ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟು ಈ ಅಂತ್ಯ ಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.
Cross references
ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
ನಿತ್ಯತ್ವದಿಂದ ಇಲ್ಲವೆ ಆರಂಭದಿಂದ, ಭೂಮಿಯು ಇರುವದಕ್ಕೆ ಮುಂಚೆ ನಾನು ಸ್ಥಾಪಿಸಲ್ಪ ಟ್ಟೆನು.
ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
ಇದಲ್ಲದೆ ಅಬ್ರಹಾಮನಿಗೆ--ನಿನ್ನ ಸಂತ ತಿಯ ಮೂಲಕ ಭೂಲೋಕದ ಎಲ್ಲಾ ಕುಲದವರು ಆಶೀರ್ವದಿಸಲ್ಪಡುವರು ಎಂದು ದೇವರು ನಮ್ಮ ಪಿತೃಗಳೊಂದಿಗೆ ಮಾಡಿದ ಒಡಂಬಡಿಕೆಯ ಮಕ್ಕಳೂ ಪ್ರವಾದಿಗಳ ಮಕ್ಕಳೂ ನೀವಾಗಿದ್ದೀರಿ.ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ
ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ
ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ
ನಾವು ಪ್ರೀತಿಯಲ್ಲಿದ್ದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಆತನು ಜಗತ್ತಿಗೆ ಅಸ್ತಿವಾರ ಹಾಕುವದಕ್ಕಿಂತ ಮುಂಚೆ ನಮ್ಮನು ಕ್ರಿಸ್ತನಲ್ಲಿ) ಆರಿಸಿಕೊಂಡನು.
ಅದೇನಂದರೆ ಕಾಲವು ಪರಿಪೂರ್ಣವಾದ ಯುಗದಲ್ಲಿ ಆತನು ಪರಲೋಕದಲ್ಲಿರುವವುಗಳನ್ನೂ ಭೂ ಲೋಕದಲ್ಲಿರುವವುಗಳನ್ನೂ ಆತನಲ್ಲಿ ಅಂದರೆ ಕ್ರಿಸ್ತನಲ್ಲಿ ಎಲ್ಲವನ್ನು ಒಂದುಗೂಡಿಸಬೇಕೆಂದಿದ್ದನು.
ಸಮಸ್ತ ವನ್ನು ಯೇಸು ಕ್ರಿಸ್ತನಿಂದ ಸೃಷ್ಟಿಸಿದ ದೇವರಲ್ಲಿ ಲೋಕಾದಿ ಯಿಂದ ಮರೆಯಾಗಿದ್ದ ಮರ್ಮದ ಅನ್ಯೋನ್ಯತೆಯು ಎಲ್ಲರಿಗೂ ತೋರುವಂತೆ ಮಾಡುವ ಹಾಗೆಯೂ
ನಮ್ಮ ಕರ್ತನಾದ ಕ್ರಿಸ್ತ ಯೇಸು ವಿನಲ್ಲಿ ಆತನು ಸಂಕಲ್ಪಿಸಿದ ಶಾಶ್ವತವಾದ ಸಂಕಲ್ಪದಂತೆ ಇದಾಯಿತು.
ಆ ವಾಕ್ಯವು ಹಿಂದಿನ ಯುಗಗಳಿಂದಲೂ ತಲಾತಲಾಂತರಗಳಿಂದಲೂ ಮರೆ ಯಾಗಿತ್ತು; ಅದು ಈಗಿನ ಕಾಲದಲ್ಲಿ ಆತನ ಪರಿಶುದ್ಧರಿಗೆ ತಿಳಿಸಲ್ಪಟ್ಟಿದೆ;
ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು
ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು.
ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.
(ಆ ಜೀವವು ಪ್ರತ್ಯಕ್ಷವಾಯಿತು, ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತೇವೆ).
ಪಾಪಗಳನ್ನು ನಿವಾರಣೆ ಮಾಡುವದಕ್ಕಾಗಿ ಆತನು ಪ್ರತ್ಯಕ್ಷನಾದ ನೆಂಬದು ನಿಮಗೆ ಗೊತ್ತಾಗಿದೆ; ಆತನಲ್ಲಿ ಪಾಪವಿಲ್ಲ.
ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.
ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ.
ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.