ನನ್ನ ದೇವರಾದ ಕರ್ತನೇ, ನೀನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ನಿನ್ನ ಸೇವಕನನ್ನು ಅರಸನಾಗಮಾಡಿದ್ದೀ. ಆದರೆ ನಾನು ಚಿಕ್ಕ ಬಾಲಕನಾಗಿದ್ದು ಹೊರಗೆ ಹೋಗುವದಕ್ಕೂ ಒಳಗೆ ಬರುವದಕ್ಕೂ ಅರಿಯದೆ ಇದ್ದೇನೆ.
Cross references
ಕರ್ತನ ಸಭೆಯು ಕುರುಬನಿಲ್ಲದ ಕುರಿಗಳ ಹಾಗೆ ಇರಬಾರದು ಎಂದು ಅಂದನು.
ಅವನು ಅವರಿಗೆ--ನಾನು ಈಹೊತ್ತು ನೂರ ಇಪ್ಪತ್ತು ವರುಷದವನಾಗಿದ್ದೇನೆ; ನಾನು ಇನ್ನು ಹೊರಗೆ ಹೋಗುವದಕ್ಕೂ ಬರುವದಕ್ಕೂ ಶಕ್ತನಲ್ಲ; ಇದಲ್ಲದೆ ಕರ್ತನು ನನಗೆ--ನೀನು ಈ ಯೊರ್ದನನ್ನು ದಾಟುವದಿ ಲ್ಲವೆಂದು ಹೇಳಿದ್ದಾನೆ.
ಇಸ್ರಾಯೇಲ್ ಜನರೂ ಯೆಹೂದ ಜನರೂ ದಾವೀದನು ತಮ್ಮ ಮುಂದೆ ಹೋಗುತ್ತಾ ಬರುತ್ತಾ ಇರುವದರಿಂದ ಅವನನ್ನು ಪ್ರೀತಿ ಮಾಡಿದರು.
ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವನಾಗಿಯೂ ಆಗಿದ್ದಿ. ಆದದರಿಂದ ಕರ್ತನು ನಿನಗೆ--ನೀನು ನನ್ನ ಜನರಾದ ಇಸ್ರಾಯೇ ಲನ್ನು ಮೇಯಿಸುವಿ; ಇಸ್ರಾಯೇಲಿನ ಮೇಲೆ ನಾಯಕನಾಗಿರುವಿ ಎಂದು ಹೇಳಿದನು ಅಂದರು.
ಇದ ಲ್ಲದೆ ದಾವೀದನು--ನನ್ನ ಮಗನಾದ ಸೊಲೊಮೋ ನನು ಹುಡುಗನಾಗಿಯೂ ಮೃದುವಾದವನಾಗಿಯೂ ಇದ್ದಾನೆ; ಕರ್ತನಿಗೆ ಕಟ್ಟಬೇಕಾದ ಮನೆಯೂ ಸಮಸ್ತ ದೇಶಗಳಲ್ಲಿ ಕೀರ್ತಿಯಲ್ಲಿಯೂ ಸೌಂದರ್ಯದ ಲ್ಲಿಯೂ ಅಧಿಕ ಘನವಾಗಿರಬೇಕು; ನಾನು ಅದ ಕ್ಕೋಸ್ಕರ ಈಗ ಸಿದ್ಧಮಾಡುವೆನೆಂದು ಹೇಳಿದನು. ಆದದರಿಂದ ದಾವೀದನು ಸಾಯುವದಕ್ಕಿಂತ ಮುಂಚೆ ಬಹಳವಾಗಿ ಸಿದ್ಧಮಾಡಿದನು.
ಇದಲ್ಲದೆ ಅರಸನಾದ ದಾವೀದನು ಸಮಸ್ತ ಸಭೆಗೆ ಹೇಳಿದ್ದೇನಂದರೆ -- ದೇವರು ಒಬ್ಬನನ್ನೇ ಆದುಕೊಂಡ ನನ್ನ ಮಗನಾದ ಸೊಲೊ ಮೋನನು ಚಿಕ್ಕವನಾಗಿಯೂ ಮೃದುವಾಗಿಯೂ ಇದ್ದಾನೆ. ಆದರೆ ಕೆಲಸವು ದೊಡ್ಡದು; ಈ ಅರಮನೆ ಯು ಮನುಷ್ಯರಿಗೋಸ್ಕರವಲ್ಲ, ಕರ್ತನಾದ ದೇವರಿ ಗೋಸ್ಕರವೇ.
ಆಗ ಬೂಜ್ನಾದ ಬರಕೇಲನ ಮಗನಾದ ಎಲೀಹು ಉತ್ತರಕೊಟ್ಟು ಹೇಳಿದ್ದೇನೆಂದರೆ--ನಾನು ಒಳ್ಳೇಪ್ರಾಯದವನು, ನೀವು ನೆರೆಯವರು; ಆದದ ರಿಂದ ನಾನು ಹೆದರಿ ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸುವದಕ್ಕೆ ಭಯಪಟ್ಟೆನು.
ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
ನಾಶನಕ್ಕೆ ಮುಂದೆ ಮನುಷ್ಯನ ಹೃದಯವು ಗರ್ವವಾಗಿದೆ; ಸನ್ಮಾನಕ್ಕೆ ಮುಂಚೆ ವಿನಯವಾಗಿದೆ.
ಓ ದೇಶವೇ, ಹುಡುಗನು ನಿನ್ನ ಅರಸನಾಗಿದ್ದರೆ ಮತ್ತು ನಿನ್ನ ಪ್ರಧಾನರು ಬೆಳಿಗ್ಗೆ ಊಟಮಾಡಿದ್ದರೆ ನಿನಗೆ ಅಯ್ಯೋ!
ಆಗ ನಾನು--ಹಾ! ಕರ್ತನಾದ ದೇವರೇ ಇಗೋ, ನಾನು ಮಾತನಾಡಲಾರೆನು, ನಾನು ಚಿಕ್ಕವನು ಅಂದೆನು.
ಆತನು ಕಾಲವನ್ನೂ ಸಮಯವನ್ನೂ ಬದಲಾಯಿ ಸುತ್ತಾ ಅರಸನನ್ನು ಮೇಲೆತ್ತುತ್ತಾನೆ; ಜ್ಞಾನಿಗಳಿಗೆ ಜ್ಞಾನ ವನ್ನೂ ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡು ತ್ತಾನೆ.
ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿ ಬಿಡುವರು; ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು; ನಿನಗೆ ಎತ್ತುಗಳ ಸಂಗಡ ಹುಲ್ಲನ್ನು ಮೇಯಿಸುವರು. ಆಕಾಶದ ಮಂಜಿನಿಂದ ನಿನ್ನನ್ನು ತೇವ ಮಾಡುವರು. ಮಹೋನ್ನತನು ಮನುಷ್ಯರ ರಾಜ್ಯವನ್ನು ಆಳುವನೆಂದೂ ತನ್ನ ಮನಸ್ಸಿಗೆ ಸರಿಬಂದ ವರಿಗೆ ಅದನ್ನು ಕೊಡುತ್ತಾನೆಂದೂ ನೀನು ತಿಳಿಯುವ ವರೆಗೂ ಆ ಏಳು ಕಾಲಗಳು ಕಳೆದು ಹೋಗುವವು.
ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು, ನಿನಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸುವರು. ಮಹೋ ನ್ನತನು ಮನುಷ್ಯರ ರಾಜ್ಯವನ್ನಾಳುವನೆಂದೂ ತನ್ನ ಮನಸ್ಸಿಗೆ ಸರಿಬಂದವರಿಗೆ ಅದನ್ನು ಕೊಡುವೆನೆಂದೂ ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವವು.
ಓ ಅರಸನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯವನ್ನೂ ಮಹತ್ತನ್ನೂ ಕೀರ್ತಿಯನ್ನೂ ಘನ ವನ್ನೂ ಕೊಟ್ಟನು.
ಅವನು ಮನುಷ್ಯರ ಮಕ್ಕಳೊಳಗಿಂದ ತೆಗೆಯಲ್ಪಟ್ಟನು; ಮಹೋನ್ನತನಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾನೆಂದೂ ಅವನು ತಿಳಿಯುವ ತನಕ ಬೇಕಾದವರನ್ನು ಅದಕ್ಕೆ ನೇಮಿಸುತ್ತಾನೆಂದೂ ಅವನು ತಿಳಿಯುವಷ್ಟರಲ್ಲಿ ಅವನ ಹೃದಯವು ಮೃಗಗಳ ಹೃದಯದಂತಾಯಿತು, ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು; ಅವನಿಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸಿದರು; ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು.
ನೀವು ತಿರುಗಿ ಕೊಂಡು ಚಿಕ್ಕ ಮಕ್ಕಳಂತೆ ಆಗದೆಹೋದರೆ ಪರಲೋಕ ರಾಜ್ಯದೊಳಗೆ ಪ್ರವೇಶಿಸುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ಬಾಗಲು ಕಾಯುವವನು ಅವನಿಗೆ ತೆರೆಯು ತ್ತಾನೆ; ಕುರಿಗಳು ಅವನ ಸ್ವರವನ್ನು ಕೇಳುತ್ತವೆ, ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವು ಗಳನ್ನು ಹೊರಗೆ ನಡಿಸುತ್ತಾನೆ.
ನಾನೇ ಆಬಾಗಲು; ನನ್ನ ಮೂಲಕವಾಗಿ ಯಾವನಾದರೂ ಪ್ರವೇಶಿಸಿದರೆ ಅವನು ರಕ್ಷಣೆ ಹೊಂದುವನು; ಇದ ಲ್ಲದೆ ಅವನು ಒಳಗೆ ಹೋಗುತ್ತಾನೆ, ಹೊರಗೆ ಬರು ತ್ತಾನೆ ಮತ್ತು ಮೇವನ್ನು ಕಂಡುಕೊಳ್ಳುತ್ತಾನೆ.