ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು.
Cross references
ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳು ಸಾಕ್ಷಿ ಹೇಳಬಾರದು.
ಇಸ್ರಾಯೇಲ್ ಸ್ತ್ರೀಯ ಮಗನು ಕರ್ತನ ನಾಮವನ್ನು ದೂಷಿಸಿ ಶಪಿಸಿ ದನು. ಅವರು ಅವನನ್ನು ಮೋಶೆಯ ಬಳಿಗೆ ತಂದರು; (ಅವನ ತಾಯಿಯ ಹೆಸರು ದಾನನ ಕುಲದವನಾದ ದಿಬ್ರೀಯ ಮಗಳಾದ ಶೆಲೋವಿಾತ್).
ಆಗ ಕರ್ತನು ಮೋಶೆಗೆ--ಆ ಮನುಷ್ಯನು ಖಂಡಿತವಾ ಗಿಯೂ ಸಾಯಲೇಬೇಕು; ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆಯಬೇಕು ಎಂದು ಹೇಳಿದನು.
ಆಗ ಸಭೆಯೆಲ್ಲಾ ಅವನನ್ನು ಪಾಳೆಯದ ಹೊರಗೆ ತಕ್ಕೊಂಡು ಹೋಗಿ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಸಾಯುವ ಹಾಗೆ ಅವನಿಗೆ ಕಲ್ಲೆಸೆದರು.
ನಿನ್ನ ನೆರೆಯವನ ಮೇಲೆ ಸುಳ್ಳುಸಾಕ್ಷಿ ಹೇಳಬೇಡ.
ಐಗುಪ್ತ ದೇಶದೊಳಗಿಂದಲೂ ದಾಸತ್ವದ ಮನೆಯೊ ಳಗಿಂದಲೂ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನ ಬಳಿಯಿಂದ ನಿನ್ನನ್ನು ದೂಡುವದಕ್ಕೆ ಅವನು ಪ್ರಯತ್ನಮಾಡಿದ್ದರಿಂದ ಅವನು ಸಾಯುವಹಾಗೆ ಕಲ್ಲೆಸೆಯಬೇಕು.
ತಪ್ಪಾದ ಸಾಕ್ಷಿಯವನು ಒಬ್ಬ ಮನುಷ್ಯನ ಮೇಲೆ ಅವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಕೊಡುವದಕ್ಕೆ ಎದ್ದರೆ
ಆಗ ಅವನ ಪಟ್ಟಣದ ಜನರೆಲ್ಲರು ಅವನು ಸಾಯುವಹಾಗೆ ಅವನನ್ನು ಕಲ್ಲೆಸೆಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕ ಬೇಕು; ಇಸ್ರಾಯೇಲ್ಯರಲ್ಲಿ ಇದನ್ನು ಕೇಳಿ ಭಯ ಪಡುವರು.
ಆ ಹುಡುಗಿ ಯನ್ನು ಅವಳ ತಂದೆಯ ಮನೆಯ ಬಾಗಲಿಗೆ ತರಬೇಕು; ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು; ಅವಳು ತಂದೆಯ ಮನೆಯಲ್ಲಿ ಸೂಳೆತನ ಮಾಡಿ ಇಸ್ರಾಯೇಲಿನಲ್ಲಿ ದುಷ್ಟತನವನ್ನು ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು;
ಅವರಿಬ್ಬರನ್ನು ಆ ಪಟ್ಟಣದ ಬಾಗಲಿನ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು; ಆ ಹುಡುಗಿಯು ಪಟ್ಟಣದಲ್ಲಿ ಇದ್ದಾಗ್ಯೂ ಕೂಗದೆ ಇದ್ದದ್ದರಿಂದಲೂ ಆ ಮನುಷ್ಯನು, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸ ಬೇಕು. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದು ಹಾಕಬೇಕು.
ಆಗ ಯೆಹೋಶುವನೂ ಅವ ನೊಂದಿಗೆ ಇಸ್ರಾಯೇಲ್ಯರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಆ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಕುಮಾರರನ್ನೂ ಕುಮಾರ್ತೆಯ ರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ತಗ್ಗಿಗೆ ತಂದರು.
