ಸ್ವತಂತ್ರರಾಗಿರ್ರಿ; ಆದರೆ ಕೆಟ್ಟತನವನ್ನು ಮರೆಮಾಡು ವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ; ನೀವು ದೇವರ ದಾಸರಾಗಿದ್ದೀರಿ.
Cross references
ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವದು ಎಂದು ಹೇಳಿದನು.
ನಾನು ಬಂದು ಅವರಿಗೆ ಹೇಳದಿದ್ದರೆ ಅವರಲ್ಲಿ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರ ಪಾಪಕ್ಕೆ ನೆವವಿಲ್ಲ.
ಹೀಗೆ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದಿರಿ.
ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
ಯಾವನು ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು ಕರ್ತನಿಂದ ಸ್ವತಂತ್ರನು; ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದು ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು.
ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದ್ದಾನೆ. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.
ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ಕಣ್ಣಿಗೆ ಕಾಣುವಾಗ ಮಾತ್ರ ಸೇವೆ ಮಾಡದೆ ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಹೃದಯ ಪೂರ್ವಕವಾಗಿ ನಡಿಸಿರಿ.
ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವರೆಂದು ತಿಳಿದಿದ್ದೀರಲ್ಲಾ. ಯಾಕಂದರೆ ನೀವು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿದ್ದೀರಿ.ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ಅದರಲ್ಲಿ ಪಕ್ಷಪಾತವಿಲ್ಲ.
ನಿಮಗೆ ತಿಳಿದಿ ರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ. ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವ ರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ.
ಆದರೆ ಬಿಡುಗಡೆ ಯನ್ನುಂಟುಮಾಡುವ ಪರಿಪೂರ್ಣವಾದ ನಿಯಮ ವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು (ವಾಕ್ಯವನ್ನು) ಕೇಳಿ ಮರೆತುಹೋಗುವವ ನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ಕ್ರಿಯೆಯಿಂದ ಧನ್ಯನಾಗುವನು.
ಬಿಡುಗಡೆಯ ನ್ನುಂಟು ಮಾಡುವ ನ್ಯಾಯಪ್ರಮಾಣದಿಂದ ಅವರು ತೀರ್ಪು ಹೊಂದುವವರಿಗೆ ತಕ್ಕಂತೆಯೇ ನೀವು ಮಾತನಾಡಿರಿ. ಹಾಗೆಯೇ ಮಾಡಿರಿ.
ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ.
ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