ಅವನು ಪ್ರಾಂತಗಳ ಪ್ರಧಾನರ ಯೌವನಸ್ಥರನ್ನು ಲೆಕ್ಕ ಮಾಡಿದಾಗ ಅವರು ಇನ್ನೂರ ಮೂವತ್ತೆರಡು ಜನರಾಗಿದ್ದರು. ಅವರ ತರುವಾಯ ಇಸ್ರಾಯೇಲ್ ಮಕ್ಕಳಾದ ಸಕಲ ಜನರನ್ನು ಲೆಕ್ಕ ಮಾಡಿದಾಗ ಏಳು ಸಾವಿರ ಜನರಾಗಿದ್ದರು.
Cross references
ಆಗ ಕರ್ತನು ಗಿದ್ಯೋನನಿಗೆ--ನೆಕ್ಕಿ ಕುಡಿದ ಆ ಮುನ್ನೂರು ಜನರಿಂದ ನಾನು ನಿಮ್ಮನ್ನು ರಕ್ಷಿಸಿ ಮಿದ್ಯಾನ್ಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು; ಇತರ ಜನರೆಲ್ಲಾ ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ ಅಂದನು.
ಆ ಮುನ್ನೂರು ಜನರನ್ನು ಮೂರು ಗುಂಪಾಗಿ ವಿಭಾಗಿಸಿ ಎಲ್ಲರ ಕೈಯಲ್ಲಿ ತುತೂರಿಗಳನ್ನೂ ಬರಿದಾದ ಕೊಡಗಳನ್ನೂ ಅವುಗಳಲ್ಲಿ ಇಡುವ ಪಂಜುಗಳನ್ನೂ ಕೊಟ್ಟು ಅವರಿಗೆ ಹೇಳಿದ್ದೇ ನಂದರೆ--
ಸೌಲನು ಗಿಬೆಯ ಕಟ್ಟಕಡೇ ಮೇರೆಯಾದ ಮಿಗ್ರೋನಿನಲ್ಲಿರುವ ದಾಳಿಂಬರ ಗಿಡದ ಕೆಳಗಿದ್ದನು. ಅವನ ಸಂಗಡ ಸುಮಾರು ಆರು ನೂರು ಜನರಿದ್ದರು.
ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯೌವನಸ್ಥನಿಗೆ--ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿಹೋಗೋಣ ಬಾ; ಒಂದು ವೇಳೆ ದೇವರು ನಮಗೋಸ್ಕರ ಕಾರ್ಯ ನಡಿಸುವನು. ಯಾಕಂದರೆ ಅನೇಕ ಜನರಿಂದಾದರೂ ಸ್ವಲ್ಪ ಜನರಿಂದಾದರೂ ರಕ್ಷಿಸುವದಕ್ಕೆ ಕರ್ತನಿಗೆ ಯಾವ ಆಟಂಕವಿಲ್ಲ ಅಂದನು.
ಆದರೆ ಬಾಳನಿಗೆ ಬೊಗ್ಗದೆ ಇರುವ ಸಕಲ ಮೊಣ ಕಾಲುಗಳೂ ಅದನ್ನು ಮುದ್ದಿಡದ ಸಕಲ ಬಾಯಿಗಳೂ ಆಗಿರುವ ಏಳು ಸಾವಿರ ಮಂದಿಯನ್ನು ಇಸ್ರಾಯೇ ಲಿನಲ್ಲಿ ನನಗೋಸ್ಕರ ಉಳಿಸಿಕೊಂಡಿದ್ದೇನೆ ಅಂದನು.
ಆದರೂ ಯೆಹೋವಾಹಾಜನಿಗೆ ಐವತ್ತು ಕುದುರೆ ರಾಹುತ ರನ್ನೂ ಹತ್ತು ರಥಗಳನ್ನೂ ಹತ್ತು ಸಾವಿರ ಕಾಲಾಳು ಗಳನ್ನೂ ಹೊರತು ಜನರಲ್ಲಿ ಏನೂ ಬಿಡಲಿಲ್ಲ. ಯಾಕಂದರೆ ಅರಾಮ್ಯರ ಅರಸನು ಅವರನ್ನು ಸಂಹ ರಿಸಿ ತುಳಿಯಲ್ಪಟ್ಟ ಧೂಳಿನ ಹಾಗೆ ಮಾಡಿದ್ದನು.
ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ; ಓ ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು.
ಯಾವ ಅರಸನೂ ಅಧಿಕವಾದ ಸೈನ್ಯದಿಂದ ರಕ್ಷಿಸಲ್ಪಡುವದಿಲ್ಲ. ಪರಾಕ್ರಮ ಶಾಲಿಯು ಅಧಿಕಶಕ್ತಿಯಿಂದ ಬಿಡಿಸಲ್ಪಡುವದಿಲ್ಲ.
ಆಗ ಕರ್ತನ ಕೋಪವು ಆತನ ಜನರಿಗೆ ವಿರೋಧವಾಗಿ ಉರಿ ಯಿತು; ಆತನು ತನ್ನ ಸ್ವಂತ ಬಾಧ್ಯತೆಯನ್ನು ಅಸಹ್ಯಿಸಿ ಕೊಂಡು