ಆದರೆ ಬಾಳನಿಗೆ ಬೊಗ್ಗದೆ ಇರುವ ಸಕಲ ಮೊಣ ಕಾಲುಗಳೂ ಅದನ್ನು ಮುದ್ದಿಡದ ಸಕಲ ಬಾಯಿಗಳೂ ಆಗಿರುವ ಏಳು ಸಾವಿರ ಮಂದಿಯನ್ನು ಇಸ್ರಾಯೇ ಲಿನಲ್ಲಿ ನನಗೋಸ್ಕರ ಉಳಿಸಿಕೊಂಡಿದ್ದೇನೆ ಅಂದನು.
Cross references
ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
ನನ್ನ ಹೃದಯವು ಅಂತರಂಗದಲ್ಲಿ ಮರುಳುಗೊಂಡು, ನನ್ನ ಬಾಯಿಂದ ನನ್ನ ಕೈಯನ್ನು ಮುದ್ದಿಟ್ಟಿದ್ದರೆ;
ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.
ಆ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಉಳಿದವರೂ ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಇಸ್ರಾಯೇಲಿನ ಪರಿಶುದ್ಧನಾದ ಕರ್ತನ ಸತ್ಯವನ್ನು ಆಧಾರ ಮಾಡಿಕೊಳ್ಳುವರು.
ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.
ಈಗ ಅವರು ಹೆಚ್ಚೆಚ್ಚಾಗಿ ಪಾಪವನ್ನು ಮಾಡುತ್ತಾರೆ; ಸ್ವಂತ ಬುದ್ಧಿಯ ಪ್ರಕಾರ ತಮ್ಮ ಬೆಳ್ಳಿಯಿಂದ ಎರಕದ ವಿಗ್ರಹಗಳನ್ನೂ ಮೂರ್ತಿಗಳನ್ನೂ ಮಾಡಿಕೊಂಡಿದ್ದಾರೆ. ಅವೆಲ್ಲವೂ ಶಿಲ್ಪಿಗಳ ಕೈಕೆಲಸವೇ, ಬಲಿ ಅರ್ಪಿಸುವ ಮನುಷ್ಯರು ಹಸುಗಳಿಗೆ ಮುದ್ದಿಡಲೆಂದು ಅವರು ಅವರ ವಿಷಯ ವಾಗಿ ಹೇಳಿದರು.
ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು.
ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ.
ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.