ಇದಲ್ಲದೆ ಚೆರೂಯಳ ಮಗನಾದ ಯೋವಾಬನು ನನಗೂ ಇಸ್ರಾಯೇಲಿನ ಸೈನ್ಯಗಳಿಗೆ ಇಬ್ಬರು ಅಧಿಪತಿಗಳಾದ ನೇರನ ಮಗನಾದ ಅಬ್ನೇರ ನಿಗೂ ಯೇತ್ರನ ಮಗನಾದ ಅಮಾಸನಿಗೂ ಏನು ಮಾಡಿದನೋ ನೀನು ಬಲ್ಲೆ. ಯಾಕಂದರೆ ಅವನು ಅವರನ್ನು ಕೊಂದು ಸಮಾಧಾನದಲ್ಲಿ ಯುದ್ಧದ ರಕ್ತ ವನ್ನು ಚೆಲ್ಲಿ ತನ್ನ ನಡುವಿನಲ್ಲಿರುವ ನಡುಕಟ್ಟಿನ ಮೇಲೆಯೂ ತನ್ನ ಪಾದಗಳಲ್ಲಿರುವ ಪಾದರಕ್ಷೆಗಳ ಮೇಲೆಯೂ ಯುದ್ಧದ ರಕ್ತವನ್ನು ಹಚ್ಚಿಕೊಂಡನು.
Cross references
ತನ್ನ ನೆರೆಯವನನ್ನು ರಹಸ್ಯವಾಗಿ ಹೊಡೆಯುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
ಚೆರೂಯಳ ಮೂವರು ಮಕ್ಕಳಾದ ಯೋವಾ ಬನೂ ಅಬಿಷೈಯೂ ಅಸಾಹೇಲನೂ ಅಲ್ಲಿ ಇದ್ದರು. ಅಸಾಹೇಲನು ಅಡವಿಯ ಜಿಂಕೆಯ ಹಾಗೆ ಪಾದ ತ್ವರಿತನಾಗಿದ್ದನು.
ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.
ನಾನು ಅರಸನಾಗಿ ಅಭಿಷೇಕಿಸ ಲ್ಪಟ್ಟಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಕುಮಾರ ರಾದ ಈ ಮನುಷ್ಯರು ನನಗೆ ಕಠಿಣರಾಗಿದ್ದಾರೆ. ಕೆಟ್ಟತನ ಮಾಡುವವನಿಗೆ ಕರ್ತನು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವನು ಅಂದನು.
ಅಬ್ಷಾಲೋಮನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೈನ್ಯದ ಅಧಿಪತಿಯನ್ನಾಗಿ ನೇಮಿಸಿದನು. ನಾಹಾಷನಿಗೆ ಮಗಳಾದ ಅಬೀಗೈಲಳ ಬಳಿಗೆ ಪ್ರವೇಶಿಸಿದ ಇಸ್ರಾಯೇಲ್ಯನಾದ ಇತ್ರನೆಂಬ ಹೆಸರುಳ್ಳ ಈ ಅಮಾಸನು ಒಬ್ಬ ಮಗನಾಗಿದ್ದನು. ಅಬೀಗೈಲಳು ಯೋವಾಬನ ತಾಯಿಯಾದ ಚೆರೂಯಳಿಗೆ ಸಹೋದರಿಯಾಗಿದ್ದಳು.
ಆದರೆ ಅರಸನು ಯೋವಾಬನಿಗೂ ಅಬೀ ಷೈಯನಿಗೂ ಇತ್ತೈಗೂ ಆಜ್ಞಾಪಿಸಿ--ನನಗೋಸ್ಕರ ಯೌವನಸ್ಥನಾದ ಅಬ್ಷಾಲೋಮನನ್ನು ಕರುಣಿಸಿರಿ ಅಂದನು. ಹೀಗೆ ಅರಸನು ಅಬ್ಷಾಲೋಮನನ್ನು ಕುರಿತು ಅಧಿಪತಿಗಳೆಲ್ಲರಿಗೂ ಕೊಟ್ಚ ಆಜ್ಞೆಯನ್ನು ಜನರೆಲ್ಲರೂ ಕೇಳಿದರು.
ಆದರೆ ಆ ಮನುಷ್ಯನು ಯೋವಾಬನಿಗೆ--ನನ್ನ ಕೈಯಲ್ಲಿ ಸಾವಿರ ಶೆಕೇಲ್ ಬೆಳ್ಳಿಯನ್ನು ಕೊಟ್ಟರೂ ನಾನು ಅರಸನ ಮಗನ ಮೇಲೆ ನನ್ನ ಕೈ ಚಾಚುವದಿಲ್ಲ. ಯಾಕಂದರೆಯೌವನಸ್ಥನಾದ ಅಬ್ಷಾಲೋಮನನ್ನು ಯಾರೂ ಮುಟ್ಟದ ಹಾಗೆ ಜಾಗ್ರತೆಯಾಗಿರ್ರಿ ಎಂದು ಅರಸನು ನಿನಗೂ ಅಬೀಷೈನಿಗೂ ಇತ್ತೈಗೂ ನಮಗೆ ಕೇಳಿಸು ವಂತೆ ಆಜ್ಞಾಪಿಸಿದ್ದನು.
ಆಗ ಯೋವಾಬನು--ನಾನು ಹೀಗೆ ನಿನ್ನ ಮುಂದೆ ಆಲಸ್ಯಮಾಡೆನು ಎಂದು ಹೇಳಿ ಮೂರು ಈಟಿಗಳನ್ನು ತನ್ನ ಕೈಯಲ್ಲಿ ತಕ್ಕೊಂಡು ಅಬ್ಷಾಲೋಮನು ಇನ್ನೂ ಏಲಾಮರದ ಮಧ್ಯದಲ್ಲಿ ಜೀವದಿಂದಿರುವಾಗ ಅವು ಗಳನ್ನು ಅವನ ಎದೆಗೆ ತಿವಿದನು.
ಆಗ ಯೋವಾಬನು ಮನೆಯೊಳಗೆ ಅರಸನ ಬಳಿಗೆ ಬಂದು ಅವನಿಗೆ--
ಎರಡನೇ ಸಾರಿ ಹೊಡೆಯಲಿಲ್ಲ, ಅವನು ಸತ್ತನು. ಯೋವಾಬನೂ ಅವನ ಸಹೋದರನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿದರು.
ಅಬ್ಷಾಲೋಮನ ತರು ವಾಯ ಅವನ ತಾಯಿ ಅವನನ್ನು ಹೆತ್ತಳು. ಅವನು ಚೆರೂಯಳ ಮಗನಾದ ಯೋವಾಬನ ಸಂಗಡಲೂ ಯಾಜಕನಾದ ಎಬ್ಯಾತಾರನ ಸಂಗಡಲೂ ಮಾತನಾ ಡಿದನು; ಅವರು ಅದೋನೀಯನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾಗಿದ್ದರು.
ಆದರೆ ಇಗೋ, ಅರಸನಾಗಿರುವ ನನ್ನ ಒಡೆಯ ನಾದ ನೀನು ಅರಿಯದೆ ಇರುವಾಗ ಅದೋನೀಯನು ಆಳುತ್ತಾನೆ.
ಆಗ ಕರ್ತನು ಅವನ ತಲೆಯ ಮೇಲೆ ಅವನ ರಕ್ತಾಪರಾಧ ವನ್ನು ಬರಮಾಡುವನು. ನನ್ನ ತಂದೆಯಾದ ದಾವೀ ದನು ತಿಳಿಯದಿರುವಾಗ ಅವನು ತನಗಿಂತ ನೀತಿಯುಳ್ಳ ಉತ್ತಮರಾದ ಇಬ್ಬರ ಮೇಲೆ ಬಿದ್ದು ಅವರನ್ನು ಕತ್ತಿ ಯಿಂದ ಕೊಂದನು. ಅವರು ಯಾರಂದರೆ, ಇಸ್ರಾ ಯೇಲಿನ ಸೈನ್ಯಕ್ಕೆ ಅಧಿಪತಿಯಾಗಿದ್ದ ನೇರನ ಮಗನಾದ ಅಬ್ನೇರನೂ ಯೆಹೂದ ಸೈನ್ಯಕ್ಕೆ ಅಧಿಪತಿಯಾಗಿದ್ದ ಯೆತೆರನ ಮಗನಾದ ಅಮಾಸನೂ.
ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡಪ್ರಾಣಿಗಳ ರಕ್ತವು ಸಿಕ್ಕಿದೆ; ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೇನೆ.
ನಿಮ್ಮ ಸಹೋದರರೆಲ್ಲರನ್ನೂ ಎಫ್ರಾಯಾಮಿನ ಎಲ್ಲಾ ಸಂತಾನವನ್ನೂ ಹೊರಗೆ ಹಾಕಿದ ಹಾಗೆ ನಿಮ್ಮನ್ನು ನನ್ನ ಸಮ್ಮುಖದಿಂದ ಹೊರಗೆ ಹಾಕುವೆನು.
ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ; ದೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ;