ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.
Cross references
ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿದವುಗ ಳಾಗಿಯೂ ರೆಕ್ಕೆಗಳಿಂದ ಕರುಣಾಸನವನ್ನು ಮುಚ್ಚುವವು ಗಳಾಗಿಯೂ ಒಂದರ ಮುಖವನ್ನು ಒಂದು ನೋಡು ವವುಗಳಾಗಿಯೂ ಇರಬೇಕು. ಕೆರೂಬಿಗಳ ಮುಖಗಳು ಕರುಣಾಸನದ ಕಡೆಗೆ ತಿರುಗಿರಬೇಕು.
ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು.
ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು;
ಬಳಿಕ ಉನ್ನತದಿಂದ ಆತ್ಮ ನಮ್ಮ ಮೇಲೆ ಸುರಿ ಸಲ್ಪಡುವಾಗ, ಆಗ ಅರಣ್ಯಗಳು ಪೈರಿನ ಹೊಲ ವಾಗುವದು. ಪೈರಿನ ಹೊಲವು ಅರಣ್ಯವೆಂದೆಣಿಸಲ್ಪ ಡುವದು.
ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು.
ನಮ್ಮ ಸುದ್ಧಿಯನ್ನು ಯಾರು ನಂಬಿದ್ದಾರೆ? ಕರ್ತನ ತೋಳು ಯಾರಿಗೆ ಪ್ರಕಟವಾ ಯಿತು?
ಆಗ ಆ ರಹಸ್ಯವು ದಾನಿಯೇಲನಿಗೆ ರಾತ್ರಿ ದರ್ಶನ ದಲ್ಲಿ ಪ್ರಕಟವಾಯಿತು; ಆಗ ದಾನಿಯೇಲನು ಪರಲೋಕ ದೇವರನ್ನು ಸ್ತುತಿಸಿದನು.
ಅಗಾಧವಾದವುಗಳನ್ನು, ರಹಸ್ಯವಾದವು ಗಳನ್ನು ಪ್ರಕಟಮಾಡುತ್ತಾನೆ; ಕತ್ತಲೆಯಲ್ಲಿ ಇರುವಂತ ವುಗಳನ್ನು ತಿಳಿದಿರುವಂತವನಾಗಿದ್ದಾನೆ; ಬೆಳಕು ಆತ ನೊಳಗೆ ವಾಸಿಸುತ್ತದೆ.
ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ,
ಅರಸನು ದಾನಿಯೇಲನಿಗೆ ಉತ್ತರವಾಗಿ--ನೀನು ಈ ರಹಸ್ಯವನ್ನು ಪ್ರಕಟ ಮಾಡಲು ಸಮರ್ಥನಾದದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ ಅರಸುಗಳ ಕರ್ತನಾಗಿಯೂ ರಹಸ್ಯಗಳನ್ನು ಪ್ರಕಟಮಾಡುವಾತ ನಾಗಿಯೂ ಆಗಿದ್ದಾನೆ ಅಂದನು.
ಆ ಮೇಲೆ ಒಬ್ಬ ಪರಿಶುದ್ಧನು ಮಾತನಾಡುವದನ್ನು ಕೇಳಿದೆನು; ಮಾತನಾಡಿದಾತನಿಗೆ ಮತ್ತೊಬ್ಬ ಪರಿ ಶುದ್ಧನು ಹೇಳಿದ್ದೇನಂದರೆ--ನಿತ್ಯ ಯಜ್ಞವನ್ನು ನಿಲ್ಲಿಸು ವದೂ ಹಾಳು ಮಾಡುವ ಅಪರಾಧವನ್ನು ತಡೆಯು ವದೂ ಪರಿಶುದ್ಧ ಸ್ಥಳವನ್ನೂ ಸೈನ್ಯವನ್ನೂ ಕಾಲಡಿಯಲ್ಲಿ ತುಳಿಯುವದೂ ಆಗುವಂತೆ ಕನಸು ಎಷ್ಟು ಕಾಲ ನಿಲ್ಲುವದು ಅಂದಾಗ
ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
ಪಾರಸಿಯ ಅರಸನಾದ ಕೋರೇಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆ ಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು. ಬಹಳ ಕಷ್ಟದ ಆ ಸಂಗತಿಯು ಸತ್ಯವಾಗಿದೆ. ಅವನು ಕಂಡ ದರ್ಶನವನ್ನು ಗ್ರಹಿಸಿ ಆ ಸಂಗತಿಯನ್ನು ಮಂದಟ್ಟು ಮಾಡಿಕೊಂಡನು.
ಆಗ ದಾನಿಯೇಲನೆಂಬ ನಾನು ನೋಡಿದೆನು; ಇಗೋ, ಬೇರೆ ಇಬ್ಬರಲ್ಲಿ ಒಬ್ಬನು ನದಿಯ ತೀರದ ಈ ಕೊನೆಗೂ ಮತ್ತೊಬ್ಬನು ನದಿಯ ತೀರದ ಆ ಕೊನೆಗೂ ನಿಂತಿದ್ದರು.
ದಾನಿಯೇಲನೇ, ನಿನ್ನ ದಾರಿಯಲ್ಲಿ ಹೋಗು; ಈ ಮಾತುಗಳು ಅಂತ್ಯಕಾಲದ ವರೆಗೂ ಮುಚ್ಚಲ್ಪಟ್ಟು ಮುದ್ರೆ ಹಾಕಲ್ಪ ಟ್ಟಿವೆ.
ಆದರೆ ನೀನು ಅಂತ್ಯದ ವರೆಗೂ ಹೋಗು; ಯಾಕಂದರೆ ನೀನು ವಿಶ್ರಮಿಸಿಕೊಳ್ಳುವಿ ಮತ್ತು ದಿನಗಳ ಅಂತ್ಯದಲ್ಲಿ ನಿನ್ನ ಭಾಗದಲ್ಲಿ ನಿಲ್ಲುವಿ (ಎಂದು ಹೇಳಿದನು.)
ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು.
ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.
ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಇಲ್ಲವೆ ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದ
ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.
ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.
ಕರ್ತನಾಗಿರುವ ಕ್ರಿಸ್ತನನ್ನು ಅವನು ನೋಡುವದಕ್ಕಿಂತ ಮುಂಚೆ ಮರಣ ಹೊಂದುವದಿಲ್ಲವೆಂದು ಪರಿಶುದ್ಧಾತ್ಮನಿಂದ ಅವನಿಗೆ ಪ್ರಕಟವಾಗಿತ್ತು.
ಅವರು ಊರುಗಳನ್ನು ಹಾದು ಹೋಗುವಾಗ ಸುವಾರ್ತೆಯನ್ನು ಸಾರುತ್ತಾ ಎಲ್ಲಾ ಕಡೆಗಳಲ್ಲಿ ಸ್ವಸ್ಥ ಮಾಡುತ್ತಾ ಹೋದರು.
ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆದರಿಕನು ಅಂದರೆ ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ ಆತನು ನನ್ನ ವಿಷಯವಾಗಿ ಸಾಕ್ಷಿ ಕೊಡುವನು.ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.
ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಯಾಕಂದರೆ ನಾನು ಹೋಗದಿದ್ದರೆ ಆದರಿಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸುವೆನು.
ಆಗ ರಭಸವಾಗಿ ಬೀಸುವ ಬಲವಾದ ಗಾಳಿಯೋಪಾದಿಯಲ್ಲಿ ಒಂದು ಶಬ್ದವು ಆಕಾಶದಿಂದ ಫಕ್ಕನೆ ಬಂದು ಅವರು ಕೂತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.
ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿಸು ವರು; ಇದಲ್ಲದೆ ನಿಮ್ಮ ಯೌವನಸ್ಥರಿಗೆ ದರ್ಶನಗಳಾ ಗುವವು; ನಿಮ್ಮ ವೃದ್ಧರಿಗೆ ಕನಸುಗಳು ಬೀಳುವವು ಎಂದು ದೇವರು ಹೇಳುತ್ತಾನೆ.
ದೇವರ ಬಲಗೈಯಿಂದ ಆತನು ಉನ್ನತ ಸ್ಥಾನಕ್ಕೆ ಏರಿಸಲ್ಪಟ್ಟು ತಂದೆಯಿಂದ ಪವಿತ್ರಾತ್ಮನ ವಾಗ್ದಾನವನ್ನು ಹೊಂದಿ ನೀವು ಈಗ ನೋಡಿ ಕೇಳುವದನ್ನು ಆತನು ಸುರಿಸಿದ್ದಾನೆ.
ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ--ಜನರ ಅಧಿಕಾರಿಗಳೇ, ಇಸ್ರಾಯೇಲಿನ ಹಿರಿಯರೇ,
ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.
ಹೀಗಿರಲಾಗಿ ಅವರು ಸಾಕ್ಷಿ ಕೊಡುತ್ತಾ ಕರ್ತನ ವಾಕ್ಯವನ್ನು ಸಾರುತ್ತಾ ಯೆರೂಸ ಲೇಮಿಗೆ ಹಿಂತಿರುಗಿ ಹೊರಟು ಸಮಾರ್ಯದವರ ಅನೇಕ ಗ್ರಾಮಗಳಲ್ಲಿ ಸುವಾರ್ತೆಯನ್ನು ಸಾರಿದರು.
ಪೇತ್ರನು ಈ ಮಾತುಗಳನ್ನು ಇನ್ನೂ ಹೇಳು ತ್ತಿರುವಾಗ ವಾಕ್ಯವನ್ನು ಕೇಳಿದವರೆಲ್ಲರ ಮೇಲೆ ಪವಿ ತ್ರಾತ್ಮನು ಇಳಿದನು.
ಅವನು ಆ ದರ್ಶನವನ್ನು ನೋಡಿದ ತರುವಾಯ ಅವರಿಗೆ ಸುವಾರ್ತೆಯನ್ನು ಸಾರುವದಕ್ಕೆ ಕರ್ತನು ನಿಶ್ಚಯವಾಗಿ ನಮ್ಮನ್ನು ಕರೆದಿದ್ದಾನೆಂದು ತಿಳುಕೊಂಡು ಕೂಡಲೆ ಮಕೆದೋನ್ಯಕ್ಕೆ ಹೋಗುವಂತೆ ಪ್ರಯತ್ನಿ ಸಿದೆವು.
ಹೀಗೆ ನಾನಾದರೋ ರೋಮ್ನಲ್ಲಿರುವ ನಿಮಗೂ ಸುವಾರ್ತೆಯನ್ನು ಸಾರಲು ಸಿದ್ಧನಾಗಿದ್ದೇನೆ.
ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.
ಇದ ಲ್ಲದೆ ಸಾರುವವರನ್ನು ಕಳುಹಿಸದಿದ್ದರೆ ಅವರು ಸಾರು ವದು ಹೇಗೆ? ಮತ್ತು--ಸಮಾಧಾನದ ಸುವಾರ್ತೆ ಯನ್ನು ಸಾರುವವರ ಮತ್ತು ಸಂತೋಷದ ಸುವರ್ತ ಮಾನವನ್ನು ತರುವವರ ಪಾದಗಳು ಎಷ್ಟೋ ಅಂದ ವಾಗಿವೆ ಎಂದು ಬರೆದದೆ.
ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.