ಅಪರಂಜಿಯ ತಂಬಿಗೆಗಳು, ಕತ್ತರಿಗಳು, ಸಲಿಕೆಗಳು, ಸೌಟುಗಳು, ಅಗ್ನಿ ಪಾತ್ರೆಗಳು, ಮಹಾಪರಿಶುದ್ಧ ಸ್ಥಳ ವಾದ ಒಳಗಿನ ಮನೆಯ ಕದಗಳಿಗೋಸ್ಕರವೂ ಮಂದಿ ರವೆಂಬ ಮನೆಯ ಕದಗಳಿಗೋಸ್ಕರವೂ ಬಂಗಾರದ ಕೀಲುಗಳನ್ನೆಲ್ಲಾ ಮಾಡಿಸಿದನು.ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.
Cross references
ಇದಲ್ಲದೆ ನೀನು ಪಾತ್ರೆಗಳನ್ನೂ ಸೌಟುಗಳನ್ನೂ ಮುಚ್ಚಳಗಳನ್ನೂ ಬಟ್ಟಲುಗಳನ್ನೂ ಒಯ್ಯುವದಕ್ಕೋಸ್ಕರ ಶುದ್ಧ ಬಂಗಾರ ದಿಂದ ಮಾಡಬೇಕು.
ಇದಲ್ಲದೆ ಅದರ ಚಿಮಟಿಗೆಗಳನ್ನೂ ಬೂದಿಯ ಪಾತ್ರೆಗಳನ್ನೂ ಶುದ್ಧ ಬಂಗಾರದಿಂದಲೇ ಮಾಡಬೇಕು.
ಅದರ ಬೂದಿಗಾಗಿ ತಟ್ಟೆಗಳನ್ನು ಸಲಿಕೆಗಳನ್ನು ಬೋಗುಣಿಗಳನ್ನು ಮುಳ್ಳುಗಳನ್ನು ಅಗ್ನಿಪಾತ್ರೆಗಳನ್ನು ಎಲ್ಲಾ ಉಪಕರಣಗಳನ್ನು ಹಿತ್ತಾಳೆಯಿಂದ ಮಾಡಬೇಕು.
ಅವನು ಕರ್ತನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಧೂಪ ಸುಡುವ ಪಾತ್ರೆಯ ತುಂಬ ಬೆಂಕಿಯಿಂದ ಉರಿಯುವ ಕೆಂಡ ಗಳನ್ನು ಮತ್ತು ತನ್ನ ಕೈಗಳ ತುಂಬ ಸಣ್ಣದಾಗುವಂತೆ ಕಟ್ಟಿದ ಧೂಪವನ್ನು ತೆಗೆದುಕೊಂಡು ಅದನ್ನು ತೆರೆಯ ಒಳಗಡೆ ತರಬೇಕು.
ಧೂಪ ತುಂಬಿದ್ದ ಹನ್ನೆರಡು ಬಂಗಾರದ ಚಮಚಗಳು, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಒಂದೊಂದಕ್ಕೆ ಹತ್ತು, ಮತ್ತು ಚಮಚಗಳ ಬಂಗಾರವೆಲ್ಲಾ ನೂರ ಇಪ್ಪತ್ತು ಶೇಕೆಲ್;
ಅವುಗಳ ದೀಪಗಳನ್ನೂ ಹೂವು ಗಳನ್ನೂ ದೀಪಗಳ ಚಿಮಟೆಗಳನ್ನೂ ಬಂಗಾರದಿಂದ ಅಂದರೆ ನಿರ್ಮಲವಾದ ಬಂಗಾರದಿಂದ ಮಾಡಿಸಿ ದನು; ಕತ್ತರಿಗಳನ್ನೂ ಬೋಗುಣಿಗಳನ್ನೂ ಸೌಟು ಗಳನ್ನೂ ಅಗ್ನಿಪಾತ್ರೆಗಳನ್ನೂ ಶುದ್ಧ ಬಂಗಾರದಿಂದ ಮಾಡಿಸಿದನು.ಇದಲ್ಲದೆ ಆಲಯ ಪ್ರವೇಶದ ಸ್ಥಳವೂ ಅತಿಪರಿಶುದ್ಧ ಸ್ಥಾನಕ್ಕೋಸ್ಕರವಾಗಿರುವ ಅದರ ಅಂತರಂಗದ ಬಾಗಲುಗಳೂ ಮಂದಿರದ ಮನೇ ಬಾಗಲುಗಳೂ ಬಂಗಾರದವುಗಳಾಗಿದ್ದವು.
ಆ ದಿನದಲ್ಲಿ ಕುದುರೆಗಳ ಗೆಜ್ಜೆಗಳ ಮೇಲೆ ಕರ್ತನಿಗೆ ಪರಿಶುದ್ಧವು ಎಂದಿರುವದು; ಕರ್ತನ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವವು.ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.