ಆಗ ಅವನ ಹೆಂಡತಿಯಾದ ಈಜೆಬೆಲಳು ಅವನ ಬಳಿಗೆ ಬಂದು ಅವನಿಗೆ--ನೀನು ರೊಟ್ಟಿ ತಿನ್ನದ ಹಾಗೆ ನಿನ್ನ ಪ್ರಾಣ ವ್ಯಸನವುಳ್ಳದ್ದಾಗಿರುವದೇನು ಅಂದಳು.
Cross references
ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು.
ಇವನು ಅವನಿಗೆ--ಅರಸನ ಮಗನಾದ ನೀನು ದಿನದಿನಕ್ಕೆ ಯಾಕೆ ಕ್ಷೀಣನಾಗಿ ಹೋಗುತ್ತೀ? ನನಗೆ ತಿಳಿಸುವದಿಲ್ಲವೋ ಅಂದನು. ಅದಕ್ಕೆ ಅಮ್ನೋನನು ಅವನಿಗೆ--ನಾನು ನನ್ನ ಸಹೋದರನಾಗಿರುವ ಅಬ್ಷಾ ಲೋಮನ ಸಹೋದರಿಯಾದ ತಾಮಾರಳನ್ನು ಪ್ರೀತಿ ಮಾಡುತ್ತೇನೆ ಅಂದನು.
ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಲ್ಲಿ ನಡೆಯು ವದು ಅವನಿಗೆ ಅಲ್ಪವಾಗಿತ್ತು; ಅವನು ಚೀದೋನ್ಯರ ಅರಸನಾಗಿರುವ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡ ಬಿದ್ದನು.
ಈಜೆಬೆ ಲಳು ಕರ್ತನ ಪ್ರವಾದಿಗಳನ್ನು ಕೊಲ್ಲುವಾಗ ಓಬ ದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಐವತ್ತು ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು ಅವರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.)
ಈಜೆಬೆಲಳು ಎಲೀಯನ ಬಳಿಗೆ ದೂತ ನನ್ನು ಕಳುಹಿಸಿ--ನಾನು ನಾಳೆ ಇಷ್ಟು ಹೊತ್ತಿಗೆ ಅವ ರಲ್ಲಿರುವ ಒಬ್ಬೊಬ್ಬನ ಪ್ರಾಣದ ಹಾಗೆ ನಿನ್ನ ಪ್ರಾಣಕ್ಕೂ ಮಾಡದೆ ಹೋದರೆ ದೇವರುಗಳು ನನಗೆ ಹೀಗೆಯೂ ಹೆಚ್ಚಾಗಿಯೂ ಮಾಡಲಿ ಎಂದು ಹೇಳಿದಳು.
ಆದರೆ ತನ್ನ ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿಸಲ್ಪಟ್ಟು ಕರ್ತನ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿಬಿಟ್ಟ ಅಹಾಬನ ಹಾಗೆ ಯಾವನೂ ಇರಲಿಲ್ಲ.
ಆದಕಾರಣ ಅರಸನು ನನಗೆ--ನಿನಗೆ ಕಾಯಿಲೆ ಇಲ್ಲದೆ ನಿನ್ನ ಮುಖವು ದುಃಖವಾಗಿರುವದೇನು? ನಿನಗೆ ರೋಗವಿಲ್ಲವಲ್ಲಾ? ಇದು ಮನೋ ದುಃಖವಲ್ಲದೆ ಮತ್ತೊಂದಲ್ಲ ಅಂದನು.
ಆದರೆ ಅವನು ತಕ್ಕೊಳ್ಳಲಿಲ್ಲ. ಆಗ ಎಸ್ತೇರಳು ತನ್ನ ಬಳಿಯಲ್ಲಿ ಇರಿಸಲ್ಪಟ್ಟ ಅರಸನ ಮನೆವಾರ್ತೆಯವರಲ್ಲಿ ಹತಾಕ ನನ್ನು ಕರೆದು--ಇದೇನೆಂದೂ ಯಾತಕ್ಕೆಂದೂ ಮೊರ್ದೆ ಕೈಯಿಂದ ತಿಳಿದುಕೊಳ್ಳಬೇಕೆಂದು ಅವನಿಗೆ ಆಜ್ಞಾ ಪಿಸಿದಳು.