ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.
Cross references
ಆಗ ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳವಾಯಿತು. ಕಾನಾನ್ಯರೂ ಪೆರಿಜೀಯರೂ ಆಗ ದೇಶದಲ್ಲಿ ವಾಸವಾಗಿದ್ದರು.
ಅವಳು ಹಾಗೆಯೇ ಉದಯ ಕಾಲದ ವರೆಗೂ ಅವನ ಪಾದ ಗಳ ಬಳಿಯಲ್ಲಿ ಮಲಗಿದ್ದು ಒಬ್ಬನಿಗೂ ಗೊತ್ತಾಗ ಬಾರದೆಂದು ಇನ್ನೂ ಕತ್ತಲಿರುವಾಗಲೇ ಎದ್ದಳು. ಅವನು ಒಬ್ಬ ಹೆಂಗಸು ಕಣದಲ್ಲಿ ಬಂದಳೆಂದು ಯಾರಿಗೂ ತಿಳಿಯಲ್ಪಡದಿರಲಿ ಅಂದನು.
ದುಷ್ಟರು ಬಡವನನ್ನು ಮತ್ತು ದೀನ ನನ್ನು ಕೆಡವಿಬಿಡುವದಕ್ಕೂ ಸನ್ಮಾರ್ಗದವರನ್ನು ಕೊಲ್ಲು ವದಕ್ಕೂ ಕತ್ತಿಯನ್ನು ಹಿರಿದಿದ್ದಾರೆ ಮತ್ತು ತಮ್ಮ ಬಿಲ್ಲು ಗಳನ್ನು ಬೊಗ್ಗಿಸಿದ್ದಾರೆ.
ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
ವಿಚಾರಣೆಯ ದಿನದಲ್ಲಿಯೂ ದೂರ ದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡು ವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ವೈಭವವನ್ನು ಎಲ್ಲಿ ಬಿಡುವಿರಿ?
ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು.
ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.
ಆದರೆ ಜನರ ಸಮೂಹಗಳು ಅದನ್ನು ನೋಡಿ ಆಶ್ಚರ್ಯಪಟ್ಟು ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಮಹಿಮೆಪಡಿಸಿದರು.
ಶಿಷ್ಯನು ತನ್ನ ಗುರುವಿನಂತೆಯೂ ಸೇವಕನು ತನ್ನ ಯಜಮಾನನಂತೆಯೂ ಇರುವದು ಸಾಕು; ಮನೆಯ ಯಜಮಾನನನ್ನೇ ಅವರು ಬೆಲ್ಜೆಬೂಲನೆಂದು ಕರೆದರೆ ಅವನ ಮನೆಯವರನ್ನು ಇನ್ನೂ ಎಷ್ಟೋ ಹೆಚ್ಚಾಗಿ ಕರೆಯುವರಲ್ಲವೇ?
ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ.
ಮನುಷ್ಯಕುಮಾರನ ನಿಮಿತ್ತ ಜನರು ನಿಮ್ಮನ್ನು ಹಗೆಮಾಡಿ ನಿಮ್ಮನ್ನು ಬಹಿಷ್ಕರಿಸಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದ್ದೆಂದು ತೆಗೆದುಹಾಕಿದರೆ ನೀವು ಧನ್ಯರು.
ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.
ದೇವರು ಮೊದಲೇ ಅನ್ಯಜನರನ್ನು ದರ್ಶಿಸಿ ತನ್ನ ಹೆಸರಿಗಾಗಿ ಅವರೊ ಳಗಿಂದ ಒಂದು ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.
ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು.
ಇದಲ್ಲದೆ ಅವರು ಈಗ ನನ್ನ ಮೇಲೆ ತಪ್ಪುಹೊರಿಸುವವುಗಳು ನಿಜವೆಂದು ಸಿದ್ಧಾಂತಮಾಡಲಾರರು.
ಅವನು ಬಂದಾಗ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು ಸುತ್ತಲೂ ನಿಂತುಕೊಂಡು ತಾವು ಸ್ಥಾಪಿಸಲಿಕ್ಕಾಗದ ಅನೇಕ ಕಠಿಣ ದೂರುಗಳನ್ನು ಪೌಲನಿಗೆ ವಿರೋಧ ವಾಗಿ ಹೇಳಿದರು.
ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ.
ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು.
ಹೀಗೆ ಅವನ ಹೃದಯದ ರಹಸ್ಯಗಳು ತೋರಿಬರುತ್ತವೆ; ಅವನು ಸಾಷ್ಟಾಂಗವೆರಗಿ ದೇವರನ್ನು ಆರಾಧಿಸಿ ನಿಜಕ್ಕೂ ನಿಮ್ಮಲ್ಲಿ ದೇವರಿದ್ದಾನೆಂದು ಹೇಳುವನು.
ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
ಯಾಕಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಗೌರವ ವಾದವುಗಳನ್ನು ಯೋಚನೆಗೆ ತಂದುಕೊಳ್ಳುವವರಾ ಗಿದ್ದೇವೆ.
ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ; ಇದರಲ್ಲಿ ನಾವೇ ಯೋಗ್ಯರಾಗಿ ತೋರಿಬರಬೇಕೆಂದಲ್ಲ, ನಾವು ಭ್ರಷ್ಠರೆನಿಸಿಕೊಂಡರೂ ನೀವು ಒಳ್ಳೇದನ್ನು ಮಾಡುವವ ರಾಗ ಬೇಕೆಂಬದೇ.
ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು.
ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು.
ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿ ದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ಒಂದೇ ಆತ್ಮದಲ್ಲಿ ದೃಢ ವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೊಸ್ಕರ ಐಕ್ಯಮತ್ಯದಿಂದಲೂ ಒಂದೇ ಮನಸ್ಸಿನಿಂದಲೂ ಹೆ
ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ.
ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ
ಹೀಗಿದ್ದರೆ ನೀವು ಹೊರಗಿನವರ ಎದುರಿ ನಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳುವಿರಿ. ನಿಮಗೆ ಯಾವದಕ್ಕೂ ಕೊರತೆಯಿರುವದಿಲ್ಲ.
ಹೀಗೆ ನಾವು ಶಾಂತಿ ಸಮಾಧಾನಗಳಿಂದ ಕೂಡಿದ ಜೀವನ ವನ್ನು ಪೂರ್ಣ ಭಕ್ತಿಯಿಂದಲೂ ಗೌರವದಿಂದಲೂ ನಡಿಸುವದಕ್ಕಾಗುವದು.
ಯೌವನಸ್ಥನೆಂದು ನಿನ್ನನ್ನು ಅಸಡ್ಡೆ ಮಾಡುವದಕ್ಕೆ ಯಾರಿಗೂ ಅವಕಾಶಕೊಡದೆ ನಂಬು ವವರಿಗೆ ನಡೆ ನುಡಿ ಪ್ರೀತಿ ಆತ್ಮ ನಂಬಿಕೆ ಶುದ್ಧತ್ವದಲ್ಲಿ ನೀನೇ ಮಾದರಿಯಾಗಿರು.
ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯಗಳ ಮಾದರಿಯಾಗಿ ತೋರಿಸಿಕೊಂಡು ಬೋಧನೆಯಲ್ಲಿ ನಿರ್ಮಲತ್ವವನ್ನೂ ಗೌರವವನ್ನೂ ಯಥಾರ್ಥತೆಯನ್ನೂ ಖಂಡಿಸಲಾಗದಂಥ ಸ್ವಸ್ಥವಾದ ಮಾತನ್ನೂ ತೋರಿಸು;
ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.
ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳ ಬೇಕೆಂದು ಅಪೇಕ್ಷಿಸುವವರಾದ ನಮಗೆ ಒಳ್ಳೇ ಮನಸ್ಸಾಕ್ಷಿ ಇದೆಯೆಂದು ನಂಬಿದ್ದೇವೆ.
ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.
ಅದೇ ರೀತಿಯಾಗಿ ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ. ಯಾರಾದರೂ ವಾಕ್ಯಕ್ಕೆ ಅವಿಧೇಯರಾಗಿದ್ದರೂ ಹೆಂಡತಿಯರ ನಡತೆಯಿಂದ ವಾಕ್ಯವಿಲ್ಲದೆ ಅವರನ್ನು ಗೆಲ್ಲುವಂತೆ
ಒಳ್ಳೇಮನಸ್ಸಾಕ್ಷಿ ಯುಳ್ಳವರಾಗಿರ್ರಿ; ಆಗ ನೀವು ಕೆಟ್ಟದ್ದನ್ನು ಮಾಡುವವ ರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೆಪಡುವವರು.
ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ
ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.
ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವದ ರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು.