ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.
Cross references
ನನ್ನ ಪ್ರಾಣವೇ,ನೀನು ಕುಗ್ಗಿಹೋಗಿರುವದೇನು? ನನ್ನಲ್ಲಿ ನೀನು ಯಾಕೆ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು; ನಾನು ಆತನ ಸಹಾಯಕ್ಕಾಗಿ ಆತನನ್ನು ಇನ್ನೂ ಕೊಂಡಾಡುವೆನು.
ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನ ವರನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತ ನಲ್ಲ;
ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವದಕ್ಕೂ ಕೆಡವುವ ದಕ್ಕೂ ನಾಶಮಾಡುವದಕ್ಕೂ ಮಾತಾಡುತ್ತೇನೋ
ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.
ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ;
ಆಗ ಯೇಸು--ನನ್ನನ್ನು ನಂಬುವವನು ನನ್ನನ್ನಲ್ಲ. ನನ್ನನ್ನು ಕಳುಹಿಸಿಕೊಟ್ಟಾತನನ್ನೇ ನಂಬಿದ್ದಾನೆ.
ಅವನು ಹೊರಗೆ ಹೋದಮೇಲೆ ಯೇಸು-- ಈಗ ಮನುಷ್ಯಕುಮಾರನು ಮಹಿಮೆಪಟ್ಟಿದ್ದಾನೆ. ದೇವರು ಆತನಲ್ಲಿ ಮಹಿಮೆಪಟ್ಟಿದ್ದಾನೆ.
ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.
ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
ಯೇಸು ಈ ಮಾತುಗಳನ್ನು ಹೇಳಿ ಪರಲೋಕದ ಕಡೆಗೆ ಕಣ್ಣುಗಳನ್ನೆತ್ತಿ-- ತಂದೆಯೇ, ಈಗ ಗಳಿಗೆ ಬಂದಿದೆ; ನಿನ್ನ ಮಗನನ್ನು ಮಹಿಮೆಪಡಿಸು; ಆಗ ನಿನ್ನ ಮಗನೂ ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.
ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು.
ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ.
ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.
ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.
ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.
ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನನ್ನು ನಂಬುವ ನಾವು ನಂಬಿಕೆಯಿಂದ ನೀತಿವಂತರೆಂದು ಎಣಿಸಲ್ಪಡುವಂತೆ ನಮಗೋಸ್ಕರವೂ ಬರೆಯಲ್ಪಟ್ಟಿದೆ.ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.
ನೀನು ಕರ್ತನಾದ ಯೇಸು ವನ್ನು ಬಾಯಿಂದ ಅರಿಕೆಮಾಡಿ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ್ದಾನೆಂದು ನಿನ್ನ ಹೃದಯದಲ್ಲಿ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ.
ಕ್ರಿಸ್ತನ ಮಹಿಮೆಯು ಸ್ತುತಿಸಲ್ಪಡುವಂತೆ ಆತನಲ್ಲಿ ನಾವು ಮೊದಲು ನಂಬಿಕೆಯಿಟ್ಟೆವು.
ಹೀಗಿರಲಾಗಿ ನಾನು ಸಹ ಕರ್ತನಾದ ಯೇಸು ವಿನಲ್ಲಿರುವ ನಿಮ್ಮ ನಂಬಿಕೆಯ ವಿಷಯವಾಗಿಯೂ ಪರಿಶುದ್ಧರೆಲ್ಲರ ಕಡೆಗಿರುವ ಪ್ರೀತಿಯ ವಿಷಯವಾಗಿ ಯೂ ಕೇಳಿ
ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ
ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
ಅನ್ಯಜನಗಳಲ್ಲಿ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ (ಪರಿಶುದ್ಧರಿಗೆ) ತಿಳಿಸುವದಕ್ಕೆ ಮನಸ್ಸು ಮಾಡಿ ಕೊಂಡನು. ಈ ಮರ್ಮವು ಏನೆಂದರೆ ನಿಮ್ಮಲ್ಲಿರುವ ಕ್ರಿಸ್ತನು ಮಹಿಮೆಯ ನಿರೀಕ್ಷೆಯಾಗಿದ್ದಾನೆ ಎಂಬದೇ.
ನಮ್ಮ ರಕ್ಷಕನಾದ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕರ್ತನಾದ ಯೇಸು ಕ್ರಿಸ್ತನ ಆಜ್ಞಾನುಸಾರ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು
ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ
ಆದದರಿಂದ ಕ್ರಿಸ್ತನ ಬೋಧನೆಯ ಮೂಲ ಪಾಠಗಳನ್ನು ಬಿಟ್ಟು ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ ದೇವರ ಮೇಲಣ ನಂಬಿಕೆಯೂ
ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು.
ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.