ಆಗ ಅವನು--ರಾಜ್ಯವು ನನ್ನದಾಗಿತ್ತೆಂದು ನಾನು ಆಳುವ ಹಾಗೆ ಸಮಸ್ತ ಇಸ್ರಾಯೇಲ್ಯರು ನನ್ನ ಮೇಲೆ ಕಣ್ಣಿಟ್ಟಿದ್ದರೆಂದು ನೀನು ಬಲ್ಲೆ.
Cross references
ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು.
ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಯನ್ನು ಆದರಿಸಿ ಅವಳ ಬಳಿಗೆ ಹೋಗಿ ಅವಳ ಸಂಗಡ ಮಲಗಿದನು.ಅವಳು ಒಬ್ಬ ಮಗನನ್ನು ಹೆತ್ತಳು. ಅವನಿಗೆ ಸೊಲೊಮೋನನೆಂದು ಹೆಸರಿಟ್ಟನು. ಕರ್ತನು ಅವ ನನ್ನು ಪ್ರೀತಿಮಾಡಿದನು.
ಈ ಪ್ರಕಾರ ಅಬ್ಷಾಲೋಮನು ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವ ಇಸ್ರಾಯೇಲ್ಯರೆಲ್ಲರಿಗೆ ಮಾಡಿ ದನು. ಈ ರೀತಿಯಲ್ಲಿ ಅಬ್ಷಾಲೋಮನು ಇಸ್ರಾ ಯೇಲ್ಯರಿಗೆ ಮಾಡಿದನು. ಹೀಗೆ ಅಬ್ಷಾಲೋಮನು ಇಸ್ರಾಯೇಲ್ಯರ ಹೃದಯಗಳನ್ನು ಕದ್ದುಕೊಂಡನು.
ದಾವೀದನ ಬಳಿಗೆ ಒಬ್ಬ ದೂತನು ಬಂದು --ಇಸ್ರಾಯೇಲ್ ಜನರ ಹೃದಯಗಳು ಅಬ್ಷಾ ಲೋಮನ ಕಡೆಗಾದವು ಅಂದನು.
ಹೂಷೈ ಅಬ್ಷಾಲೋಮನಿಗೆ--ಹಾಗಲ್ಲ, ಆದರೆ ಕರ್ತನೂ ಈ ಜನವೂ ಇಸ್ರಾಯೇಲಿನ ಎಲ್ಲಾ ಜನರೂ ಯಾರನ್ನು ಆದುಕೊಳ್ಳುವರೋ ನಾನೂ ಅವನ ಪಕ್ಷದವನಾಗಿರುವೆನು; ನಾನು ಅವನ ಬಳಿಯಲ್ಲಿ ಇರುವೆನು.
ಆಗ ಹಗ್ಗೀತಳ ಮಗನಾದ ಅದೋನೀಯನು ತನ್ನನ್ನು ಹೆಚ್ಚಿಸಿಕೊಂಡು--ನಾನೇ ಅರಸನಾಗಿರಬೇಕು ಅಂದುಕೊಂಡು ತನಗೋಸ್ಕರ ರಥಗಳನ್ನೂ ರಾಹುತ ರನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿ ಮನುಷ್ಯರನ್ನೂ ಸಿದ್ಧಮಾಡಿದನು.
ಈ ಹೊತ್ತು ಅವನು ಇಳಿದು ಹೋಗಿ ಎತ್ತು ಗಳನ್ನೂ ಕೊಬ್ಬಿದ ಪಶುಗಳನ್ನೂ ಕುರಿಗಳನ್ನೂ ಅನೇಕ ವಾಗಿ ಕೊಲ್ಲಿಸಿ ಅರಸನ ಮಕ್ಕಳೆಲ್ಲರನ್ನೂ ಸೈನ್ಯಾಧಿಪತಿ ಗಳನ್ನೂ ಯಾಜಕನಾದ ಎಬ್ಯಾತಾರನನ್ನೂ ಕರೆದಿ ದ್ದಾನೆ. ಇಗೋ, ಅವರು ಅವನ ಮುಂದೆ ತಿಂದು, ಕುಡಿದು--ಅರಸನಾದ ಅದೋನೀಯನನ್ನು ದೇವರು ರಕ್ಷಿಸಲಿ ಎಂದು ಅನ್ನುತ್ತಾರೆ.
