ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು.
Cross references
ಅದಕ್ಕೆ ಆತನು--ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ತಿಂದಿದ್ದೀಯೋ? ಅನ್ನಲು
ಆಗ ಕರ್ತನು ಕಾಯಿನನಿಗೆ--ನಿನ್ನ ಸಹೋದರ ನಾದ ಹೇಬೆಲನು ಎಲ್ಲಿ ಅಂದನು. ಅದಕ್ಕವನು-- ನಾನು ಅರಿಯೆನು; ನನ್ನ ಸಹೋದರನನ್ನು ನಾನು ಕಾಯುವವನೋ ಅಂದನು.
ಆಗ ಅದೋನೀಬೆಜೆಕನು--ನಾನು ಕೈಕಾಲು ಗಳ ಹೆಬ್ಬೆರಳುಗಳನ್ನು ಕತ್ತರಿಸಿದ ಎಪ್ಪತ್ತು ಮಂದಿ ಅರಸುಗಳು ನನ್ನ ಮೇಜಿನ ಕೆಳಗೆ ತಮ್ಮ ಆಹಾರ ವನ್ನು ಕೂಡಿಸಿದರು; ನಾನು ಹೇಗೆ ಮಾಡಿದೆನೋ ಹಾಗಾಯೇ ದೇವರು ನನಗೆ ಮುಯ್ಯಿಗೆ ಮುಯ್ಯಿಮಾಡಿದ್ದಾನೆ ಅಂದನು. ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದರು; ಅವನು ಅಲ್ಲಿ ಸತ್ತನು.
ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ.
ಕರ್ತನು--ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಸಂಗಡ ಮಲಗುವನು.
ಆ ರಥವು ಸಮಾರ್ಯದ ಕೆರೆಯಲ್ಲಿ ತೊಳೆಯಲ್ಪಡುವಾಗ ಕರ್ತನು ಹೇಳಿದ ವಾಕ್ಯದ ಪ್ರಕಾರವೇ ನಾಯಿಗಳು ಅವನ ರಕ್ತವನ್ನು ನೆಕ್ಕಿದವು; ಹಾಗೆಯೇ ಅವರು ಕವಚವನ್ನು ತೊಳೆದರು.
ಎಲೀಷನು ಹಿರಿಯರ ಜೊತೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು; ಆಗ ಅರಸನು ತನ್ನ ಬಳಿಯಿಂದ ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಸೇವಕನು ಎಲೀಷನ ಬಳಿಗೆ ಬರುವದಕ್ಕಿಂತ ಮುಂಚೆ ಅವನು ಹಿರಿಯರಿಗೆ--ಈ ಕೊಲೆಪಾತಕನ ಮಗನು ನನ್ನ ತಲೆ ಯನ್ನು ತೆಗೆಯುವದಕ್ಕೆ ಕಳುಹಿಸಿದ್ದನ್ನು ನೋಡಿದಿರೋ? ನೋಡಿರಿ; ಆ ಸೇವಕನು ಬಂದ ಕೂಡಲೆ ಬಾಗಲು ಮುಚ್ಚಿ ಬಾಗಲ ಬಳಿಯಲ್ಲಿ ಅವನನ್ನು ಗಟ್ಟಿಯಾಗಿ ಹಿಡಿದುಕೊಳ್ಳಿರಿ. ಅವನ ಯಜಮಾನನ ಪಾದಗಳ ಶಬ್ದವು ಅವನ ಹಿಂದೆ ಇಲ್ಲವೋ ಅಂದನು.ಅವನು ಅವರ ಸಂಗಡ ಇನ್ನೂ ಮಾತನಾಡುತ್ತಿರುವಾಗ ಇಗೋ, ಆ ಸೇವಕನು ತನ್ನ ಬಳಿಗೆ ಬಂದು--ಇಗೋ, ಈ ಕೇಡು ಕರ್ತನಿಂದ ಉಂಟಾಯಿತು; ನಾನು ಇನ್ನೂ ಕರ್ತನನ್ನು ನಿರೀಕ್ಷಿಸುವದೇನು ಅಂದನು.
ಆಗ ಯೇಹುವು ತನ್ನ ಅಧಿಪತಿ ಯಾದ ಬಿದ್ಕರನಿಗೆ--ನೀನು ಅವನನ್ನು ತೆಗೆದುಕೊಂಡು ಹೋಗಿ ಇಜ್ರೇಲ್ಯನಾದ ನಾಬೋತನ ಪಾಲಾಗಿರುವ ಹೊಲದಲ್ಲಿ ಹಾಕಿಬಿಡು.
ಈ ಪತ್ರವು ಅವರ ಬಳಿಗೆ ಬಂದಾಗ ಏನಾಯಿತಂದರೆ, ಅವರು ಅರಸನ ಮಕ್ಕಳನ್ನು ಹಿಡಿದು ಎಪ್ಪತ್ತು ಮಂದಿಯನ್ನು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿಟ್ಟು ಇಜ್ರೇಲಿನಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು.
ಆದರೆ ಇವರೆಲ್ಲರನ್ನು ಸಂಹರಿಸಿದವರಾರು? ಕರ್ತನು ಅಹಾ ಬನ ಮನೆಯನ್ನು ಕುರಿತು ಹೇಳಿದ ಕರ್ತನ ಮಾತು ಗಳಲ್ಲಿ ಒಂದೂ ವ್ಯರ್ಥವಾಗುವದಿಲ್ಲವೆಂದು ನೀವು ತಿಳಿದುಕೊಳ್ಳಿರಿ. ಕರ್ತನು ತನ್ನ ಸೇವಕನಾದ ಎಲೀಯನ ಮುಖಾಂತರ ಹೇಳಿದ್ದನ್ನು ನೆರವೇರಿಸಿದ್ದಾನೆ ಅಂದನು.
ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ.
ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸು; ನನ್ನನ್ನು ಹಗೆಮಾಡುವವರಿಂದ ನನಗೆ ಬಂದ ಶ್ರಮೆ ಯನ್ನು ನೋಡು. ಮರಣದ ಬಾಗಲುಗಳಿಂದ ನನ್ನನ್ನು ಎತ್ತುವಾತನೇ,
ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
ಮುಯ್ಯಿಗೆಮುಯ್ಯಿ ಆಗುವದನ್ನು ನೀತಿವಂತನು ದೃಷ್ಟಿಸುವಾಗ ಅವನು ಸಂತೋಷ ಪಡುವನು; ಅವನು ತನ್ನ ಪಾದಗಳನ್ನು ದುಷ್ಟರ ರಕ್ತ ದಲ್ಲಿ ತೊಳೆಯುವನು.ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
ಆದರೆ ಅವರು ಹೇಳಿದ್ದೇನಂದರೆ--ನಾವು ದ್ರಾಕ್ಷಾರಸ ಕುಡಿಯುವದಿಲ್ಲ; ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನು ನಮಗೆ ಈ ಆಜ್ಞೆ ಕೊಟ್ಟನು; ಏನಂದರೆ--ನೀವಾದರೂ ನಿಮ್ಮ ಮಕ್ಕಳಾ ದರೂ ಎಂದೆಂದಿಗೂ ದ್ರಾಕ್ಷಾರಸವನ್ನು ಕುಡಿಯ ಬೇಡಿರಿ;
ಆಗ ನಾನು ಹೇಳಿದ್ದೇನಂದರೆ--ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇ ಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ; ನ್ಯಾಯ ವನ್ನು ತಿಳಿಯುವದು ನಿಮ್ಮದಲ್ಲವೋ?
ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ!
ಊರನ್ನು ರಕ್ತದಿಂದ ಕಟ್ಟಿ, ಪಟ್ಟಣವನ್ನು ಅನ್ಯಾಯ ದಿಂದ ಸ್ಥಾಪಿಸುವವನಿಗೆ ಅಯ್ಯೋ!
ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.