ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿದ್ದನ್ನು ಕಂಡಿಯಾ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ದಿವಸಗಳಲ್ಲಿ ಆ ಕೇಡನ್ನು ಬರಮಾಡದೆ ಅವನ ಮಗನ ದಿವಸಗಳಲ್ಲಿ ಅವನ ಮನೆಯ ಮೇಲೆ ಬರ ಮಾಡುವೆನು ಅಂದನು.
Cross references
ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ--ಇಬ್ರಿಯರ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಸನ್ನಿಧಿಯಲ್ಲಿ ತಗ್ಗಿಸಿಕೊಳ್ಳದೆ ಇರುವದು ಎಲ್ಲಿಯವರೆಗೇ? ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಹೋಗಗೊಡಿಸು.
ಆದರೆ ನಿನ್ನ ತಂದೆಯಾದ ದಾವೀದನಿಗೋಸ್ಕರ ನಿನ್ನ ಕಾಲ ದಲ್ಲಿ ನಾನು ಇದನ್ನು ಮಾಡದೆ ನಿನ್ನ ಮಗನ ಕೈಯೊಳಗಿಂದ ಅದನ್ನು ಕಸಕೊಳ್ಳುವೆನು.
ಆದರೆ ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ತನ್ನ ಕೈಯಿಂದ ಯೋರಾಮನನ್ನು ಅವನ ತೋಳುಗಳ ನಡುವೆ ಹೊಡೆದನು. ಬಾಣ ಹೃದಯದಲ್ಲಿ ತೂರಿ ಹೊರಟಿತು; ಅವನು ರಥದಲ್ಲಿ ಕೆಳಗೆ ಮುದುರಿ ಕೊಂಡು ಬಿದ್ದನು.
ಆಗ ಯೇಹುವು ತನ್ನ ಅಧಿಪತಿ ಯಾದ ಬಿದ್ಕರನಿಗೆ--ನೀನು ಅವನನ್ನು ತೆಗೆದುಕೊಂಡು ಹೋಗಿ ಇಜ್ರೇಲ್ಯನಾದ ನಾಬೋತನ ಪಾಲಾಗಿರುವ ಹೊಲದಲ್ಲಿ ಹಾಕಿಬಿಡು.
ಅವನು-- ಅವಳನ್ನು ಕೆಳಕ್ಕೆ ತಳ್ಳಿಬಿಡಿರಿ ಅಂದನು. ಅವರು ಅವ ಳನ್ನು ಕೆಳಕ್ಕೆ ತಳ್ಳಿಬಿಟ್ಟದ್ದರಿಂದ ಅವಳ ರಕ್ತವು ಗೋಡೆಯ ಮೇಲೆಯೂ ಕುದುರೆಗಳ ಮೇಲೆಯೂ ಚೆಲ್ಲಲ್ಪಟ್ಟಿತು. ಅವನು ಅವಳನ್ನು ತುಳಿಸಿದನು.
ಸಮಾರ್ಯದಲ್ಲಿ ಅಹಾಬನಿಗೆ ಎಪ್ಪತ್ತು ಮಂದಿ ಮಕ್ಕಳು ಇದ್ದದರಿಂದ ಯೇಹುವು ಸಮಾರ್ಯದಲ್ಲಿರುವ ಇಜ್ರೇಲಿನ ಪ್ರಧಾನರಿಗೂ ಹಿರಿ ಯರಿಗೂ ಅಹಾಬನ ಮಕ್ಕಳನ್ನು ಪಾಲಿಸುವವರಿಗೂ ಪತ್ರಗಳನ್ನು ಬರೆದು ಸಮಾರ್ಯಕ್ಕೆ ಕಳುಹಿಸಿ--
ಈ ಪ್ರಕಾರ ಯೇಹುವು ಅಹಾಬನಿಗೆ ಯಾರನ್ನೂ ಉಳಿಯಗೊಡಿಸದೆ ಇರುವ ವರೆಗೂ ಇಜ್ರೇಲಿನಲ್ಲಿ ಅವನಿಗೆ ಉಳಿದ ಎಲ್ಲಾ ಮನೆಯವರನ್ನೂ ಅವನ ಎಲ್ಲಾ ಹಿರಿಯರನ್ನೂ ನೆಂಟರನ್ನೂ ಯಾಜಕರನ್ನೂ ಸಂಹರಿಸಿದನು.
ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ವಿರೋಧವಾಗಿ ಅವರು ನಾಶವೂ ಶಾಪವೂ ಆಗುವದೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ನಿನ್ನನ್ನು ಕರ್ತನ ಮುಂದೆ ತಗ್ಗಿಸಿ ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದನ್ನು ನಾನೇ ಕೇಳಿದ್ದೇನೆಂದು ಕರ್ತನು ಹೇಳುತ್ತಾನೆ.ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.
ಅವರು ತಮ್ಮನ್ನು ತಗ್ಗಿಸಿ ಕೊಂಡದ್ದನ್ನು ಕರ್ತನು ನೋಡಿದಾಗ ಕರ್ತನ ವಾಕ್ಯವು ಶೆಮಾಯನಿಗೆ ಉಂಟಾಯಿತು. ಏನಂದರೆಅವರು ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವ ರನ್ನು ನಾಶಮಾಡದೆ ಅವರು ಸ್ವಲ್ಪಮಟ್ಟಿಗೆ ತಪ್ಪಿಸಿ ಕೊಳ್ಳುವಂತೆ ಮಾಡುವೆನು. ಶೀಶಕನ ಕೈಯಿಂದ ನನ್ನ ಕೋಪವು ಯೆರೂಸಲೇಮಿನ ಮೇಲೆ ಹೊಯ್ಯಲ್ಪಡು ವದಿಲ್ಲ.
ನನ್ನ ಮಾತನ್ನು ಕೇಳಿದೊಡನೆ ಅವರು ನನಗೆ ವಿಧೇಯ ರಾಗುವರು.
ದೇವರಿಗೆ--ನಿನ್ನ ಕೆಲಸಗಳಿಂದ ನೀನು ಎಷ್ಟು ಭಯಂಕರನಾಗಿದ್ದೀ ಎಂದು ಹೇಳಿರಿ. ನಿನ್ನ ಮಹಾಬಲದ ನಿಮಿತ್ತ ನಿನ್ನ ಶತ್ರುಗಳು ತಾವೇ ನಿನಗೆ ಅಧೀನರಾಗುವರು;
ಅವರನ್ನು ಕೊಲ್ಲುವಾಗ ಅವರು ಆತನನ್ನು ಹುಡುಕಿ ತಿರುಗಿಕೊಂಡು ದೇವರನ್ನು ಹೊತ್ತಾರೆ ವಿಚಾರಿಸಿ
ಆದರೆ ನೀನು ಓ ಕರ್ತನೇ, ಅಂತಃಕರುಣೆಯೂ ದಯೆಯೂ ಉಳ್ಳ ದೇವರು ದೀರ್ಘಶಾಂತನೂ ಬಹಳ ಕೃಪೆಯೂ ಸತ್ಯವೂ ಉಳ್ಳವನೂ ಆಗಿದ್ದೀ.
ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.
ಕರ್ತನ ವಾಕ್ಯವನ್ನು ಕೇಳಿರಿ, ಆತನ ವಾಕ್ಯಕ್ಕೆ ನಡಗುವವರೇ, ನಿಮ್ಮ ಸಹೋದರರು ನಿಮ್ಮನ್ನು ಹಗೆಮಾಡಿ ನನ್ನ ಹೆಸರಿಗೋಸ್ಕರ ನಿಮ್ಮನ್ನು ಹೊರಗೆ ಹಾಕಿ--ಕರ್ತನು ಮಹಿಮೆ ಹೊಂದಲೆಂದು ಹೇಳಿ ದ್ದಾರೆ; ಆದರೆ ಆತನು ನಿಮ್ಮ ಸಂತೋಷಕ್ಕಾಗಿ ಕಾಣಿಸಿ ಕೊಳ್ಳುವನು; ಅವರು ನಾಚಿಕೆಪಡುವರು.
ಇಗೋ, ನಾನು ನಿಮ್ಮಲ್ಲಿ ಸರ್ಪಗಳನ್ನು ಮಂತ್ರಿಸಕೂಡದ ನಾಗರಗಳನ್ನ್ನು ಕಳು ಹಿಸುತ್ತೇನೆ; ಅವು ನಿಮ್ಮನ್ನು ಕಚ್ಚುವವೆಂದು ಕರ್ತನು ಅನ್ನುತ್ತಾನೆ.
ಓ ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರೊಂದಿಗೆ ಮಾತನಾಡಿ ಹೀಗೆ ಹೇಳು --ನಮ್ಮ ಅಪರಾಧಗಳೂ ಪಾಪಗಳೂ ನಮ್ಮ ಮೇಲಿದ್ದು ನಾವು ಅವುಗಳಲ್ಲಿ ಕ್ಷೀಣಿಸುತ್ತಾ ಹೋದರೆ ಹೇಗೆ ಬದುಕುವೆವು; ಎಂದು ಹೇಳುವಿರಲ್ಲಾ?
ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.
ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.
ತರುವಾಯ ಆತನು ಆ ಸ್ತ್ರೀಯ ಕಡೆಗೆ ತಿರುಗಿಕೊಂಡು ಸೀಮೋನ ನಿಗೆ--ಈ ಸ್ತ್ರೀಯನ್ನು ನೋಡಿದೆಯಾ? ನಾನು ನಿನ್ನ ಮನೆಯೊಳಗೆ ಪ್ರವೇಶಿಸಿದಾಗ ನನ್ನ ಪಾದಗಳಿಗೆ ನೀನು ನೀರು ಕೊಡಲಿಲ್ಲ; ಇವಳಾದರೋ ನನ್ನ ಪಾದ ಗಳನು ಕಣ್ಣೀರಿನಿಂದ ತೊಳೆದು ತನ್ನ ತಲೇಕೂದಲಿನಿಂದ ಅವುಗಳನ್ನು ಒರೆ
ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?
ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