ಆಗ ಯಾಜಕನಾದ ಚಾದೋಕನು ಗುಡಾರದೊಳಗಿಂದ ತೈಲದ ಕೊಂಬನ್ನು ತಂದು ಸೊಲೊಮೋನನನ್ನು ಅಭಿಷೇಕಿಸಿದನು. ಅವರು ತುತೂರಿಯನ್ನು ಊದಿದರು. ಆಗ ಜನರೆಲ್ಲರು--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅಂದರು.
ಇಗೋ, ಸಮಾ ಧಾನವುಳ್ಳ ಮನುಷ್ಯನಾಗಿರುವ ಒಬ್ಬ ಮಗನು ನಿನಗೆ ಹುಟ್ಟುವನು; ಸುತ್ತಲಿರುವ ಅವನ ಸಮಸ್ತ ಶತ್ರುಗಳಿಂದ ನಾನು ಅವನಿಗೆ ಸಮಾಧಾನವನ್ನು ಕೊಡುವೆನು. ಅವ ನಿಗೆ ಸೊಲೊಮೋನನೆಂಬ ಹೆಸರಾಗುವದು; ಅವನ ದಿವಸಗಳಲ್ಲಿ ನಾನು ಇಸ್ರಾಯೇಲಿಗೆ ಸಮಾಧಾನ ವನ್ನೂ ವಿಶ್ರಾಂತಿಯನ್ನೂ ಕೊಡುವೆನು.
ಅವನು ನನ್ನ ನಾಮಕ್ಕೆ ಮನೆಯನ್ನು ಕಟ್ಟಿಸುವನು. ಅವನು ನನ್ನ ಮಗನಾಗಿರುವನು, ನಾನು ಅವನಿಗೆ ತಂದೆ ಯಾಗಿರುವೆನು; ಇಸ್ರಾಯೇಲಿನ ಮೇಲೆ ಅವನ ರಾಜ್ಯದ ಸಿಂಹಾಸನವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು.
ಕರ್ತನು ನನಗೆ ಅನೇಕ ಕುಮಾ ರರನ್ನು ಕೊಟ್ಟಿರುವಾಗ ನನ್ನ ಸಮಸ್ತ ಕುಮಾರರಲ್ಲಿ ಇಸ್ರಾಯೇಲಿನ ಮೇಲಾಗಿ ಕರ್ತನ ರಾಜ್ಯದ ಸಿಂಹಾ ಸನದ ಮೇಲೆ ಕುಳಿತುಕೊಳ್ಳುವದಕ್ಕೆ ನನ್ನ ಮಗನಾದ ಸೊಲೊಮೋನನನ್ನು ಆದುಕೊಂಡನು.
ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
ಆಗ ಪ್ರವಾದಿಯಾದ ಯೆರೆವಿಾಯನು ಯಾಜಕರ ಮುಂದೆಯೂ ಕರ್ತನ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯ ನಿಗೆ ಹೇಳಿದ್ದೇನಂದರೆ--
ಅಗಾಧವಾದವುಗಳನ್ನು, ರಹಸ್ಯವಾದವು ಗಳನ್ನು ಪ್ರಕಟಮಾಡುತ್ತಾನೆ; ಕತ್ತಲೆಯಲ್ಲಿ ಇರುವಂತ ವುಗಳನ್ನು ತಿಳಿದಿರುವಂತವನಾಗಿದ್ದಾನೆ; ಬೆಳಕು ಆತ ನೊಳಗೆ ವಾಸಿಸುತ್ತದೆ.