Home Bibles 1 ಅರಸುಗಳು 20:10 · ಕನ್ನಡ ಬೈಬಲ್
1 ಅರಸುಗಳು 20:10 · ಕನ್ನಡ ಬೈಬಲ್

ಆಗ ಬೆನ್ಹದದನು ಕಳುಹಿಸಿ--ನನ್ನನ್ನು ಹಿಂಬಾಲಿಸುವ ಸಮಸ್ತ ಜನರು ಕೈತುಂಬ ತಕ್ಕೊಳ್ಳಲು ಸಮಾರ್ಯದ ಧೂಳು ಸಾಕಾದರೆ ದೇವರುಗಳು ನನಗೆ ಹೀಗೆಯೂ ಇನ್ನೂ ಹೆಚ್ಚಾಗಿಯೂ ಮಾಡಲಿ ಎಂದು ಅವನಿಗೆ ಹೇಳಿ ಕಳುಹಿಸಿದನು.

Cross references

ನಿರ್ಗಮಕಾಂಡ 11:8

ಆಗ ನಿನ್ನ ದಾಸರಾದ ಇವರೆಲ್ಲರೂ ನನ್ನ ಬಳಿಗೆ ಬಂದು ನನಗೆ ಅಡ್ಡಬಿದ್ದು ನನಗೆ--ನೀನೂ ನಿನ್ನನ್ನು ಹಿಂಬಾಲಿಸುವ ಜನರೆಲ್ಲರೂ ಹೊರಗೆ ಹೋಗಿರಿ ಎಂದು ಹೇಳುವರು. ತರುವಾಯ ನಾನು ಹೊರಗೆ ಹೋಗುವೆನು ಎಂದು ಹೇಳಿ ಮೋಶೆಯು ಕೋಪಾವೇಶವುಳ್ಳವನಾಗಿ ಫರೋಹನ ಬಳಿಯಿಂದ ಹೊರಟುಹೋದನು.

ನ್ಯಾಯಾಧಿಪತಿಗಳು 4:10

ಬಾರಾಕನು ಜೆಬುಲೂನ್ಯರನ್ನೂ ನಫ್ತಾಲ್ಯರಯನ್ನೂ ಕೆದೆಷಿಗೆ ಕರೆದನು; ಅವನು ಹತ್ತು ಸಾವಿರ ಜನರ ಸಹಿತವಾಗಿ ಹೋದನು. ದೆಬೋರಳು ಅವನ ಸಂಗಡ ಹೋದಳು.

2 ಸಮುವೇಲ 17:12

ಆಗ ನಾವು ಅವನನ್ನು ಕಂಡು ಕೊಳ್ಳುವ ಸ್ಥಳದಲ್ಲಿ ಅವನ ಮೇಲೆ ಬಂದು ಭೂಮಿಯ ಮೇಲೆ ಮಂಜು ಬೀಳುವ ಹಾಗೆ ಅವನ ಮೇಲೆ ಬೀಳುವೆವು. ಅವನೂ ಅವನ ಸಂಗಡವಿರುವ ಎಲ್ಲಾ ಜನರಲ್ಲಿ ಒಬ್ಬನಾದರೂ ಉಳಿಯುವದಿಲ್ಲ.

1 ಅರಸುಗಳು 2:23

ಅರಸನಾದ ಸೊಲೊಮೋನನು--ಅದೋನೀಯನು ಈ ಮಾತನ್ನು ತನ್ನ ಪ್ರಾಣಕ್ಕೆ ವಿರೋಧವಾಗಿ ಹೇಳದೆ ಇದ್ದರೆ ದೇವರು ನನಗೆ ಹಾಗೆಯೂ ಅದಕ್ಕಿಂತ ಅಧಿಕವಾಗಿಯೂ ಮಾಡ ಲೆಂದು ಕರ್ತನ ಹೆಸರಿನಲ್ಲಿ ಆಣೆ ಇಟ್ಟನು.

1 ಅರಸುಗಳು 19:2

ಈಜೆಬೆಲಳು ಎಲೀಯನ ಬಳಿಗೆ ದೂತ ನನ್ನು ಕಳುಹಿಸಿ--ನಾನು ನಾಳೆ ಇಷ್ಟು ಹೊತ್ತಿಗೆ ಅವ ರಲ್ಲಿರುವ ಒಬ್ಬೊಬ್ಬನ ಪ್ರಾಣದ ಹಾಗೆ ನಿನ್ನ ಪ್ರಾಣಕ್ಕೂ ಮಾಡದೆ ಹೋದರೆ ದೇವರುಗಳು ನನಗೆ ಹೀಗೆಯೂ ಹೆಚ್ಚಾಗಿಯೂ ಮಾಡಲಿ ಎಂದು ಹೇಳಿದಳು.

2 ಅರಸುಗಳು 18:24

ಹಾಗೆ ಇಲ್ಲದಿದ್ದರೆ ನನ್ನ ಯಜಮಾನನ ಚಿಕ್ಕ ಸೇವಕರಲ್ಲಿ ಒಬ್ಬ ಅಧಿಪತಿಯ ಮುಖವನ್ನು ಹೇಗೆ ತಿರುಗಿಸುವಿ? ಆದರೆ ನೀನು ರಥಗಳಿಗೋಸ್ಕರವೂ ರಾಹುತರಿಗೋ ಸ್ಕರವೂ ಐಗುಪ್ತದ ಮೇಲೆ ಭರವಸ ಇಟ್ಟಿದ್ದೀಯೋ?

2 ಅರಸುಗಳು 19:23

ನಿನ್ನ ಸೇವಕರ ಮುಖಾಂತರ ಕರ್ತನನ್ನು ನಿಂದಿಸಿ ಹೇಳಿದ್ದು--ನಾನು ನನ್ನ ಹೆಚ್ಚಾದ ರಥಗಳಿಂದ ಪರ್ವತಗಳ ಶಿಖರಕ್ಕೂ ಲೆಬನೋನಿನ ಪಾರ್ಶ್ವಗಳಿಗೂ ಹೋಗಿ ಅದರ ಉನ್ನತ ವಾದ ದೇವದಾರುಗಳನ್ನೂ ಅದರ ಮುಖ್ಯವಾದ ತುರಾಯಿ ಮರಗಳನ್ನೂ ಕಡಿದು ಅದರ ಅಂಚಿನ ಗಡಿ ಸ್ಥಳಗಳಲ್ಲಿಯೂ ಅದರ ಫಲವುಳ್ಳ ಅಡವಿಯ ಲ್ಲಿಯೂ ಸೇರುತ್ತೇನೆ.

ಯೆಶಾಯ 10:13

ಅವನು ತನ್ನೊಳಗೆ--ನನ್ನ ಕೈಯ ಬಲ ದಿಂದಲೂ ಜ್ಞಾನದಿಂದಲೂ ಅದನ್ನು ಮಾಡಿದೆ; ನಾನು ವಿವೇಕಿ ಮತ್ತು ಜನಾಂಗಗಳ ಮೇರೆಗಳನ್ನು ಕಿತ್ತು ಅವರ ನಿಧಿಗಳನ್ನು ಕೊಳ್ಳೆಹೊಡೆದು ಅದರ ನಿವಾಸಿಗಳನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.

ಯೆಶಾಯ 37:24

ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ--ನನ್ನ ರಥಸಮೂಹದೊಡನೆ ಪರ್ವತ ಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ಭಾಗಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು, ಶ್ರೇಷ್ಠವಾದ ತುರಾಯಿ ಮರಗಳನ್ನು ಕಡಿದುಬಿಟ್ಟಿದ್ದೇನೆ; ಅಂಚಿನ ಉನ್ನತವಾದ ಸ್ಥಳವನ್ನೂ ಮತ್ತು ಅದರ ಕರ್ಮೇಲಿನ ಅಡವಿಯನ್ನೂ ಪ್ರವೇಶಿಸಿದ್ದೇನೆ;

ಅಪೋಸ್ತಲರ ಕೃತ್ಯಗಳು 23:12

ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು.

Interlinear

Choose Theme