ನಾನೂ ನೀನೂ ಅವನ ತಂದೆಯಾದ ಅಹಾಬನ ಹಿಂದೆ ಕುದುರೆ ಏರಿಕೊಂಡು ಹೋಗುತ್ತಿರುವಾಗ ಕರ್ತನು ಈ ಭಾರವನ್ನು ಅವನ ಮೇಲೆ ಹೊರಿಸಿದನೆಂದು ಜ್ಞಾಪಕಮಾಡಿಕೋ. ಏನಂದರೆ--ನಾಬೋತನ ರಕ್ತವನ್ನೂ ಅವನ ಕುಮಾರರ ರಕ್ತವನ್ನೂ ನಿನ್ನೆ ನಾನು ನಿಶ್ಚಯವಾಗಿ ನೋಡಿದೆನಲ್ಲಾ ಎಂದು ಕರ್ತನು ಹೇಳುತ್ತಾನೆ. ಇದಲ್ಲದೆ--ಇದೇ ಹೊಲದಲ್ಲಿ ನಿನಗೆ ಮುಯ್ಯಿಗೆ ಮುಯ್ಯಿ ಕೊಡುವೆ ನೆಂದು ಕರ್ತನು ಹೇಳುತ್ತಾನೆ. ಆದದರಿಂದ ಕರ್ತನ ವಾಕ್ಯದ ಪ್ರಕಾರ ಅವನನ್ನು ಎತ್ತಿಕೊಂಡು ಆ ಹೊಲ ದಲ್ಲಿ ಹಾಕಿಬಿಡು ಅಂದನು.
ಔತಣದ ದಿನಗಳು ಮುಗಿದ ಬಳಿಕ ಯೋಬನು ಅವರನ್ನು ಕರೆಕಳುಹಿಸಿ ಅವರನ್ನು ಶುದ್ಧಿ ಮಾಡಿ ಬೆಳಿಗ್ಗೆ ಎದ್ದು ಅವರೆಲ್ಲರ ಲೆಕ್ಕದ ಪ್ರಕಾರ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಯೋಬನುಒಂದುವೇಳೆ ನನ್ನ ಕುಮಾರರು ಪಾಪ ಮಾಡಿ ತಮ್ಮ ಹೃದಯಗಳಲ್ಲಿ ದೇವರನ್ನು ಶಪಿಸಿರಬಹುದು ಅಂದು ಕೊಂಡನು. ಹೀಗೆಯೇ ಯೋಬನು ಕ್ರಮವಾಗಿ ಮಾಡುತ್ತಿದ್ದನು.
ಆದರೆ ನಿನ್ನ ಕೈ ಚಾಚಿ ಅವನಿಗಿದ್ದದ್ದನ್ನೆಲ್ಲಾ ಮುಟ್ಟು; ಅವನು ನಿನ್ನೆದುರಿನಲ್ಲಿಯೇ ನಿನ್ನನ್ನು ಶಪಿಸುವನು ಅಂದನು.
ಆಗ ಅವನ ಹೆಂಡತಿಯು ಅವನಿಗೆ--ಇನ್ನೂ ಯಥಾರ್ಥ ತ್ವದಲ್ಲಿ ಉಳಿದಿದ್ದೀಯೋ? ದೇವರನ್ನು ಶಪಿಸಿ ಸಾಯಿ ಅಂದಳು.
ಅದರ ಫಲವನ್ನು ನಾನು ಹಣಕೊಡದೆ ತಿಂದಿದ್ದರೆ, ಅದರ ಯಾಜಮಾನರ ಪ್ರಾಣವನ್ನು ತೆಗೆದುಬಿಟ್ಟಿದ್ದರೆ,ಗೋಧಿಗೆ ಬದಲಾಗಿ ಮುಳ್ಳೂ ಜವೆಗೋಧಿಗೆ ಬದಲಾಗಿ ಕಳೆಯೂ ಬೆಳೆಯಲಿ. ಯೋಬನ ನುಡಿಗಳು ಮುಗಿದವು.
ನನ್ನ ವೈರಿಗಳ ಇಷ್ಟಕ್ಕೆ ನನ್ನನ್ನು ಕೊಟ್ಟುಬಿಡಬೇಡ; ಸುಳ್ಳು ಸಾಕ್ಷಿಗಳೂ ಕ್ರೂರತ್ವದ ಶ್ವಾಸಬಿಡುವವರೂ ನನಗೆ ವಿರೋಧವಾಗಿ ಎದ್ದಿದ್ದಾರೆ.
ಸುಳ್ಳು ಸಾಕ್ಷಿಗಳು ಎದ್ದು ನಾನು ತಿಳಿಯದವುಗಳನ್ನು ನನ್ನ ಮೇಲೆ ಹೊರಿಸಿ ದರು.
ಅಸತ್ಯಗಳನ್ನು ಆಡುವ ಸುಳ್ಳು ಸಾಕ್ಷಿ ಮತ್ತು ಸಹೋ ದರರಲ್ಲಿ ವೈಷಮ್ಯವನ್ನು ಬಿತ್ತುವವನು.
ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರನು.
ಸುಳ್ಳು ಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ನಾಶವಾ ಗುವನು.
ಭಕ್ತಿಹೀ ನನ ಸಾಕ್ಷಿಯು ನ್ಯಾಯತೀರ್ಪನ್ನು ಗೇಲಿಮಾಡುತ್ತವೆ. ದುಷ್ಟನ ಬಾಯಿಯು ದ್ರೋಹವನ್ನು ನುಂಗುವದು.ಪರಿಹಾಸ್ಯಗಾರರಿಗೆ ನ್ಯಾಯತೀರ್ಪುಗಳೂ ಬುದ್ಧಿ ಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.
ತನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳುವವನು ಚಮಟಿಗೆ, ಕತ್ತಿ, ಮತ್ತು ಹರಿತವಾದ ಬಾಣವಾಗಿದ್ದಾನೆ.
ಹೀಗೆ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನಾನು ಯೋಚಿಸಿದೆನು; ಹಿಂಸಿಸಲ್ಪಟ್ಟವರ ಕಣ್ಣೀರನ್ನೂ ಅವರನ್ನು ಆದರಿಸುವವರು ಯಾರೂ ಇಲ್ಲದಿರುವ ದನ್ನೂ ನೋಡಿದೆನು; ಅವರನ್ನು ಹಿಂಸೆಪಡಿಸುವವರ ಕಡೆಗೆ ಶಕ್ತಿ ಇತ್ತು; ಆದರೆ ಇವರನ್ನು ಆದರಿಸುವವನು ಯಾವನೂ ಇಲ್ಲ.
ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.
ಅವರು ಘೋರ ಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯು ವರು; ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜ ನನ್ನೂ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.ಅವರು ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವದು; ಅವರು ಕಾರ್ಗತ್ತಲೆಗೆ ತಳ್ಳಲ್ಪ ಡುವರು.
ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ-- ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯ ದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.
ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಆಗ ಇಗೋ, ಶಾಸ್ತ್ರಿಗಳಲ್ಲಿ ಕೆಲವರು-- ಈ ಮನುಷ್ಯನು ದೇವದೂಷಣೆ ಮಾಡುತ್ತಾನೆ ಎಂದು ತಮ್ಮತಮ್ಮಲ್ಲಿ ಅಂದುಕೊಂಡರು.
ಅನೇಕರು ಆತನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿಯು ಒಂದ ಕ್ಕೊಂದು ಒಪ್ಪಲಿಲ್ಲ.
ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
ಅಂದಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಪಟ್ಟನು. ಆದರೆ ಯೆಹೂದ್ಯರು--ನೀನು ಈ ಮನುಷ್ಯನನ್ನು ಹೋಗಗೊಡಿಸಿದರೆ ಕೈಸರನಿಗೆ ಸ್ನೇಹಿತನಲ್ಲ; ತನ್ನನ್ನು ಅರಸನನ್ನಾಗಿ ಮಾಡಿಕೊಳ್ಳು ವವನು ಕೈಸರನಿಗೆ ವಿರೋಧವಾಗಿ ಮಾತನಾಡುತ್ತಾನೆ ಎಂದು ಕೂಗಿ ಹೇಳಿದರು.
ಅವರು ಸುಳ್ಳು ಸಾಕ್ಷಿ ಹೇಳುವ ಮನುಷ್ಯರನ್ನು ಸೇರಿಸಿಕೊಂಡು--ಇವನು ಮೋಶೆಗೆ ಮತ್ತು ದೇವರಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನು ಹೇಳುವದನ್ನು ನಾವು ಕೇಳಿದ್ದೇವೆ ಎಂದು ಅವರು ಹೇಳಿದರು.
ಆದರೆ ಅವರು ಮಹಾಶಬ್ದದಿಂದ ಕೂಗಿ ತಮ್ಮ ಕಿವಿಗಳನ್ನು ಮುಚ್ಚಿಕೊಂಡು ಒಮ್ಮನಸ್ಸಿನಿಂದ ಅವನ ಮೇಲೆ ಬಿದ್ದು
ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು.