ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.
Cross references
ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
ಬೆಳ್ಳಿ ಯಂತೆ ನೀನು ಅದನ್ನು ಹುಡುಕಿ ಬಚ್ಚಿಡಲ್ಪಟ್ಟ ಸಂಪ ತ್ತಿನಂತೆ ಅದಕ್ಕಾಗಿ ಹುಡುಕಿದರೆ,
ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದು ಕೊಂಡು, ದೇವರಾದ ಕರ್ತನನ್ನು ಹುಡುಕುವದಕ್ಕಾಗಿ ಪ್ರಾರ್ಥನೆಗಳಿಂದಲೂ ವಿಜ್ಞಾಪನೆ ಗಳಿಂದಲೂ ಆತನ ಕಡೆಗೆ ನನ್ನ ಮುಖವನ್ನು ತಿರುಗಿ ಸಿದೆನು.
ಎಲ್ಲಾ ಜನಾಂಗಗಳನ್ನು ಅದುರಿಸುತ್ತೇನೆ; ಎಲ್ಲಾ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು.
ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನೀವು ನೋಡುವಂಥವುಗಳನ್ನು ಮತ್ತು ಕೇಳುವಂಥವುಗಳನ್ನು ಅನೇಕ ಪ್ರವಾದಿಗಳು ಮತ್ತು ನೀತಿವಂತರು ನೋಡುವದಕ್ಕೂ ಕೇಳುವದಕ್ಕೂ ಅಪೇಕ್ಷಿಸಿದರು; ಆದರೆ ಅವರು ನೋಡಲಿಲ್ಲ ಮತ್ತು ಕೇಳಲಿಲ್ಲ.
ಮನುಷ್ಯಕುಮಾರನು ತನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೋಗುತ್ತಾನೆ; ಆದರೆ ಮನುಷ್ಯಕುಮಾರನು ಯಾವನಿಂದ ಹಿಡಿದು ಕೊಡಲ್ಪಡುತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಅಂದನು.
ಯಾಕಂದರೆ ಅನೇಕ ಪ್ರವಾದಿಗಳೂ ಅರಸರೂ ನೀವು ನೋಡು ವಂಥವುಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಿಲ್ಲ ಮತ್ತು ನೀವು ಕೇಳುವಂಥವುಗಳನ್ನು ಕೇಳ ಬೇಕೆಂದು ಅಪೇಕ್ಷಿಸಿದರೂ ಅವರು ಕೇಳಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಆಗ ಆತನು ಅವರಿಗೆ--ಓ ಬುದ್ದಿಹೀನರೇ, ಪ್ರವಾದಿಗಳು ಹೇಳಿ ದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯದವರೇ,
ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.
ಅವರು ಪ್ರತ್ಯುತ್ತರವಾಗಿ ಅವನಿಗೆ--ನೀನು ಸಹ ಗಲಿಲಾಯದವನೋ? ಗಲಿ ಲಾಯದಲ್ಲಿ ಪ್ರವಾದಿಯು ಏಳುವದೇ ಇಲ್ಲ, ಪರಿ ಶೋಧಿಸಿ ನೋಡು ಅಂದರು.ಪ್ರತಿಯೊಬ್ಬನು ತನ್ನ ಸ್ವಂತ ಮನೆಗೆ ಹೋದನು.
ಯಾಕಂದರೆ ಪಿತೃಗಳಿಗೆ ಮೋಶೆಯು ನಿಜವಾಗಿಯೂ ಹೇಳಿದ್ದೇನಂದರೆ--ನನ್ನ ಹಾಗೆ ಒಬ್ಬ ಪ್ರವಾದಿಯನ್ನು ನಿಮ್ಮ ಸಹೋದರರಲ್ಲಿ ನಿಮ್ಮ ದೇವರಾದ ಕರ್ತನು ನಿಮಗಾಗಿ ಎಬ್ಬಿಸುವನು; ಆತನು ನಿಮಗೆ ಹೇಳುವ ಎಲ್ಲಾ ವಿಷಯಗಳಿಗೆ ನೀವು ಕಿವಿಗೊಡತಕ್ಕದ್ದು;
ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
ಆತನ ಹೆಸರಿನಲ್ಲಿ ನಂಬಿಕೆಯಿ ಡುವ ಪ್ರತಿಯೊಬ್ಬನು ಆತನಲ್ಲಿ ಪಾಪ ಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿ ಗಳೆಲ್ಲರು ಸಾಕ್ಷಿಕೊಡುತ್ತಾರೆ ಅಂದನು.
ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.
ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು.
ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು.
ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು.
ನಾವಿಲ್ಲದೆ ಅವರು ಸಿದ್ಧಿಗೆ ಬರಬಾರದೆಂದು ದೇವರು ನಮಗೋಸ್ಕರ ಶ್ರೇಷ್ಠ ವಾದದ್ದನ್ನು ಏರ್ಪಡಿಸಿದ್ದನು.
ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು.
ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು.