ಆಗ ಚೀಯೋನೆಂಬ ದಾವೀದನ ಪಟ್ಟಣ ದೊಳಗಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ ಅರಸನಾದ ಸೊಲೊ ಮೋನನು ಇಸ್ರಾಯೇಲಿನ ಮಕ್ಕಳಲ್ಲಿ ಶ್ರೇಷ್ಠರಾಗಿರುವ ತಂದೆಗಳಾದ ಇಸ್ರಾಯೇಲಿನ ಹಿರಿಯರನ್ನೂ ಗೋತ್ರ ಗಳ ಮುಖ್ಯಸ್ಥರನ್ನೂ ಯೆರೂಸಲೇಮಿನಲ್ಲಿ ತನ್ನ ಬಳಿಗೆ ಕೂಡಿಬರುವಂತೆ ಮಾಡಿದನು.
Cross references
ಇಸ್ರಾಯೇಲ್ಯರ ಪ್ರಧಾನರೂ ತಮ್ಮ ತಂದೆಗಳ ಮನೆಯ ಮುಖ್ಯಸ್ಥರೂ ಗೋತ್ರಗಳ ಮುಖ್ಯಾಧಿಕಾರಿಗಳೂ ಎಣಿಸಲ್ಪಟ್ಟವರ ಮೇಲೆ ಇದ್ದ ವರು ಅರ್ಪಿಸಿದರು.
ಅವನು ಸಮಸ್ತ ಇಸ್ರಾಯೇಲ್ಯರನ್ನೂ ಅವರ ಹಿರಿಯರನ್ನೂ ಮುಖ್ಯ ಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ಕರಿಸಿ ಅವರಿಗೆ--ನಾನು ವೃದ್ಧನಾಗಿ ದಿನಗಳು ತುಂಬಿ ದವನಾಗಿದ್ದೇನೆ.
ಯೆಹೋಶುವನು ಶೆಕೆಮಿನಲ್ಲಿ ಇಸ್ರಾಯೇಲಿನ ಸಮಸ್ತ ಗೋತ್ರದವರನ್ನು ಕೂಡಿಸಿ ಇಸ್ರಾಯೇಲಿನ ಹಿರಿಯರನ್ನೂ ಅವರ ಮುಖ್ಯಸ್ಥ ರನ್ನೂ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ಕರೆಸಿದನು. ಅವರು ದೇವರ ಮುಂದೆ ಬಂದು ನಿಂತರು.
ಆದಾಗ್ಯೂ ದಾವೀದನು ಚೀಯೋನಿನ ಕೋಟೆಯನ್ನು ಹಿಡುಕೊಂಡನು. ಅದೇ ದಾವೀದನ ಪಟ್ಟಣವು.
ದಾವೀದನು ಇಸ್ರಾಯೇಲಿನಲ್ಲಿ ಆಯಲ್ಪಟ್ಟ ಮೂವತ್ತು ಸಾವಿರ ಜನರನ್ನು ಕೂಡಿಸಿ ಕೊಂಡು ಎದ್ದು ತನ್ನ ಸಂಗಡ ಇದ್ದ ಎಲ್ಲಾ ಜನರನ್ನು ಕರಕೊಂಡು
ಅವರು ನಾಕೋನನ ಕಣದ ಬಳಿಗೆ ಬಂದಾಗ ಉಜ್ಜನು ದೇವರ ಮಂಜೂಷವನ್ನು ಹಿಡಿಯುವದಕ್ಕೆ ತನ್ನ ಕೈಚಾಚಿ ಅದನ್ನು ಹಿಡಿದನು. ಯಾಕಂದರೆ ಎತ್ತುಗಳು ಎಡವಿದವು.
ದೇವರ ಮಂಜೂಷದ ನಿಮಿತ್ತ ಕರ್ತನು ಒಬೇ ದೆದೋಮನ ಮನೆಯನ್ನೂ ಅವನಿಗೆ ಉಂಟಾದ ದ್ದೆಲ್ಲವನ್ನೂ ಆಶೀರ್ವದಿಸಿದ್ದಾನೆಂದು ಅರಸನಾದ ದಾವೀದನಿಗೆ ತಿಳಿಸಲ್ಪಟ್ಟಿತು. ಆಗ ದಾವೀದನು ಹೊರಟು ಹೋಗಿ ದೇವರ ಮಂಜೂಷವನ್ನು ಒಬೇ ದೆದೋಮನ ಮನೆಯಿಂದ ದಾವೀದನ ಪಟ್ಟಣಕ್ಕೆ ಸಂತೋಷವಾಗಿ ತಂದನು.
ಹೀಗೆಯೇ ದಾವೀದನು ತನ್ನ ಪಿತೃಗಳ ಸಂಗಡ ಮಲಗಿಕೊಂಡನು; ಅವನು ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು.
ಆಗ ಸೊಲೊಮೋನನು ಎಚ್ಚತ್ತಾಗ ಇಗೋ, ಅದು ಸ್ವಪ್ನವಾಗಿತ್ತು, ಅವನು ಯೆರೂ ಸಲೇಮಿಗೆ ಬಂದು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತನ್ನ ಸೇವಕರಿಗೆ ಔತಣ ಮಾಡಿಸಿದನು.
ದಾವೀದನು ಕೋಟೆಯೊಳಗೆ ವಾಸಮಾಡಿದನು; ಆದಕಾರಣ ಅದಕ್ಕೆ ದಾವೀದನ ಪಟ್ಟಣವೆಂದು ಹೆಸ ರಿಟ್ಟರು.
ದಾವೀದನು ಸಾವಿರ ಮಂದಿಗೂ ನೂರು ಮಂದಿಗೂ ಪ್ರಧಾನರಾದವರ ಸಂಗಡ ಮತ್ತು ಎಲ್ಲಾ ನಾಯಕರ ಸಂಗಡ ಆಲೋಚನೆ ಮಾಡಿದನು.
ದಾವೀ ದನು ಕರ್ತನ ಮಂಜೂಷವನ್ನು ತಾನು ಅದಕ್ಕೋಸ್ಕರ ಸಿದ್ಧಮಾಡಿದ ಅದರ ಸ್ಥಳಕ್ಕೆ ತಕ್ಕೊಂಡು ಬರುವ ನಿಮಿತ್ತ ಯೆರೂಸಲೇಮಿಗೆ ಸಮಸ್ತ ಇಸ್ರಾಯೇಲನ್ನು ಕೂಡಿಸಿ ಬರಮಾಡಿದನು.
ಹೀಗೆಯೇ ದಾವೀದನೂ ಇಸ್ರಾಯೇಲಿನ ಹಿರಿ ಯರೂ ಸಹಸ್ರಗಳ ಮೇಲೆ ಇರುವ ಅಧಿಪತಿಗಳೂ ಸಂತೋಷವಾಗಿ ಒಬೇದೆದೋಮನ ಮನೆಯೊಳಗಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರಲು ಹೋದರು.
ಕರ್ತನ ಒಡಂಬಡಿಕೆಯ ಮಂಜೂ ಷವು ದಾವೀದನ ಪಟ್ಟಣದಲ್ಲಿ ಸೇರಿದಾಗ ಏನಾಯಿ ತಂದರೆ, ಸೌಲನ ಮಗಳಾದ ವಿಾಕಳು ಕುಣಿಯುತ್ತಾ ಆಡುತ್ತಾ ಇರುವ ಅರಸನಾದ ದಾವೀದನನ್ನು ಕಿಟಿಕಿ ಯಿಂದ ನೋಡಿ ತನ್ನ ಹೃದಯದಲ್ಲಿ ಅವನನ್ನು ಹೀನೈಸಿದಳು.
ದಾವೀದನು ಇಸ್ರಾಯೇಲಿನ ಸಮಸ್ತ ಪ್ರಧಾನರಾದ ಗೋತ್ರಗಳ ಪ್ರಧಾನ ರನ್ನೂ ವರ್ಗವರ್ಗವಾಗಿ ಅರಸನನ್ನು ಸೇವಿಸುವ ಸಭೆಗಳ ಪ್ರಧಾನರನ್ನೂ ಸಹಸ್ರಾಧಿಪತಿಗಳನ್ನೂ ಶತಾಧಿಪತಿಗಳನ್ನೂ ಅರಸನ ಸ್ವಾಸ್ಥ್ಯದ ಮೇಲೆಯೂ ಅವನ ಕುಮಾರರ ಸ್ವಾಸ್ಥ್ಯಗಳ ಮೇಲೆಯೂ ಇರುವ ಪ್ರಧಾನರನ್ನೂ ಅಧಿಕಾರಿಗಳನ್ನೂ ಪರಾಕ್ರಮಶಾಲಿ ಗಳನ್ನೂ ಶೂರರನ್ನೂ ಯೆರೂಸಲೇಮಿಗೆ ಕೂಡಿ ಬರ ಮಾಡಿದನು.
ಆಗ ಚೀಯೋನೆಂಬ ದಾವೀದನ ಪಟ್ಟಣದಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ ಸೊಲೊಮೋನನು ಇಸ್ರಾಯೇಲಿನ ಮಕ್ಕಳ ಲ್ಲಿರುವ ಪ್ರಭುಗಳಾದ ತಂದೆಗಳಾಗಿರುವ ಇಸ್ರಾಯೇ ಲಿನ ಹಿರಿಯರನ್ನೂ ಗೋತ್ರಗಳ ಯಜಮಾನರನ್ನೂ ಯೆರೂಸಲೇಮಿಗೆ ಕೂಡಿ ಬರಮಾಡಿದನು.
ಆಗ ಅವರು ಇಸ್ರಾಯೇಲಿನ ದೇವರಾದ ಕರ್ತನ ಪಸ್ಕವನ್ನು ಆಚರಿಸಲು ಯೆರೂ ಸಲೇಮಿನಲ್ಲಿ ಕರ್ತನ ಆಲಯಕ್ಕೆ ಬರುವ ಹಾಗೆ ಹಿಜ್ಕೀಯನು ಸಮಸ್ತ ಇಸ್ರಾಯೇಲಿಗೂ ಯೆಹೂದಕ್ಕೂ ಹೇಳಿ ಕಳುಹಿಸಿ, ಎಫ್ರಾಯಾಮ್ಯರಿಗೂ ಮನಸ್ಸೆಯ ವರಿಗೂ ಪತ್ರಗಳನ್ನು ಬರೆದನು.
ಏಳನೇ ತಿಂಗಳು ಬಂದ ತರುವಾಯ ಇಸ್ರಾಯೇಲ್ ಮಕ್ಕಳು ಪಟ್ಟಣಗಳಲ್ಲಿ ಇರುವಾಗ ಜನರು ಒಬ್ಬ ಮನುಷ್ಯನೇ ಎಂಬಂತೆ ಯೆರೂಸಲೇಮಿನಲ್ಲಿ ಕೂಡಿಕೊಂಡರು.
ಚೀಯೋನಿನಲ್ಲಿ ವಾಸಿಸುವ ಕರ್ತನನ್ನು ಕೀರ್ತಿಸಿರಿ; ಆತನ ಕ್ರಿಯೆಗಳನ್ನು ಜನಗಳಲ್ಲಿ ತಿಳಿಸಿರಿ.
ಕರ್ತನು ಸೆರೆಯವರ ನರಳುವಿಕೆಯನ್ನು ಕೇಳುವ ದಕ್ಕೂ ಮರಣಕ್ಕೆ ನೇಮಕವಾದವರನ್ನು ಬಿಡಿಸು ವದಕ್ಕೂ
ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).
ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾ ಗದು; ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು.
ಇದಲ್ಲದೆ--ಇಗೋ, ಚೀಯೋನಿನಲ್ಲಿ ಮೂಲೆ ಗಲ್ಲನ್ನು ಇಡುತ್ತೇನೆ; ಅದು ಆಯಲ್ಪಟ್ಟದ್ದು, ಅಮೂಲ್ಯ ವಾದದ್ದು; ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗ ಪಡುವದೇ ಇಲ್ಲ ಎಂದು ಬರಹದಲ್ಲಿ ಇರುತ್ತದೆ.