪುರುಷನ ಹಾಗೆ ನಡುವನ್ನು ಕಟ್ಟಿಕೋ; ನಾನು ನಿನ್ನನ್ನು ಕೇಳುವೆನು; ನೀನು ನನಗೆ ಉತ್ತರ ಕೊಡು.
ನಾನು ಈ ಜನರ ಮಾರ್ಗದಲ್ಲಿ ನಡೆಯದ ಹಾಗೆ ಕರ್ತನು ಬಲವಾದ ಕೈಯಿಂದ ನನಗೆ--
ಆದದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ.
ಕರ್ತನ ವಾಕ್ಯವು ಕಸ್ದೀಯರ ದೇಶದ ಕೆಬಾರ್ ನದಿಯ ಬಳಿಯಲ್ಲಿ ಬೂಜಿಯ ಮಗನೂ ಯಾಜಕನೂ ಆಗಿರುವ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಬಂದಿತು, ಕರ್ತನ ಕೈ ಅವನ ಮೇಲಿತ್ತು.
ಹೀಗೆ ಆತ್ಮನು ನನ್ನನ್ನು ಎತ್ತಿಕೊಂಡು ಹೋದನು; ನಾನು ಕಹಿಯಲ್ಲಿಯೂ ಆತ್ಮನ ಉರಿಯ ಲ್ಲಿಯೂ ಹೋದೆನು; ಅದರೆ ಕರ್ತನ ಕೈ ನನ್ನ ಮೇಲೆ ಬಲವಾಗಿತ್ತು.
ಅದಕ್ಕೆ ಅವರು ಆತನಿಗೆ--ಕೈಸರನದು ಅಂದರು. ಆಗ ಆತನು ಅವರಿಗೆ-ಕೈಸರನದವುಗಳನ್ನು ಕೈಸರನಿಗೆ ಕೊಡಿರಿ; ದೇವರವುಗಳನ್ನು ದೇವರಿಗೆ ಕೊಡಿರಿ ಅಂದನು.
ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ಎದೆಕವಚವನ್ನು ಧರಿಸಿಕೊಳ್ಳಿರಿ.ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.
ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.
ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.