ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು.
Cross references
ನೀತಿಯು ಆತನ ಮುಂದೆ ಹೋಗುತ್ತಾ ನಾವು ಆತನ ಹೆಜ್ಜೆಗಳಲ್ಲಿ ನಡೆಯುವಂತೆ ಮಾರ್ಗವನ್ನು ಮಾಡುವದು.
ತನ್ನ ಶಿಲುಬೆ ಯನ್ನು ತೆಗೆದುಕೊಳ್ಳದೆ ನನ್ನನ್ನು ಹಿಂಬಾಲಿಸುವವನು ನನಗೆ ಯೋಗ್ಯನಲ್ಲ.
ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
ಆತನು ಜನರನ್ನು ತನ್ನ ಶಿಷ್ಯರ ಕೂಡ ತನ್ನ ಬಳಿಗೆ ಕರೆದು ಅವರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿ ಸಲಿ.
ಆತನು ಅವರೆಲ್ಲರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ;
ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು.
ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ
ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ತೋರಿಸಿದ್ದೇನೆ.
ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.
ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವರೊಳಗಿಂದ ತಿರಿಗಿ ಎದ್ದು ಬರುವದು ಅಗತ್ಯವೆಂತಲೂ--ನಾನು ನಿಮಗೆ ಪ್ರಸಿದ್ಧಿ ಪಡಿಸುವ ಈ ಯೇಸುವೇ ಕ್ರಿಸ್ತನೆಂತಲೂ ದೃಢವಾಗಿ ಹೇಳಿ ಸ್ಥಾಪಿಸಿದನು.
ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.
ನಾನು ಕ್ರಿಸ್ತನನ್ನು ಅನುಸರಿಸುವಂತೆಯೇ ನೀವೂ ನನ್ನನ್ನು ಅನುಸರಿಸುವವರಾಗಿರ್ರಿ.
ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿ ಇರಲಿ.
ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ; ಯಾಕಂದರೆ ಸಂಕಟ ಗಳನ್ನು ಅನುಭವಿಸುವದಕ್ಕಾಗಿ ನಾವು ನೇಮಿಸಲ್ಪಟ್ಟವ ರೆಂದು ನೀವೇ ಬಲ್ಲಿರಷ್ಟೆ.
ನಾವು ಕರ್ತನಾದ ಯೇಸುವಿನ ಮೂಲಕ ನಿಮಗೆ ಕೊಟ್ಟ ಆಜ್ಞೆಗಳನ್ನು ನೀವು ತಿಳಿದಿದ್ದೀರಿ.
ಹೌದು, ಕ್ರಿಸ್ತ ಯೇಸುವಿನಲ್ಲಿ ಭಕ್ತಿ ಯುಳ್ಳವರಾಗಿ ಜೀವಿಸುವದಕ್ಕೆ ಮನಸ್ಸು ಮಾಡುವವ ರೆಲ್ಲರೂ ಹಿಂಸೆಗೊಳಗಾಗುವರು.
ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.
ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟು ಈ ಅಂತ್ಯ ಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.
ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.
ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ.
ಆತನಲ್ಲಿ ನೆಲೆ ಗೊಂಡವನಾಗಿದ್ದೇನೆಂದು ಹೇಳುವವನು ಆತನು ನಡೆ ದಂತೆಯೇ ತಾನೂ ನಡೆಯುವದಕ್ಕೆ ಬದ್ಧನಾಗಿದ್ದಾನೆ.
ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.
ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.