ಇವರ ತರುವಾಯ ದೇಶದಲ್ಲಿ ಉಳಿದ ಇಸ್ರಾಯೇಲ್ ಮಕ್ಕಳು ನಿರ್ಮೂಲ ಮಾಡದ ಅವರ ಮಕ್ಕಳು; ಇವರ ಮೇಲೆ ಸೊಲೊಮೋನನು ಇಂದಿನ ವರೆಗೂ ದಾಸತ್ವದ ಬಿಟ್ಟೀ ನೇಮಕವನ್ನಿಟ್ಟನು.
Cross references
ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಸಹೋದರರಿಗೆ ದಾಸಾನುದಾಸನಾ ಗಿರುವನು ಅಂದನು. ಅವನು--
ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.
ಗೆಜೆರಿನಲ್ಲಿ ವಾಸ ವಾಗಿದ್ದ ಕಾನಾನ್ಯರನ್ನು ಅವರು ಹೊರಡಿಸಿ ಬಿಡದೆ ಹೋದದ್ದರಿಂದ ಕಾನಾನ್ಯರು ಈ ವರೆಗೂ ಅವರಲ್ಲಿ ವಾಸವಾಗಿದ್ದು ಕಪ್ಪಕೊಡುವ ಸೇವಕರಾಗಿದ್ದಾರೆ.
ಆದರೆ ಮನಸ್ಸೆಯ ಮಕ್ಕಳು ಆ ಪಟ್ಟಣಗಳ ನಿವಾಸಿಗಳನ್ನು ಹೊರಡಿಸುವದಕ್ಕಾಗದೆ ಹೋಯಿತು. ಕಾನಾನ್ಯರು ಆ ಸೀಮೆಯಲ್ಲೇ ವಾಸವಾಗಿರಲು ಇಷ್ಟ ಪಟ್ಟರು.
ಅದಕ್ಕೆ ಯೋಸೇಫನ ಮಕ್ಕಳು--ಆ ಪರ್ವತವು ನಮಗೆ ಸಾಲದು. ಇದಲ್ಲದೆ ತಗ್ಗಿನ ಸೀಮೆಯಲ್ಲಿ ಇರುವ ಬೇತ್ಷೆಯಾನ್ನಲ್ಲಿಯೂ ಅದರ ಊರು ಗಳಲ್ಲಿಯೂ ಇಜ್ರೇಲಿನ ತಗ್ಗಿನಲ್ಲಿಯೂ ವಾಸಿಸಿರುವ ಸಮಸ್ತ ಕಾನಾನ್ಯರ ಬಳಿಯಲ್ಲಿ ಕಬ್ಬಿಣದ ರಥಗಳು ಉಂಟು ಅಂದರು.
ಬೆನ್ಯಾವಿಾನನ ಮಕ್ಕಳು ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲಿಲ್ಲ. ಆದರೆ ಯೆಬೂಸಿಯರು ಈ ದಿನದ ವರೆಗೆ ಬೆನ್ಯಾವಿಾ ನನ ಮಕ್ಕಳ ಸಂಗಡ ವಾಸವಾಗಿದ್ದಾರೆ.
ಮನಸ್ಸೆಯವರು ಬೇತ್ಷೆಯಾನ್ ತಾನಾಕ್ ದೋರ್ ಇಬ್ಲೆಯಾಮ್ ಮೆಗಿದ್ದೋ ಎಂಬ ಪಟ್ಟಣ ಗಳನ್ನು ಅವುಗಳ ಗ್ರಾಮಗಳನ್ನು ಸ್ವಾಧೀನಮಾಡಿ ಕೊಳ್ಳಲಿಲ್ಲ. ಆದದರಿಂದ ಕಾನಾನ್ಯರು ಆ ಪ್ರಾಂತ ಗಳಲ್ಲೇ ವಾಸಿಸುವದಕ್ಕೆ ದೃಢಮಾಡಿದರು.
ಹೀಗೆಯೇ ಅಮೋರಿಯರ ಮೇರೆಯು ಅಕ್ರಬ್ಬೀಮು ಹಿಡಿದು ಬಂಡೆಯಿಂದ ಮೇಲ್ಗಡೆಗೆ ಹಾದುಹೋಗುವದಾಗಿತ್ತು.
ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪದಿಂದ ಉರಿಗೊಂಡು--ನಾನು ಅವರ ತಂದೆ ಗಳಿಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಈ ಜನಾಂಗವು ವಿಾರಿ ನನ್ನ ಮಾತನ್ನು ಕೇಳದೆ ಹೋದ ದರಿಂದ
ಆಗ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲ್ಯರಿಂದ ಬಿಟ್ಟೀ ಆಳುಗಳನ್ನು ತಕ್ಕೊಂಡನು. ಆ ಬಿಟ್ಟೀ ಆಳುಗಳ ಲೆಕ್ಕವು ಮೂವತ್ತು ಸಾವಿರ ಜನವಾಗಿತ್ತು. ಅವನು ಅವರನ್ನು ಲೆಬನೋನಿಗೆ ಕಳು ಹಿಸಿದನು.
ಅರಸನಾದ ಸೊಲೊಮೋನನು ಬಿಟ್ಟೀ ಆಳುಗ ಳನ್ನು ಕೂಡಿಸಿದ ಕಾರಣವೇನಂದರೆ, ಕರ್ತನ ಮಂದಿರ ವನ್ನೂ ತನ್ನ ಮನೆಯನ್ನೂ ಮಿಲ್ಲೋವನ್ನೂ ಯೆರೂಸ ಲೇಮಿನ ಗೋಡೆಯನ್ನೂ ಹಾಚೋರನ್ನೂ ಮೆಗಿದ್ದೋ ನನ್ನೂ ಗೆಜೆರನ್ನೂ ಕಟ್ಟುವದಕ್ಕೋಸ್ಕರವೇ.
ಇವರ ತರುವಾಯ ದೇಶದಲ್ಲಿ ಇಸ್ರಾಯೇಲ್ಯರು ಉಳಿಸಿದ ಅವರ ಮಕ್ಕಳೂ ಇಂದಿನ ವರೆಗೂ ಕಪ್ಪವನ್ನು ಕೊಡುವಂತೆ ಮಾಡಿ ದನು.
ಸೊಲೊಮೋನನ ಸೇವಕರ ಮಕ್ಕಳಾದ ಸೋಟೈ ಯ ಮಕ್ಕಳೂ ಹಸ್ಸೋಫೆರತಳ ಮಕ್ಕಳೂ ಪೆರೂ ಧನ ಮಕ್ಕಳೂ
ಸೊಲೋಮೋನನ ಸೇವಕರ ಮಕ್ಕಳು ಯಾರಂದರೆ--ಸೋಟೈಯ ಮಕ್ಕಳು, ಸಫೆರತಳು ಮಕ್ಕಳು, ಪೆರೀದನ ಮಕ್ಕಳು
ಯೆಹೂದದ ಪಟ್ಟಣಗಳಲ್ಲಿ ಇಸ್ರಾಯೇಲ್ಯರೂ ಯಾಜಕರೂ ಲೇವಿಯರೂ ನೆತಿನಿಯರೂ ಸೊಲೊ ಮೋನನ ಸೇವಕರ ಮಕ್ಕಳೂ ಅವರವರು ತಮ್ಮ ತಮ್ಮ ಪಟ್ಟಣಗಳ ಸ್ವಾಸ್ತ್ಯಗಳಲ್ಲಿ ವಾಸವಾಗಿದ್ದರು;ಆದರೆ ವಾಸವಾಗಿದ್ದ ಸೀಮೆಯ ಮುಖ್ಯಸ್ಥರು ಯಾರಂದರೆ--
ಕರ್ತನು ಅವರಿಗೆ ಹೇಳಿದ ಜನಗಳನ್ನು ಅವರು ನಾಶಮಾಡದೆ ಹೋದರು.