ಆದದರಿಂದ ಇಸ್ರಾಯೇಲಿನ ಮಕ್ಕಳು ಲೆಕ್ಕ ಮಾಡಲ್ಪಟ್ಟು ಬೇಕಾದದ್ದನ್ನು ಸಿದ್ಧಮಾಡಿಕೊಂಡು ಅವರಿಗೆ ಎದುರಾಗಿ ಹೊರಟರು. ಇಸ್ರಾಯೇಲಿನ ಮಕ್ಕಳು ಅವರಿಗೆದುರಾಗಿ ದಂಡಿಳಿದಿರುವಾಗ ಅವರು ಮೇಕೆ ಮರಿಗಳ ಎರಡು ಮಂದೆಗಳ ಹಾಗಿದ್ದರು; ಆದರೆ ಅರಾಮ್ಯರು ದೇಶವನ್ನು ತುಂಬಿಕೊಂಡಿದ್ದರು.
Cross references
ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?
ನೀವು ದಂಡಿನ ಮಧ್ಯದಲ್ಲಿ ಹೋಗಿ ಜನರಿಗೆ ಆಜ್ಞಾಪಿಸಿ ಹೇಳಬೇಕಾದದ್ದೇನಂದರೆ--ನಿಮ ಗೋಸ್ಕರ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ; ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿರುವ ದೇಶವನ್ನು ನೀವು ಸ್ವಾಧೀನಮಾಡಿಕೊಳ್ಳಲು ಇನ್ನು ಮೂರು ದಿವಸಗಳಲ್ಲಿ ಯೊರ್ದನನ್ನು ದಾಟಿ ಹೋಗ ಬೇಕು ಅಂದನು.
ಅವರು ತಮ್ಮ ಕುರಿದನಗಳೂ ಡೇರೆ ಗಳೂ ಸಹಿತವಾಗಿ ಮಿಡಿತೆಗಳ ಹಾಗೆ ಗುಂಪಾಗಿ ಬಂದರು. ಅವರಿಗೂ ಅವರ ಒಂಟೆಗಳಿಗೂ ಎಣಿಕೆ ಇರಲಿಲ್ಲ. ಹೀಗೆ ಅವರು ಅದನ್ನು ಕೆಡಿಸಿಬಿಡುವದಕ್ಕೆ ದೇಶದಲ್ಲಿ ಬಂದರು.
ಆಗ ಜನರು ಆಹಾರವನ್ನೂ ತಮ್ಮ ತುತೂರಿಗಳನ್ನೂ ತಮ್ಮ ಕೈಗಳಲ್ಲಿ ತೆಗೆದುಕೊಂಡರು; ಆದರೆ ಅವನು ಇಸ್ರಾಯೇಲ್ಯರನ್ನೆಲ್ಲಾ ಅವರವರ ಗುಡಾರಗಳಿಗೆ ಕಳುಹಿಸಿ ಆ ಮುನ್ನೂರು ಜನರನ್ನು ಇಟ್ಟುಕೊಂಡನು. ಮಿದ್ಯಾನ್ಯರ ದಂಡು ಅವನಿಗೆ ಕೆಳ ಭಾಗವಾದ ತಗ್ಗಿನಲ್ಲಿ ಇತ್ತು.
ಮಿದ್ಯಾನ್ಯರೂ ಅಮಾಲೇಕ್ಯರೂ ಸಕಲ ಮೂಡ ಣದ ಮಕ್ಕಳೂ ಮಿಡತೆಗಳಷ್ಟು ಗುಂಪಾಗಿ ತಗ್ಗಿನಲ್ಲಿ ಇಳು ಕೊಂಡಿದ್ದದರು. ಅವರ ಒಂಟೆಗಳಿಗೆ ಲೆಕ್ಕವಿಲ್ಲ. ಅವು ಸಮುದ್ರದ ಮರಳಿನ ಹಾಗೆ ಗುಂಪಾಗಿದ್ದವು.
ಆಗ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಲು ಫಿಲಿಷ್ಟಿಯರ ಮೂವತ್ತು ಸಾವಿರ ರಥಗಳೂ ಆರು ಸಾವಿರ ಕುದುರೆ ರಾಹುತರೂ ಸಮುದ್ರತೀರದ ಮರಳಷ್ಟು ಜನವೂ ಕೂಡಿಕೊಂಡು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಇಳುಕೊಂಡರು.
ಸೌಲನು ಗಿಬೆಯ ಕಟ್ಟಕಡೇ ಮೇರೆಯಾದ ಮಿಗ್ರೋನಿನಲ್ಲಿರುವ ದಾಳಿಂಬರ ಗಿಡದ ಕೆಳಗಿದ್ದನು. ಅವನ ಸಂಗಡ ಸುಮಾರು ಆರು ನೂರು ಜನರಿದ್ದರು.
ಆ ದಿನದಲ್ಲಿ ಯೋರಾಮನು ಸಮಾರ್ಯದಿಂದ ಹೊರಟು ಹೋಗಿ ಇಸ್ರಾಯೇಲ್ಯರನ್ನು ಲೆಕ್ಕಿಸಿದನು.
ಬಲಗೊಳ್ಳಿರಿ; ಧೈರ್ಯ ವಾಗಿರ್ರಿ; ಅಶ್ಶೂರಿನ ಅರಸನ ನಿಮಿತ್ತವೂ ಅವನ ಸಂಗಡ ಕೂಡಿರುವ ಮಹಾಗುಂಪಿನ ನಿಮಿತ್ತವೂ ಭಯ ಪಡಬೇಡಿರಿ; ಹೆದರಬೇಡಿರಿ. ಯಾಕಂದರೆ ಅವನ ಸಂಗಡ ಇರುವವರಿಗಿಂತ ನಮ್ಮ ಸಂಗಡ ಅನೇಕರು ಇದ್ದಾರೆ.
ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನೋಡಿದ್ದೇನಂದರೆ, ವೇಗಿಗಳಿಗೆ ಓಟವೂ ಪರಾಕ್ರಮ ಶಾಲಿಗಳಿಗೆ ಯುದ್ಧವೂ ಜ್ಞಾನಿಗಳಿಗೆ ರೊಟ್ಟಿಯೂ ವಿವೇಕಿಗಳಿಗೆ ಐಶ್ವರ್ಯವೂ ಪ್ರವೀಣರಿಗೆ ದಯೆಯೂ ಸಿಗುವದಿಲ್ಲ. ಕಾಲವೂ ಗತಿಯೂ ಅವರೆಲ್ಲರಿಗೆ ಸಂಭವಿ ಸುತ್ತವೆ.