ಆಗ ಸೊಲೊಮೋನನು ಎಚ್ಚತ್ತಾಗ ಇಗೋ, ಅದು ಸ್ವಪ್ನವಾಗಿತ್ತು, ಅವನು ಯೆರೂ ಸಲೇಮಿಗೆ ಬಂದು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತನ್ನ ಸೇವಕರಿಗೆ ಔತಣ ಮಾಡಿಸಿದನು.
Cross references
ಯಾಕೋ ಬನು ಆ ಬೆಟ್ಟದಲ್ಲಿ ಬಲಿಯನ್ನು ಅರ್ಪಿಸಿ ರೊಟ್ಟಿ ಯನ್ನು ತಿನ್ನುವದಕ್ಕೆ ತನ್ನ ಸಹೋದರರನ್ನು ಕರೇ ಕಳುಹಿಸಿದನು. ಅವರು ರೊಟ್ಟಿಯನ್ನು ತಿಂದು ಬೆಟ್ಟದಲ್ಲಿಯೇ ರಾತ್ರಿ ಇಳುಕೊಂಡರು.ಹೊತ್ತಾರೆ ಲಾಬಾನನು ಎದ್ದು ತನ್ನ ಕುಮಾರರಿಗೂ ಕುಮಾರ್ತೆ ಯರಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
ಮೂರನೆಯ ದಿನದಲ್ಲಿ ಫರೋಹನ ಜನನದ ದಿನವಾಗಿದ್ದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯ ಪಾನದಾಯಕನನ್ನೂ ಮುಖ್ಯ ರೊಟ್ಟಿಗಾರನನ್ನೂ ತನ್ನ ಸೇವಕರ ಮುಂದೆ ನಿಲ್ಲಿಸಿದನು.
ಆ ಬಡಕಲಾದ ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ನುಂಗಿಬಿಟ್ಟವು. ಫರೋಹನು ಎಚ್ಚೆತ್ತಾಗ ಇಗೋ, ಅದು ಒಂದು ಕನಸಾಗಿತ್ತು.
ಅವನ ಕಾಣಿಕೆಯು ಸಮಾಧಾನದ ಬಲಿಯ ಅರ್ಪಣೆಯಾಗಿದ್ದು ಅದನ್ನು ಮಂದೆಯಿಂದ ಅರ್ಪಿಸುವದಾದರೆ ಅದು ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ಅದನ್ನು ಅವನು ಕರ್ತನ ಮುಂದೆ ದೋಷವಿಲ್ಲದ್ದಾಗಿ ಸಮರ್ಪಿಸಲಿ.
ಅವನು ಕರ್ತನಿಗೆ ಸಮರ್ಪಿಸಬೇಕಾದ ಸಮಾ ಧಾನ ಯಜ್ಞಸಮರ್ಪಣೆಗಳ ನಿಯಮವು ಇದೇ:
ಅವರು ಕರ್ತನ ಮಂಜೂಷವನ್ನು ಒಳಗೆ ತಂದು ದಾವೀದನು ಹಾಕಿಸಿದ ಗುಡಾರದೊಳಗೆ ಅದರ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ ದಾವೀದನು ಕರ್ತನ ಸನ್ನಿಧಿಯಲ್ಲಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು.
ಸೊಲೊಮೋನನು ಕರ್ತನಿಗೆ ಅರ್ಪಿಸಿದ ಸಮಾ ಧಾನದ ಬಲಿಗಳಿಗೋಸ್ಕರ ಇಪ್ಪತ್ತೆರಡು ಸಾವಿರ ಎತ್ತು ಗಳನ್ನೂ ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನೂ ಅರ್ಪಿಸಿದನು. ಹೀಗೆಯೇ ಅರಸನೂ ಇಸ್ರಾಯೇಲಿನ ಸಮಸ್ತ ಮಕ್ಕಳೂ ಕರ್ತನ ಮಂದಿರವನ್ನು ಪ್ರತಿಷ್ಠೆ ಮಾಡಿದರು.
ಅದೇ ಕಾಲದಲ್ಲಿ ಸೊಲೊಮೋನನೂ ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತದ ನದಿಯ ಮಟ್ಟಿಗೂ ಇರುವ ಮಹಾಸಭೆ ಯಾದ ಸಮಸ್ತ ಇಸ್ರಾಯೇಲ್ಯರೂ ನಮ್ಮ ದೇವರಾದ ಕರ್ತನ ಮುಂದೆ ಏಳೇಳು ಹದಿನಾಲ್ಕು ದಿವಸ ಹಬ್ಬವನ್ನು ಮಾಡಿದರು.ಎಂಟನೇ ದಿನದಲ್ಲಿ ಅವನು ಜನರಿಗೆ ಅಪ್ಪಣೆಯನ್ನು ಕೊಟ್ಟನು. ಆಗ ಅವರು ಅರಸನನ್ನು ಆಶೀರ್ವದಿಸಿ ಕರ್ತನು ತನ್ನ ಸೇವಕನಾದ ದಾವೀದನಿ ಗೋಸ್ಕರವೂ ತನ್ನ ಜನರಾದ ಇಸ್ರಾಯೇಲ್ಯರಿಗೋಸ್ಕ ರವೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಸಂತೋಷಪಟ್ಟು ಹೃದಯದಲ್ಲಿ ಆನಂದವುಳ್ಳವರಾಗಿ ತಮ್ಮ ತಮ್ಮ ಡೇರೆಗಳಿಗೆ ಹೋದರು.
ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿದ ಡೇರೆಯ ಮಧ್ಯದಲ್ಲಿ ಇರಿಸಿದ ತರುವಾಯ ಅವರು ದೇವರ ಮುಂದೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
ಇಸ್ರಾಯೇಲಿನಲ್ಲಿರುವ ಸ್ತ್ರೀ ಪುರುಷರಾದ ಸಮಸ್ತರಿಗೂ ಒಬ್ಬೊಬ್ಬರಿಗೆ ಒಂದೊಂದು ರೊಟ್ಟಿಯನ್ನೂ ಒಂದು ತುಂಡು ಮಾಂಸವನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಕೊಟ್ಟನು.
ಅರಸನಾದ ಸೊಲೊ ಮೋನನು ಇಪ್ಪತ್ತೆರಡು ಸಾವಿರ ಎತ್ತುಗಳನ್ನೂ ಲಕ್ಷದ ಇಪ್ಪತ್ತುಸಾವಿರ ಕುರಿಗಳನ್ನೂ ಬಲಿಯಾಗಿ ಅರ್ಪಿಸಿ ದನು. ಹೀಗೆಯೇ ಅರಸನೂ ಸಮಸ್ತ ಜನರೂ ದೇವರ ಆಲಯವನ್ನು ಪ್ರತಿಷ್ಠೆಮಾಡಿದರು.
ಇದ ಲ್ಲದೆ ಸೊಲೊಮೋನನು ಕರ್ತನ ಆಲಯದ ಮುಂದಿ ರುವ ಮಧ್ಯ ಅಂಗಳವನ್ನು ಪರಿಶುದ್ಧಮಾಡಿದನು; ಯಾಕಂದರೆ ಸೊಲೊಮೋನನು ಮಾಡಿಸಿದ ತಾಮ್ರದ ಪೀಠದ ಮೇಲೆ ದಹನಬಲಿಗಳನ್ನೂ ಕಾಣಿಕೆಗಳನ್ನೂ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದ್ದರಿಂದ ಅಲ್ಲಿ ಅವನು ದಹನಬಲಿಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.
ಇದಲ್ಲದೆ ಹಿಜ್ಕೀಯನು ಕರ್ತನ ಉತ್ತ ಮವಾದ ಬೋಧನೆಯನ್ನು ಬೋಧಿಸಿದ ಸಮಸ್ತ ಲೇವಿ ಯರಿಗೆ ಸಮಾಧಾನವಾಗಿ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳ ಪರ್ಯಂತರ ಭೋಜನ ಮಾಡುತ್ತಾ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅರಿಕೆಮಾಡುತ್ತಾ ಆಚರಿಸಿದ್ದರು.
ತನ್ನ ಆಳಿಕೆಯ ಮೂರನೇ ವರುಷ ದಲ್ಲಿ ಅವನು ತನ್ನ ಸಮಸ್ತ ಪ್ರಧಾನರಿಗೂ ಸೇವಕ ರಿಗೂ ಔತಣವನ್ನು ಮಾಡಿಸಿದನು. ಪಾರಸಿಯ, ಮೇದ್ಯರ ಬಲವಾದ ಸೈನ್ಯವೂ ಪ್ರಾಂತ್ಯಗಳ ಶ್ರೇಷ್ಠರೂ ಪ್ರಧಾನರೂ ಅವನ ಬಳಿಯಲ್ಲಿದ್ದರು.
ಆಗ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--
ಅರಸನಾದ ಬೆಲ್ಯಚ್ಚರನು ತನ್ನ ಪ್ರಭುಗಳಲ್ಲಿ ಸಾವಿರ ಮಂದಿಗೆ ದೊಡ್ಡ ಔತಣವನ್ನು ಮಾಡಿಸಿ, ಆ ಸಾವಿರ ಮಂದಿಯ ಮುಂದೆ ಅವನು ದ್ರಾಕ್ಷಾರಸವನ್ನು ಕುಡಿದನು.
ಹೀಗಿರಲಾಗಿ ಅನುಕೂಲವಾದ ಒಂದು ದಿನವು ಅಂದರೆ ಹೆರೋದನ ಹುಟ್ಟಿದ ದಿನದಲ್ಲಿ ಅವನು ತನ್ನ ಪ್ರಭುಗಳಿಗೂ ಸೈನ್ಯಾಧಿಪತಿಗಳಿಗೂ ಗಲಿಲಾಯದ ಪ್ರಮುಖರಿಗೂ ಔತಣವನ್ನು ಮಾಡಿಸಿದನು;