ನಾನು ನನ್ನ ಪಿತೃಗಳ ಬಾಧ್ಯತೆ ಯನ್ನು ನಿನಗೆ ಕೊಡುವದಿಲ್ಲವೆಂದು ಇಜ್ರೇಲ್ಯನಾದ ನಾಬೋತನು ಹೇಳಿದ ಮಾತಿಗೋಸ್ಕರ ಅಹಾಬನು ವ್ಯಸನದಿಂದಲೂ ಕೋಪದಿಂದಲೂ ತನ್ನ ಮನೆಗೆ ಬಂದು ತನ್ನ ಮಂಚದ ಮೇಲೆ ಮಲಗಿ ತನ್ನ ಮುಖ ವನ್ನು ತಿರುಗಿಸಿಕೊಂಡು ರೊಟ್ಟಿ ತಿನ್ನದೆ ಇದ್ದನು.
Cross references
ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಆತನು ಗೌರವಿಸಲಿಲ್ಲ. ಆಗ ಕಾಯಿ ನನು ಬಹು ಕೋಪಗೊಂಡನು, ಅವನ ಮುಖವು ಕಳೆಗುಂದಿತು.
ಆಗ ಬಿಳಾಮನು ಉದಯದಲ್ಲಿ ಎದ್ದು ಬಾಲಾಕನ ಪ್ರಭುಗಳಿಗೆ--ಕರ್ತನು ನಿಮ್ಮ ಸಂಗಡ ಹೋಗುವದಕ್ಕೆ ನನಗೆ ಅಪ್ಪಣೆ ಕೊಡುವದಿಲ್ಲ. ನೀವು ನಿಮ್ಮ ದೇಶಕ್ಕೆ ಹೋಗಿರಿ ಎಂದು ಹೇಳಲಾಗಿ,
ತನ್ನ ಸಹೋದರಿಯಾದ ತಾಮಾರಳ ನಿಮಿತ್ತ ಬಹು ತಾಪಪಟ್ಟು ಅಸ್ವಸ್ಥನಾದನು; ಅವಳು ಕನ್ನಿಕೆಯಾಗಿದ್ದಳು; ಆದದರಿಂದ ಅವಳನ್ನು ಏನಾದರೂ ಮಾಡುವದಕ್ಕೆ ಅಮ್ನೋನನಿಗೆ ಕಷ್ಟವಾಗಿತ್ತು.
ಇವನು ಅವನಿಗೆ--ಅರಸನ ಮಗನಾದ ನೀನು ದಿನದಿನಕ್ಕೆ ಯಾಕೆ ಕ್ಷೀಣನಾಗಿ ಹೋಗುತ್ತೀ? ನನಗೆ ತಿಳಿಸುವದಿಲ್ಲವೋ ಅಂದನು. ಅದಕ್ಕೆ ಅಮ್ನೋನನು ಅವನಿಗೆ--ನಾನು ನನ್ನ ಸಹೋದರನಾಗಿರುವ ಅಬ್ಷಾ ಲೋಮನ ಸಹೋದರಿಯಾದ ತಾಮಾರಳನ್ನು ಪ್ರೀತಿ ಮಾಡುತ್ತೇನೆ ಅಂದನು.
ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು.
ಆದರೆ ನಾಬೋತನು ಅಹಾಬನಿಗೆ--ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡುವದನ್ನು ಕರ್ತನು ನನಗೆ ದೂರವಾಗ ಮಾಡಲಿ ಅಂದನು.
ಆದರೆ ಯೆಹೂದ್ಯನಾದ ಮೊರ್ದೆಕೈ ಅರಮನೆಯ ಬಾಗಲಲ್ಲಿ ಕುಳಿತಿರುವದನ್ನು ನಾನು ನೋಡುವ ವರೆಗೆ ಇದೆಲ್ಲಾ ನನಗೆ ಪ್ರಯೋ ಜನವಿಲ್ಲ ಅಂದನು.ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು.
ಮೂಢನನ್ನು ಕೋಪವು ಕೊಲ್ಲು ವದು; ಬುದ್ಧಿಹೀನನನ್ನು ರೋಷವು ಸಾಯುವಂತೆ ಮಾಡುವದು.
ಅಪೇಕ್ಷೆಯ ತಿರುಗಾಟ ಕ್ಕಿಂತ ಕಣ್ಣುಗಳ ದೃಷ್ಟಿಯು ಉತ್ತಮ; ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.
ಒಂದು ಸಂಗತಿಯ ಪ್ರಾರಂಭ ಕ್ಕಿಂತ ಅದರ ಅಂತ್ಯವೇ ಲೇಸು; ಆತ್ಮದಲ್ಲಿ ಗರ್ವಿಷ್ಠ ನಿಗಿಂತ ತಾಳ್ಮೆಯುಳ್ಳವನೇ ಉತ್ತಮ.
ಆದರೆ ದುಷ್ಟರು ಸುಮ್ಮನಿರಲಾರದಂಥ, ಅದರ ನೀರುಗಳು ಕೆಸರನ್ನೂ ಮೈಲಿಗೆಯನ್ನೂ ಕಾರು ವಂಥ, ಅಲ್ಲಕಲ್ಲೋಲವಾಗಿರುವ ಸಮುದ್ರದ ಹಾಗಿ ದ್ದಾರೆ.ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ.
ಆದರೆ ಅದು ಯೋನನಿಗೆ ತುಂಬಾಕರೆಕರೆಯಾಗಿ ಅವನಿಗೆ ಬಹು ಕೋಪ ಬಂತು.
ಆಗ ಕರ್ತನು -- ನೀನು ಕೋಪಮಾಡಿಕೊಳ್ಳುವದು ಒಳ್ಳೇದೋ ಎಂದು ಅವನಿಗೆ ಹೇಳಿದನು.
ಆದದ್ದೇನಂದರೆ, ಸೂರ್ಯೋದಯವಾದಾಗ ದೇವರು ಉಗ್ರವಾದ ಮೂಡಣ ಗಾಳಿಯನ್ನು ಸಿದ್ಧ ಮಾಡಿದನು; ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ ಅವನು ಮೂರ್ಛೆಹೋಗಿ ತನ್ನಲ್ಲಿ ಮರಣವನ್ನು ಕೇಳಿಕೊಂಡು--ನಾನು ಬದುಕುವದಕ್ಕಿಂತ ಸಾಯುವದು ಒಳ್ಳೇದು ಅಂದನು.
ಆಗ ದೇವರು ಯೋನನಿಗೆ--ನೀನು ಸೋರೇ ಗಿಡವನ್ನು ಕುರಿತು ಕೋಪಮಾಡುವದು ಒಳ್ಳೇದೋ ಅಂದನು. ಅವನು --ನಾನು ಸಾಯುವಷ್ಟು ಕೋಪಮಾಡುವದು ಒಳ್ಳೇದೇ ಅಂದನು.
ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ!
ಸೈತಾನನಿಗೆ ಅವಕಾಶ ಕೊಡಲೇಬೇಡಿರಿ.
ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.