ಆಗ ಅವನು ಎತ್ತುಗಳನ್ನು ಬಿಟ್ಟು ಎಲೀಯನ ಹಿಂದೆ ಓಡಿಹೋಗಿ ಅವನಿಗೆ --ಅಪ್ಪಣೆಯಾದರೆ ನಾನು ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ನಿನ್ನನ್ನು ಹಿಂಬಾಲಿಸುವೆನು ಅಂದನು. ಅವನು ಇವನಿಗೆ--ಹಿಂದಕ್ಕೆ ಹೋಗು; ನಾನು ನಿನಗೆ ಏನು ಮಾಡಿದೆನು ಅಂದನು.ಆಗ ಇವನು ಅವನನ್ನು ಬಿಟ್ಟು ತಿರುಗಿಕೊಂಡು ಒಂದು ಜೋಡು ಎತ್ತುಗಳನ್ನು ತಕ್ಕೊಂಡು ಅವುಗಳನ್ನು ಕೊಂದು ಆ ಜೋಡು ಎತ್ತು ಕುಂಟೆಗಳಿಂದ ಅವುಗಳ ಮಾಂಸ ವನ್ನು ಬೇಯಿಸಿ ಜನರಿಗೆ ಕೊಟ್ಟನು. ಅವರು ತಿಂದ ತರುವಾಯ ಅವನು ಎದ್ದು ಎಲೀಯನ ಹಿಂದೆ ಹೋಗಿ ಅವನಿಗೆ ಸೇವೆಮಾಡಿದನು.
Cross references
ಆದರೆ ನೀನು ನನ್ನ ಕುಮಾರರಿಗೂ ಕುಮಾರ್ತೆಯರಿಗೂ ಮುದ್ದು ಕೊಡ ಗೊಡಿಸಲಿಲ್ಲ. ನೀನು ಮಾಡಿದ್ದು ಹುಚ್ಚು ಕೆಲಸವೇ ಸರಿ.
ಅವರು ತಕ್ಷಣವೇ ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
ಅವರು ತಕ್ಷಣವೇ ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಆತನನ್ನು ಹಿಂಬಾಲಿಸಿದರು.
ಆತನ ಶಿಷ್ಯರಲ್ಲಿ ಮತ್ತೊಬ್ಬನು ಆತನಿಗೆ--ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ಬರುವಂತೆ ನನಗೆ ಅಪ್ಪಣೆ ಕೊಡು ಎಂದು ಹೇಳಿದನು.
ತರುವಾಯ ಯೇಸು ಅಲ್ಲಿಂದ ಹಾದು ಹೋಗು ತ್ತಿದ್ದಾಗ ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವದನ್ನು ನೋಡಿ ಅವ ನಿಗೆ--ನನ್ನನ್ನು ಹಿಂಬಾಲಿಸು ಅನ್ನಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.
ಆಮೇಲೆ ಪೇತ್ರನು ಆತನಿಗೆ--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಆದದ ರಿಂದ ನಮಗೆ ಏನು ದೊರೆಯುವದು ಎಂದು ಕೇಳಿದನು.
ಇದಲ್ಲದೆ ಮತ್ತೊಬ್ಬನು ಸಹ--ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುವೆನು; ಆದರೆ ನಾನು ಮೊದಲು ಹೋಗಿ ನನ್ನ ಮನೆಯಲ್ಲಿದ್ದವರಿಗೆ ಬೀಳ್ಕೊಡುವಂತೆ ನನಗೆ ಅಪ್ಪಣೆಕೊಡು ಅಂದನು.ಆಗ ಯೇಸು ಅವನಿಗೆ--ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ ಅಂದನು.
ಆಗ ಅವರೆಲ್ಲರೂ ಬಹಳವಾಗಿ ಅತ್ತು ಪೌಲನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು.ತನ್ನ ಮುಖವನ್ನು ಅವರು ಇನ್ನು ನೋಡುವದಿಲ್ಲವೆಂದು ಹೇಳಿದ ಮಾತುಗಳಿಗೆ ಅವರು ಬಹಳವಾಗಿ ವ್ಯಥೆಪಟ್ಟರು. ತರುವಾಯ ಅವರು ಅವನನ್ನು ಹಡಗಿನ ವರೆಗೆ ಸಾಗ ಕಳುಹಿಸಿದರು.