ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ
Cross references
ಹೀಗಿರುವದರಿಂದ ನಿನ್ನ ದೇವರಾದ ಕರ್ತನ ಮಾತಿಗೆ ವಿಧೇಯರಾಗಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆಗಳನ್ನೂ ನಿಯಮಗಳನ್ನೂ ಕೈಕೊಳ್ಳಬೇಕು ಎಂದು ಹೇಳಿದನು.
ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.
ಹೀಗಿರಲಾಗಿ ನಾವು ಬಾಪ್ತಿಸ್ಮ ಮಾಡಿಸಿ ಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗು ವದಕ್ಕೆ ಆತನೊಂದಿಗೆ ಹೂಣಲ್ಪಟ್ಟೆವು; ಕ್ರಿಸ್ತನು ತಂದೆಯ ಮಹಿಮೆಯಿಂದ ಹೇಗೆ ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೋ ಹಾಗೆಯೇ ನಾವು ಕೂಡ ಜೀವ ದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು.
ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ;
ಅವರ ಮನಸ್ಸು ಮೊಬ್ಬಾಗಿ ಹೋಗಿದೆ. ಅವರು ತಮ್ಮ ಹೃದಯದ ಕುರುಡುತನದ ನಿಮಿತ್ತದಿಂದಲೂ ತಮ್ಮಲ್ಲಿರುವ ಆಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ.
ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.
ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.
ದೇವರನ್ನರಿಯದ ಅನ್ಯಜನಗಳಂತೆ ಕಾಮಾಭಿಲಾಷೆಗೆ ಒಳಪಡಬಾರದು.
ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು.