ಅಹಾ ಬನು ನಾಬೋತನಿಗೆ--ನಿನ್ನ ದ್ರಾಕ್ಷೇ ತೋಟವು ನನ್ನ ಮನೆಯ ಬಳಿಯಲ್ಲಿ ಇರುವದರಿಂದ ಅದು ನನಗೆ ಪಲ್ಯದ ತೋಟವಾಗುವ ಹಾಗೆ ಅದನ್ನು ನನಗೆ ಕೊಡು; ನಾನು ಅದಕ್ಕೆ ಬದಲಾಗಿ ಅದಕ್ಕಿಂತ ಒಳ್ಳೇ ದ್ರಾಕ್ಷೇ ತೋಟವನ್ನು ನಿನಗೆ ಕೊಡುವೆನು; ಇಲ್ಲವೆ ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿದ್ದರೆ ಹಣದಲ್ಲಿ ಅದರ ಬೆಲೆಯನ್ನು ಕೊಡುವೆನು ಅಂದನು.
Cross references
ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು.
ಆಗ ಅಬ್ರಾಮನು ಸಾರಯಳಿಗೆ--ಇಗೋ, ನಿನ್ನ ದಾಸಿಯು ನಿನ್ನ ಕೈಯಲ್ಲಿ ಇದ್ದಾಳೆ; ನೀನು ಮೆಚ್ಚುವದನ್ನು ಮಾಡು ಅಂದನು. ಆಗ ಸಾರಯಳು ಅವಳನ್ನು ಬಾಧಿಸಿದ್ದರಿಂದ ಅವಳು ಸಾರಯಳ ಬಳಿಯಿಂದ ಓಡಿಹೋದಳು.
ನೀನು ನಿನ್ನ ನೆರೆಯವನ ಮನೆಯನ್ನು ಆಶಿಸ ಬಾರದು, ನಿನ್ನ ನೆರೆಯವನ ಹೆಂಡತಿಯನ್ನೂ ಆಶಿಸ ಬಾರದು; ಅವನ ದಾಸನನ್ನಾಗಲಿ ದಾಸಿಯನ್ನಾಗಲಿ ಎತ್ತನ್ನಾಗಲಿ ಕತ್ತೆಯನ್ನಾಗಲಿ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬಾರದು ಎಂದು ಹೇಳಿದನು.
ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ; ನೆರೆಯವನ ಮನೆಯನ್ನೂ ಅವನ ಹೊಲವನ್ನೂ ದಾಸ ದಾಸಿಯರನ್ನೂ ಪಶು ಕತ್ತೆಗಳನ್ನೂ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬೇಡ ಎಂದು ಹೇಳಿದನು.
ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶವು ನೀನು ಹೊರಟ ಐಗುಪ್ತದೇಶದ ಹಾಗಲ್ಲ; ಅಲ್ಲಿ ನೀನು ನಿನ್ನ ಬೀಜವನ್ನು ಬಿತ್ತಿ ಪಲ್ಯಗಳ ತೋಟಕ್ಕೆ ಮಾಡುವ ಹಾಗೆ ನಿನ್ನ ಕಾಲಿನಿಂದ ನೀರು ಹಣಿಸಿದಿಯಲ್ಲಾ.
ಆದರೆ--ನಮಗೆ ನ್ಯಾಯತೀರಿಸುವ ಒಬ್ಬ ಅರಸನನ್ನು ನೇಮಿಸು ಎಂದು ಅವರು ಹೇಳಿದ ವಾರ್ತೆಯು ಸಮುವೇಲನಿಗೆ ಮನ ನೋಯಿಸುವಂತದ್ದಾಗಿತ್ತು. ಅವನು ಕರ್ತನಿಗೆ ಪ್ರಾರ್ಥನೆ ಮಾಡಿದನು.
ಅವನು ಉತ್ತಮವಾದ ನಿಮ್ಮ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಇಪ್ಪೇ ತೋಪುಗಳನ್ನೂ ತೆಗೆದು ಕೊಂಡು ತನ್ನ ಸೇವಕರಿಗೆ ಕೊಡುವನು.
ಆಗ ಆಕೀಷನು ದಾವೀದನನ್ನು ಕರೆದು ಅವನಿಗೆ--ನಿಜವಾಗಿಯೂ ಕರ್ತನಾಣೆ, ನೀನು ಯಥಾರ್ಥನು, ನೀನು ನನ್ನ ಸಂಗಡ ದಂಡಿನಲ್ಲಿ ಹೋಗುತ್ತಾ ಬರುತ್ತಾ ಇರುವದು ನನ್ನ ದೃಷ್ಟಿಗೆ ಒಳ್ಳೇದು. ನೀನು ನನ್ನ ಬಳಿಗೆ ಬಂದ ದಿನದಿಂದ ಈವರೆಗೂ ನಿನ್ನಲ್ಲಿ ಕೆಟ್ಟದ್ದನ್ನು ಕಂಡದ್ದಿಲ್ಲ.
ಅವನು ಅವಳಿಗೆ--ನಾನು ಇಜ್ರೇಲ್ಯನಾದ ನಾಬೋ ತನ ಸಂಗಡ ಮಾತನಾಡಿ--ನಿನ್ನ ದ್ರಾಕ್ಷೇ ತೋಟವನ್ನು ನನಗೆ ಕ್ರಯಕ್ಕೆ ಕೊಡು; ಇಲ್ಲವೆ ನಿನಗೆ ಮನಸ್ಸಿದ್ದರೆ ಅದಕ್ಕೆ ಬದಲಾಗಿ ಬೇರೆ ದ್ರಾಕ್ಷೇ ತೋಟವನ್ನು ಕೊಡು ವೆನು ಎಂದು ಅವನಿಗೆ ಹೇಳಿದೆನು. ಅದಕ್ಕವನುನನ್ನ ದ್ರಾಕ್ಷೇ ತೋಟವನ್ನು ಕೊಡುವದಿಲ್ಲ ಅಂದನು ಎಂದು ಹೇಳಿದನು.
ಯೆಹೂದದ ಅರಸ ನಾದ ಅಹಜ್ಯನು ಇದನ್ನು ನೋಡಿದಾಗ ಅವನು ತೋಟದ ಮನೆಯ ಮಾರ್ಗವಾಗಿ ಓಡಿಹೋದನು. ಯೇಹುವು ಅವನ ಹಿಂದೆ ಹೋಗಿ--ರಥದಲ್ಲಿ ಅವ ನನ್ನು ಸಹ ಸಂಹರಿಸಿರಿ ಅಂದನು. ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಎಂಬ ಸ್ಥಳಕ್ಕೆ ಏರಿ ಹೋಗುವ ಮಾರ್ಗದಲ್ಲಿ ಹೊಡೆದರು. ಅವನು ಮೆಗಿದ್ದೋನಿಗೆ ಓಡಿಹೋಗಿ ಅಲ್ಲಿ ಸತ್ತುಹೋದನು.
ಉದ್ಯಾನ ವನಗಳನ್ನೂ ಹಣ್ಣು ತೋಟಗಳನ್ನೂ ಮಾಡಿಕೊಂಡು ಅವುಗಳಲ್ಲಿ ತರತರವಾದ ಹಣ್ಣಿನ ವೃಕ್ಷಗಳನ್ನು ನೆಟ್ಟೆನು.
ಸಮಸ್ತ ಮುಖ್ಯವಾದ ಸುಗಂಧದ್ರವ್ಯ ಗಳೂ ತೋಟಗಳ ಬುಗ್ಗೆಯೂ ಜೀವಜಲಗಳ ಬಾವಿಯೂ ಲೆಬನೋನಿನಿಂದ ಹರಿಯುವ ಕಾಲುವೆ ಗಳೂ ನಿನ್ನಲ್ಲಿ ಇವೆ.ಓ ಉತ್ತರ ಗಾಳಿಯೇ, ಎಚ್ಚರವಾಗು! ದಕ್ಷಿಣ ಗಾಳಿಯೇ, ಬಾ! ನನ್ನ ತೋಟದ ಮೇಲೆ ಬೀಸು; ಅದರ ಸುಗಂಧಗಳು ಹರಿಯಲಿ. ನನ್ನ ಪ್ರಿಯನು ತನ್ನ ತೋಟದಲ್ಲಿ ಬಂದು ತನ್ನ ರಮ್ಯವಾದ ಫಲಗ ಳನ್ನು ತಿನ್ನಲಿ.
ಆದರೂ ನನ್ನನ್ನು ಅಸಹ್ಯಿಸುವವ ರಿಗೆ ಅವರು--ನಿಮಗೆ ಸಮಾಧಾನವಾಗುವದೆಂದು ಕರ್ತನು ಹೇಳುತ್ತಾನೆ ಎಂದು ಹೇಳುತ್ತಲೇ ಇದ್ದಾರೆ; ತಮ್ಮ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳುವವ ರೆಲ್ಲರಿಗೆ--ನಿಮ್ಮ ಮೇಲೆ ಕೇಡು ಬರುವದಿಲ್ಲ ಅನ್ನುತ್ತಾರೆ.
ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ!
ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು.
ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.
ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.