ಒಬ್ಬನು ಅನ್ಯಾಯವಾಗಿ ಬಾಧೆಪಡುವವ ನಾಗಿದ್ದು ದೇವರ ವಿಷಯವಾದ ಮನಸ್ಸಾಕ್ಷಿಗೋಸ್ಕರ ಆ ದುಃಖವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ.
Cross references
ಇಗೋ, ನಿಮ್ಮ ಆಲೋಚನೆಗಳನ್ನೂ ನೀವು ನನ್ನ ಮೇಲೆ ಬಲಾತ್ಕಾರಿಗಳಾಗಿ ಮಾಡುವ ಯೋಚನೆ ಗಳನ್ನೂ ತಿಳಿದಿದ್ದೇನೆ.
ನನ್ನ ಶತ್ರುಗಳು ನನ್ನ ವಿಷ ಯದಲ್ಲಿ ಸುಳ್ಳಾಗಿ ಸಂತೋಷಪಡದೆ ಇರಲಿ; ಇಲ್ಲವೆ ನನ್ನನ್ನು ಕಾರಣವಿಲ್ಲದೆ ಹಗೆಮಾಡುವವರು ಕಣ್ಣು ಸನ್ನೆಮಾಡದೆ ಇರಲಿ.
ಆದರೆ ನನ್ನ ಶತ್ರುಗಳು ಚುರು ಕಾಗಿ ಬಲವಾಗಿದ್ದಾರೆ; ನನ್ನನ್ನು ತಪ್ಪಾಗಿ ಹಗೆಮಾಡು ವವರು ಹೆಚ್ಚಿದ್ದಾರೆ.
ಕಾರಣವಿಲ್ಲದೆ ನನ್ನನ್ನು ಹಗೆ ಮಾಡು ವವರು ನನ್ನ ತಲೆಯ ಕೂದಲುಗಳಿಗಿಂತ ಹೆಚ್ಚಾಗಿ ದ್ದಾರೆ; ನನ್ನನ್ನು ಅನ್ಯಾಯವಾಗಿ ಸಂಹರಿಸುವ ನನ್ನ ಶತ್ರುಗಳೂ ಪ್ರಬಲವಾಗಿದ್ದಾರೆ; ನಾನು ತೆಗೆದು ಕೊಳ್ಳದ್ದನ್ನು ನನ್ನಿಂದ ದೋಚಿಕೊಂಡರು.
ನಿನ್ನ ಆಜ್ಞೆಗಳೆಲ್ಲಾ ನಂಬಿ ಕೆಯುಳ್ಳವುಗಳು; ನನ್ನನ್ನು ಅನ್ಯಾಯವಾಗಿ ಹಿಂಸಿ ಸುತ್ತಾರೆ. ನನಗೆ ಸಹಾಯಮಾಡು.
ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.
ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ತಮ್ಮನ್ನು ಪ್ರೀತಿಸುವವ ರನ್ನೇ ಪ್ರೀತಿಸುತ್ತಾರೆ.
ಆದರೆ ಅವರು ನನ್ನನ್ನು ಕಳುಹಿಸಿದಾತನನ್ನು ತಿಳಿಯದಿರುವದರಿಂದ ನನ್ನ ಹೆಸ ರಿನ ನಿಮಿತ್ತ ಇವುಗಳನ್ನೆಲ್ಲಾ ನಿಮಗೆ ಮಾಡುವರು.
ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.
ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಿನ ನಿಮಿತ್ತವಾಗಿಯೂ (ಅವನಿಗೆ) ಅಧೀನ ನಾಗುವದು ಅವಶ್ಯ.
ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.
ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
ಇದಲ್ಲದೆ ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯನ್ನು ನಿಮಗೆ ತಿಳಿಸುತ್ತೇನೆ.
ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆ ಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೇ ದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿ ದ್ದರೆ ಇದು ದೇವರಿಗೆ ಅಂಗೀಕೃತವಾಗಿದೆ.
ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ಸಂತೋಷವುಳ್ಳವರು. ಅವರ ಬೆದರಿಸುವಿಕೆಗೆ ಹೆದರಬೇಡಿರಿ ಮತ್ತು ಕಳವಳ ಪಡಬೇಡಿರಿ.