ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.
Cross references
ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆ--ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.
ನಾನು ನಿಮಗೆ ಹೇಳಿದ ಮಾತಿನ ದೆಸೆಯಿಂದ ನೀವು ಈಗ ಶುದ್ಧರಾಗಿದ್ದೀರಿ.
ನೀವು ಒಬ್ಬರನ್ನೊಬ್ಬರು ಪ್ರೀತಿ ಮಾಡಬೇಕೆಂದು ನಾನು ಇವುಗಳನ್ನು ನಿಮಗೆ ಆಜ್ಞಾಪಿಸುತ್ತೇನೆ.
ನಿನ್ನ ಸತ್ಯದಿಂದ ಅವರನ್ನು ಪ್ರತಿಷ್ಠೆ ಪಡಿಸು; ನಿನ್ನ ವಾಕ್ಯವೇ ಸತ್ಯವು
ಅವರು ಸತ್ಯದಲ್ಲಿ ಪ್ರತಿಷ್ಠಿಸಲ್ಪಡುವಂತೆ ನಾನು ನನ್ನನ್ನು ಅವರಿ ಗೋಸ್ಕರ ಪ್ರತಿಷ್ಠಿಸಿಕೊಳ್ಳುತ್ತೇನೆ.
ಹೀಗೆ ದೇವರ ವಾಕ್ಯವು ಪ್ರಬಲವಾಯಿತು; ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು; ಇದಲ್ಲದೆ ಯಾಜಕರಲ್ಲಿ ದೊಡ್ಡ ಸಮೂಹವು ನಂಬಿಕೆಗೆ ವಿಧೇಯರಾದರು.
ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದ ಮಾಡದೆ ಅವರ ಹೃದಯ ಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.
ಆತನ ಹೆಸರಿಗಾಗಿ ಎಲ್ಲಾ ಜನಾಂಗಗಳವರು ನಂಬಿಕೆಗೆ ವಿಧೇಯರಾಗುವಂತೆ ಆತನಿಂದ ನಾವು ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದ್ದೇವೆ.
ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ
ನೀವು ಯಾರಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತಿರೋ ಅವರಿಗೆ ದಾಸರಾಗಿಯೇ ವಿಧೇ ಯರಾಗಿರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ; ಇಲ್ಲವೆ ವಿಧೇಯತ್ವಕ್ಕೆ ದಾಸ ರಾದರೆ ನೀತಿಯೇ.
ನೀವು ಶರೀರಭಾವವನ್ನು ಅನುಸರಿಸಿದರೆ ಸಾಯುವಿರಿ; ಆದರೆ ನೀವು ಆತ್ಮನಿಂದ ದೇಹದ ಕ್ರಿಯೆಗಳನ್ನು ಸಾಯಿಸುವದಾದರೆ ಜೀವಿಸುವಿರಿ.
ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.
ಶುದ್ಧತೆಯಿಂದ, ಜ್ಞಾನದಿಂದ, ದೀರ್ಘಶಾಂತಿಯಿಂದ, ದಯೆಯಿಂದ, ಪವಿತ್ರಾತ್ಮನಿಂದ, ಕಪಟವಿಲ್ಲದ ಪ್ರೀತಿಯಿಂದ,
ಓ ಬುದ್ಧಿಯಿಲ್ಲದ ಗಲಾತ್ಯದವರೇ, ಸತ್ಯಕ್ಕೆ ವಿಧೇಯರಾಗದಂತೆ ನಿಮ್ಮನ್ನು ಯಾರು ಮರುಳುಗೊಳಿಸಿದರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿ ಸ್ಪಷ್ಟವಾಗಿ ವರ್ಣಿಸಲ್ಪಟ್ಟನಲ್ಲವೇ?
ನಾವಾದರೋ ಆತ್ಮನ ಮೂಲಕ ನಂಬಿಕೆಯಿಂದಾದ ನೀತಿಯ ನಿರೀಕ್ಷೆಗಾಗಿ ಎದುರು ನೋಡುತ್ತೇವೆ.
ನೀವು ಚೆನ್ನಾಗಿ ಓಡುತ್ತಿದ್ದಿರಿ, ನೀವು ಸತ್ಯಕ್ಕೆ ವಿಧೇಯರಾಗದಂತೆ ಯಾರು ನಿಮ್ಮನ್ನು ತಡೆದರು?
ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿ ಕೊಳ್ಳುವದಕ್ಕೆ ಆಸಕ್ತರಾಗಿರ್ರಿ.
ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ
ನಮ್ಮ ಪ್ರಿತಿಯು ನಿಮ್ಮ ಕಡೆಗೆ ಹೇಗೋ ಹಾಗೆಯೇ ನಿಮ್ಮ ಪ್ರೀತಿಯೂ ಒಬ್ಬರಿಂದೊಬ್ಬರಿಗೂ ಎಲ್ಲರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ನಿಮಗೆ ಅನುಗ್ರಹಿಸಲಿ.ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.
ಹೀಗಿರಲು ತಾತ್ಸಾರ ಮಾಡು ವವನು ಮನುಷ್ಯನನ್ನಲ್ಲ, ತನ್ನ ಪರಿಶುದ್ಧಾತ್ಮನನ್ನು ನಮಗೆ ದಯಪಾಲಿಸಿರುವ ದೇವರನ್ನೇ ತಾತ್ಸಾರ ಮಾಡುತ್ತಾನೆ.
ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಪರಸ್ಪರವಾದ ಪ್ರೀತಿಯು ನಿಮ್ಮೆಲ್ಲ ರಲ್ಲಿಯೂ ಹೆಚ್ಚುತ್ತಾ ಬರುತ್ತದೆ.
ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ
ನಾನು ಮಕೆದೋನ್ಯಕ್ಕೆ ಹೋದಾಗ ನೀನು ಎಫೆಸ ದಲ್ಲಿ ಇದ್ದುಕೊಂಡು ಅವರು ಬೇರೆ ಯಾವ ಬೋಧನೆ ಯನ್ನು ಉಪದೇಶಿಸಬಾರದೆಂತಲೂ
ಶುದ್ಧ ಹೃದಯದಿಂದಲೂ ಒಳ್ಳೇಮನಸ್ಸಾಕ್ಷಿ ಯಿಂದಲೂ ನಿಷ್ಕಪಟವಾದ ನಂಬಿಕೆಯಿಂದಲೂ ಉಂಟಾಗುವ ಪ್ರೀತಿಯೇ ಆಜ್ಞೆಯ ಅಂತ್ಯವಾಗಿದೆ.
ಯೌವನಸ್ಥನೆಂದು ನಿನ್ನನ್ನು ಅಸಡ್ಡೆ ಮಾಡುವದಕ್ಕೆ ಯಾರಿಗೂ ಅವಕಾಶಕೊಡದೆ ನಂಬು ವವರಿಗೆ ನಡೆ ನುಡಿ ಪ್ರೀತಿ ಆತ್ಮ ನಂಬಿಕೆ ಶುದ್ಧತ್ವದಲ್ಲಿ ನೀನೇ ಮಾದರಿಯಾಗಿರು.
ವೃದ್ಧಸ್ತ್ರೀಯರನ್ನು ತಾಯಂದಿ ರೆಂದೂ ಯೌವನ ಸ್ತ್ರೀಯರನ್ನು ಪೂರ್ಣ ಪವಿತ್ರತೆ ಯಿಂದ ಸಹೋದರಿಯರೆಂದೂ ಎಣಿಸಿ ಅವರವರಿಗೆ ಬುದ್ಧಿಹೇಳು.
ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕ ನಿನಗೆ ಒಪ್ಪಿಸಲ್ಪಟ್ಟ ಆ ಒಳ್ಳೇದನ್ನು ನೀನು ಕಾಪಾಡು.
ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.
ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.
ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.
ಸಹೋದರ ಪ್ರೀತಿಯು ನೆಲೆಯಾಗಿರಲಿ.
ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದಿರುವಾಗ
ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.
ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.
ಅದೇ ರೀತಿಯಾಗಿ ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ. ಯಾರಾದರೂ ವಾಕ್ಯಕ್ಕೆ ಅವಿಧೇಯರಾಗಿದ್ದರೂ ಹೆಂಡತಿಯರ ನಡತೆಯಿಂದ ವಾಕ್ಯವಿಲ್ಲದೆ ಅವರನ್ನು ಗೆಲ್ಲುವಂತೆ
ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರ್ರಿ; ಒಬ್ಬರಿಗೊಬ್ಬರು ಕರುಣೆಯುಳ್ಳವರಾಗಿದ್ದು ಸಹೋದರ ರಂತೆ ಪ್ರೀತಿಸಿರಿ; ಕನಿಕರವೂ ದೀನ ಭಾವವೂ ಉಳ್ಳವರಾಗಿರ್ರಿ.
ಎಲ್ಲವುಗಳಿಗೆ ಮಿಗಿಲಾಗಿ ನಿಮ್ಮ ನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಯಾಕಂದರೆ ಪ್ರೀತಿಯು ಎಷ್ಟೋ ಪಾಪಗಳನ್ನು ಮುಚ್ಚುತ್ತದೆ.
ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು?
ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ.