Home Bibles 1 ಪೇತ್ರ 1:12 · ಕನ್ನಡ ಬೈಬಲ್
1 ಪೇತ್ರ 1:12 · ಕನ್ನಡ ಬೈಬಲ್

ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.

Cross references

ನಿರ್ಗಮಕಾಂಡ 25:20

ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿದವುಗ ಳಾಗಿಯೂ ರೆಕ್ಕೆಗಳಿಂದ ಕರುಣಾಸನವನ್ನು ಮುಚ್ಚುವವು ಗಳಾಗಿಯೂ ಒಂದರ ಮುಖವನ್ನು ಒಂದು ನೋಡು ವವುಗಳಾಗಿಯೂ ಇರಬೇಕು. ಕೆರೂಬಿಗಳ ಮುಖಗಳು ಕರುಣಾಸನದ ಕಡೆಗೆ ತಿರುಗಿರಬೇಕು.

ಸಾಮೇತಿಗಳು 1:23

ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು.

ಯೆಶಾಯ 11:2

ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು;

ಯೆಶಾಯ 32:15

ಬಳಿಕ ಉನ್ನತದಿಂದ ಆತ್ಮ ನಮ್ಮ ಮೇಲೆ ಸುರಿ ಸಲ್ಪಡುವಾಗ, ಆಗ ಅರಣ್ಯಗಳು ಪೈರಿನ ಹೊಲ ವಾಗುವದು. ಪೈರಿನ ಹೊಲವು ಅರಣ್ಯವೆಂದೆಣಿಸಲ್ಪ ಡುವದು.

ಯೆಶಾಯ 44:3

ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು.

ಯೆಶಾಯ 53:1

ನಮ್ಮ ಸುದ್ಧಿಯನ್ನು ಯಾರು ನಂಬಿದ್ದಾರೆ? ಕರ್ತನ ತೋಳು ಯಾರಿಗೆ ಪ್ರಕಟವಾ ಯಿತು?

ದಾನಿಯೇಲ 2:19

ಆಗ ಆ ರಹಸ್ಯವು ದಾನಿಯೇಲನಿಗೆ ರಾತ್ರಿ ದರ್ಶನ ದಲ್ಲಿ ಪ್ರಕಟವಾಯಿತು; ಆಗ ದಾನಿಯೇಲನು ಪರಲೋಕ ದೇವರನ್ನು ಸ್ತುತಿಸಿದನು.

ದಾನಿಯೇಲ 2:22

ಅಗಾಧವಾದವುಗಳನ್ನು, ರಹಸ್ಯವಾದವು ಗಳನ್ನು ಪ್ರಕಟಮಾಡುತ್ತಾನೆ; ಕತ್ತಲೆಯಲ್ಲಿ ಇರುವಂತ ವುಗಳನ್ನು ತಿಳಿದಿರುವಂತವನಾಗಿದ್ದಾನೆ; ಬೆಳಕು ಆತ ನೊಳಗೆ ವಾಸಿಸುತ್ತದೆ.

ದಾನಿಯೇಲ 2:28

ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ,

ದಾನಿಯೇಲ 2:47

ಅರಸನು ದಾನಿಯೇಲನಿಗೆ ಉತ್ತರವಾಗಿ--ನೀನು ಈ ರಹಸ್ಯವನ್ನು ಪ್ರಕಟ ಮಾಡಲು ಸಮರ್ಥನಾದದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ ಅರಸುಗಳ ಕರ್ತನಾಗಿಯೂ ರಹಸ್ಯಗಳನ್ನು ಪ್ರಕಟಮಾಡುವಾತ ನಾಗಿಯೂ ಆಗಿದ್ದಾನೆ ಅಂದನು.

ದಾನಿಯೇಲ 8:13

ಆ ಮೇಲೆ ಒಬ್ಬ ಪರಿಶುದ್ಧನು ಮಾತನಾಡುವದನ್ನು ಕೇಳಿದೆನು; ಮಾತನಾಡಿದಾತನಿಗೆ ಮತ್ತೊಬ್ಬ ಪರಿ ಶುದ್ಧನು ಹೇಳಿದ್ದೇನಂದರೆ--ನಿತ್ಯ ಯಜ್ಞವನ್ನು ನಿಲ್ಲಿಸು ವದೂ ಹಾಳು ಮಾಡುವ ಅಪರಾಧವನ್ನು ತಡೆಯು ವದೂ ಪರಿಶುದ್ಧ ಸ್ಥಳವನ್ನೂ ಸೈನ್ಯವನ್ನೂ ಕಾಲಡಿಯಲ್ಲಿ ತುಳಿಯುವದೂ ಆಗುವಂತೆ ಕನಸು ಎಷ್ಟು ಕಾಲ ನಿಲ್ಲುವದು ಅಂದಾಗ

ದಾನಿಯೇಲ 9:24

ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.

ದಾನಿಯೇಲ 10:1

ಪಾರಸಿಯ ಅರಸನಾದ ಕೋರೇಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆ ಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು. ಬಹಳ ಕಷ್ಟದ ಆ ಸಂಗತಿಯು ಸತ್ಯವಾಗಿದೆ. ಅವನು ಕಂಡ ದರ್ಶನವನ್ನು ಗ್ರಹಿಸಿ ಆ ಸಂಗತಿಯನ್ನು ಮಂದಟ್ಟು ಮಾಡಿಕೊಂಡನು.

ದಾನಿಯೇಲ 12:5

ಆಗ ದಾನಿಯೇಲನೆಂಬ ನಾನು ನೋಡಿದೆನು; ಇಗೋ, ಬೇರೆ ಇಬ್ಬರಲ್ಲಿ ಒಬ್ಬನು ನದಿಯ ತೀರದ ಈ ಕೊನೆಗೂ ಮತ್ತೊಬ್ಬನು ನದಿಯ ತೀರದ ಆ ಕೊನೆಗೂ ನಿಂತಿದ್ದರು.

ದಾನಿಯೇಲ 12:9

ದಾನಿಯೇಲನೇ, ನಿನ್ನ ದಾರಿಯಲ್ಲಿ ಹೋಗು; ಈ ಮಾತುಗಳು ಅಂತ್ಯಕಾಲದ ವರೆಗೂ ಮುಚ್ಚಲ್ಪಟ್ಟು ಮುದ್ರೆ ಹಾಕಲ್ಪ ಟ್ಟಿವೆ.

ದಾನಿಯೇಲ 12:13

ಆದರೆ ನೀನು ಅಂತ್ಯದ ವರೆಗೂ ಹೋಗು; ಯಾಕಂದರೆ ನೀನು ವಿಶ್ರಮಿಸಿಕೊಳ್ಳುವಿ ಮತ್ತು ದಿನಗಳ ಅಂತ್ಯದಲ್ಲಿ ನಿನ್ನ ಭಾಗದಲ್ಲಿ ನಿಲ್ಲುವಿ (ಎಂದು ಹೇಳಿದನು.)

ಯೋವೇಲ 2:28

ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು.

ಆಮೋಸ 3:7

ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.

ಜೆಕರ್ಯ 12:10

ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.

ಮತ್ತಾಯ 11:25

ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.

ಮತ್ತಾಯ 11:27

ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಇಲ್ಲವೆ ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದ

ಮತ್ತಾಯ 16:17

ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.

ಮಾರ್ಕ 16:15

ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.

ಲೂಕ 2:26

ಕರ್ತನಾಗಿರುವ ಕ್ರಿಸ್ತನನ್ನು ಅವನು ನೋಡುವದಕ್ಕಿಂತ ಮುಂಚೆ ಮರಣ ಹೊಂದುವದಿಲ್ಲವೆಂದು ಪರಿಶುದ್ಧಾತ್ಮನಿಂದ ಅವನಿಗೆ ಪ್ರಕಟವಾಗಿತ್ತು.

ಲೂಕ 9:6

ಅವರು ಊರುಗಳನ್ನು ಹಾದು ಹೋಗುವಾಗ ಸುವಾರ್ತೆಯನ್ನು ಸಾರುತ್ತಾ ಎಲ್ಲಾ ಕಡೆಗಳಲ್ಲಿ ಸ್ವಸ್ಥ ಮಾಡುತ್ತಾ ಹೋದರು.

ಲೂಕ 15:10

ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.

ಯೋಹಾನ 15:26

ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆದರಿಕನು ಅಂದರೆ ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ ಆತನು ನನ್ನ ವಿಷಯವಾಗಿ ಸಾಕ್ಷಿ ಕೊಡುವನು.ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.

ಯೋಹಾನ 16:7

ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಯಾಕಂದರೆ ನಾನು ಹೋಗದಿದ್ದರೆ ಆದರಿಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸುವೆನು.

ಅಪೋಸ್ತಲರ ಕೃತ್ಯಗಳು 2:2

ಆಗ ರಭಸವಾಗಿ ಬೀಸುವ ಬಲವಾದ ಗಾಳಿಯೋಪಾದಿಯಲ್ಲಿ ಒಂದು ಶಬ್ದವು ಆಕಾಶದಿಂದ ಫಕ್ಕನೆ ಬಂದು ಅವರು ಕೂತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.

ಅಪೋಸ್ತಲರ ಕೃತ್ಯಗಳು 2:17

ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿಸು ವರು; ಇದಲ್ಲದೆ ನಿಮ್ಮ ಯೌವನಸ್ಥರಿಗೆ ದರ್ಶನಗಳಾ ಗುವವು; ನಿಮ್ಮ ವೃದ್ಧರಿಗೆ ಕನಸುಗಳು ಬೀಳುವವು ಎಂದು ದೇವರು ಹೇಳುತ್ತಾನೆ.

ಅಪೋಸ್ತಲರ ಕೃತ್ಯಗಳು 2:33

ದೇವರ ಬಲಗೈಯಿಂದ ಆತನು ಉನ್ನತ ಸ್ಥಾನಕ್ಕೆ ಏರಿಸಲ್ಪಟ್ಟು ತಂದೆಯಿಂದ ಪವಿತ್ರಾತ್ಮನ ವಾಗ್ದಾನವನ್ನು ಹೊಂದಿ ನೀವು ಈಗ ನೋಡಿ ಕೇಳುವದನ್ನು ಆತನು ಸುರಿಸಿದ್ದಾನೆ.

ಅಪೋಸ್ತಲರ ಕೃತ್ಯಗಳು 4:8

ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ--ಜನರ ಅಧಿಕಾರಿಗಳೇ, ಇಸ್ರಾಯೇಲಿನ ಹಿರಿಯರೇ,

ಅಪೋಸ್ತಲರ ಕೃತ್ಯಗಳು 4:31

ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.

ಅಪೋಸ್ತಲರ ಕೃತ್ಯಗಳು 8:25

ಹೀಗಿರಲಾಗಿ ಅವರು ಸಾಕ್ಷಿ ಕೊಡುತ್ತಾ ಕರ್ತನ ವಾಕ್ಯವನ್ನು ಸಾರುತ್ತಾ ಯೆರೂಸ ಲೇಮಿಗೆ ಹಿಂತಿರುಗಿ ಹೊರಟು ಸಮಾರ್ಯದವರ ಅನೇಕ ಗ್ರಾಮಗಳಲ್ಲಿ ಸುವಾರ್ತೆಯನ್ನು ಸಾರಿದರು.

ಅಪೋಸ್ತಲರ ಕೃತ್ಯಗಳು 10:44

ಪೇತ್ರನು ಈ ಮಾತುಗಳನ್ನು ಇನ್ನೂ ಹೇಳು ತ್ತಿರುವಾಗ ವಾಕ್ಯವನ್ನು ಕೇಳಿದವರೆಲ್ಲರ ಮೇಲೆ ಪವಿ ತ್ರಾತ್ಮನು ಇಳಿದನು.

ಅಪೋಸ್ತಲರ ಕೃತ್ಯಗಳು 16:10

ಅವನು ಆ ದರ್ಶನವನ್ನು ನೋಡಿದ ತರುವಾಯ ಅವರಿಗೆ ಸುವಾರ್ತೆಯನ್ನು ಸಾರುವದಕ್ಕೆ ಕರ್ತನು ನಿಶ್ಚಯವಾಗಿ ನಮ್ಮನ್ನು ಕರೆದಿದ್ದಾನೆಂದು ತಿಳುಕೊಂಡು ಕೂಡಲೆ ಮಕೆದೋನ್ಯಕ್ಕೆ ಹೋಗುವಂತೆ ಪ್ರಯತ್ನಿ ಸಿದೆವು.

ರೋಮಾಪುರದವರಿಗೆ 1:15

ಹೀಗೆ ನಾನಾದರೋ ರೋಮ್‌ನಲ್ಲಿರುವ ನಿಮಗೂ ಸುವಾರ್ತೆಯನ್ನು ಸಾರಲು ಸಿದ್ಧನಾಗಿದ್ದೇನೆ.

ರೋಮಾಪುರದವರಿಗೆ 1:17

ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.

ರೋಮಾಪುರದವರಿಗೆ 10:15

ಇದ ಲ್ಲದೆ ಸಾರುವವರನ್ನು ಕಳುಹಿಸದಿದ್ದರೆ ಅವರು ಸಾರು ವದು ಹೇಗೆ? ಮತ್ತು--ಸಮಾಧಾನದ ಸುವಾರ್ತೆ ಯನ್ನು ಸಾರುವವರ ಮತ್ತು ಸಂತೋಷದ ಸುವರ್ತ ಮಾನವನ್ನು ತರುವವರ ಪಾದಗಳು ಎಷ್ಟೋ ಅಂದ ವಾಗಿವೆ ಎಂದು ಬರೆದದೆ.

ರೋಮಾಪುರದವರಿಗೆ 15:19

ಹೀಗೆ ಯೆರೂಸಲೇಮ್‌ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.

Interlinear

Choose Theme