Home Bibles 1 ಪೇತ್ರ 2:24 · ಕನ್ನಡ ಬೈಬಲ್
1 ಪೇತ್ರ 2:24 · ಕನ್ನಡ ಬೈಬಲ್

ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.

Cross references

ಆದಿಕಾಂಡ 22:6

ಅಬ್ರಹಾಮನು ದಹನಬಲಿಯ ಕಟ್ಟಿಗೆಗಳನ್ನು ತಕ್ಕೊಂಡು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ ಬೆಂಕಿಯನ್ನೂ ಕತ್ತಿಯನ್ನೂ ತನ್ನ ಕೈಯಲ್ಲಿ ತೆಗೆದುಕೊಂಡು ಅವರಿಬ್ಬರೂ ಕೂಡಿಕೊಂಡು ಹೋದರು.

ನಿರ್ಗಮಕಾಂಡ 28:38

ಇಸ್ರಾಯೇಲ್‌ ಮಕ್ಕಳು ತಮ್ಮ ಪರಿಶುದ್ಧ ದಾನಗಳನ್ನೆಲ್ಲಾ ಪರಿಶುದ್ಧ ಮಾಡುವ ಪರಿಶುದ್ಧ ಕಾರ್ಯಗಳ ಅಕ್ರಮವನ್ನು ಆರೋನನು ಹೊರುವ ಹಾಗೆ ಅದು ಆರೋನನ ಹಣೆಯ ಮೇಲಿರಬೇಕು. ಕರ್ತನ ಮುಂದೆ ಅವುಗಳೆಲ್ಲಾ ಅಂಗೀಕಾರವಾಗುವ ಹಾಗೆ ಅದು ಯಾವಾಗಲೂ ಅವನ ಹಣೆಯ ಮೇಲೆ ಇರಬೇಕು.

ಲೇವ್ಯಕಾಂಡ 16:22

ಆ ಆಡು ಅವರ ಎಲ್ಲಾ ಅಕ್ರಮಗಳನ್ನು ನಿರ್ಜನವಾದ ಸ್ಥಳಕ್ಕೆ ತೆಗೆದುಕೊಂಡು ಹೋಗುವಂತೆ ಆ ಆಡನ್ನು ಅಡವಿಗೆ ಬಿಟ್ಟುಬಿಡಬೇಕು.

ಲೇವ್ಯಕಾಂಡ 22:9

ಆದದರಿಂದ ಅವರು ಅದನ್ನು ಅಪವಿತ್ರಪಡಿಸಿದರೆ ಅದರ ನಿಮಿತ್ತವಾಗಿ ಪಾಪವನ್ನು ಹೊತ್ತು ಸಾಯದಂತೆ ನನ್ನ ವಿಧಿಗಳನ್ನು ಕೈಕೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.

ಅಂಕೆಗಳ ಪುಸ್ತಕ 7:15

ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.

ಅಂಕೆಗಳ ಪುಸ್ತಕ 18:22

ಇಸ್ರಾಯೇಲ್‌ ಮಕ್ಕಳು ಪಾಪವನ್ನು ಹೊತ್ತುಕೊಂಡು ಸಾಯದ ಹಾಗೆ ಇನ್ನು ಮೇಲೆ ಸಭೆಯ ಗುಡಾರದ ಸವಿಾಪಕ್ಕೆ ಬರಬಾರದು.

ದ್ವಿತೀಯೋಪದೇಶಕಾಂಡ 21:22

ಇದಲ್ಲದೆ ಒಬ್ಬ ಮನುಷ್ಯನ ಮೇಲೆ ಮರಣಕ್ಕೆ ಯೋಗ್ಯವಾದ ಪಾಪವಿರುವದರಿಂದ ಅವನಿಗೆ ಮರಣ ವನ್ನು ವಿಧಿಸಿ ಮರಕ್ಕೆ ತೂಗುಹಾಕಿದ್ದಾದರೆಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.

ಕೀರ್ತನೆಗಳು 38:4

ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿಹೋಗಿವೆ; ಭಾರವಾದ ಹೊರೆಯ ಹಾಗೆ ನನಗೆ ವಿಾರಿದ ಭಾರವಾಗಿವೆ.

ಕೀರ್ತನೆಗಳು 147:3

ಆತನು ಮುರಿದ ಹೃದಯದವರನ್ನು ಸ್ವಸ್ಥಮಾಡಿ ಅವರ ಗಾಯಗಳನ್ನು ಕಟ್ಟುತ್ತಾನೆ.

ಯೆಶಾಯ 53:4

ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು.

ಯೆಶಾಯ 53:11

ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.

ಮಲಾಕಿ 4:2

ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.

ಮತ್ತಾಯ 5:20

ನಾನು ನಿಮಗೆ ಹೇಳುವದೇನಂದರೆ-- ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ನಿಮ್ಮ ನೀತಿಯು ಹೆಚ್ಚಿನದಾಗಿರದ ಹೊರತು ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವದಕ್ಕಾಗುವದೇ ಇಲ್ಲ.

ಮತ್ತಾಯ 8:17

ಹೀಗೆ--ಆತನು ತಾನೇ ನಮ್ಮ ಬಲಹೀನತೆಗಳನ್ನು ತಕ್ಕೊಂಡು ರೋಗಗಳನ್ನು ಹೊತ್ತನು ಎಂಬದಾಗಿ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು.

ಮತ್ತಾಯ 27:26

ಆಗ ಅವನು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವಂತೆ ಒಪ್ಪಿಸಿದನು.

ಮಾರ್ಕ 15:15

ಹೀಗೆ ಪಿಲಾತನು ಜನರನ್ನು ತೃಪ್ತಿಪಡಿಸಲು ಮನಸ್ಸುಳ್ಳವನಾಗಿ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಯಿಂದ ಹೊಡಿಸಿ ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿದನು.

ಲೂಕ 1:74

ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ

ಲೂಕ 4:18

ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ

ಯೋಹಾನ 1:29

ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.

ಯೋಹಾನ 19:1

ಆಗ ಪಿಲಾತನು ಯೇಸುವನ್ನು ತೆಗೆದುಕೊಂಡು ಆತನನ್ನು ಕೊರಡೆ ಯಿಂದ ಹೊಡಿಸಿದನು.

ಅಪೋಸ್ತಲರ ಕೃತ್ಯಗಳು 5:30

ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.

ಅಪೋಸ್ತಲರ ಕೃತ್ಯಗಳು 10:35

ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.

ಅಪೋಸ್ತಲರ ಕೃತ್ಯಗಳು 10:39

ಆತನು ಯೆಹೂದ್ಯರ ಸೀಮೆಯಲ್ಲಿಯೂ ಯೆರೂಸ ಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ; ಅವರು ಆತನನ್ನು ಮರದ ಮೇಲೆ ತೂಗಹಾಕಿಕೊಂದರು;

ಅಪೋಸ್ತಲರ ಕೃತ್ಯಗಳು 13:29

ಆತನ ವಿಷಯವಾಗಿ ಬರೆಯಲ್ಪಟ್ಟದ್ದೆಲ್ಲವನ್ನು ನೆರ ವೇರಿಸಿದ ಮೇಲೆ ಅವರು ಆತನನ್ನು ಮರದಿಂದ ಇಳಿಸಿ ಸಮಾಧಿಯಲ್ಲಿಟ್ಟರು.

ರೋಮಾಪುರದವರಿಗೆ 6:2

ಹಾಗೆ ಎಂದಿಗೂ ಅಲ್ಲ; ಪಾಪದ ಪಾಲಿಗೆ ಸತ್ತವರಾದ ನಾವು ಇನ್ನೂ ಅದರಲ್ಲಿ ಬದುಕು ವದು ಹೇಗೆ?

ರೋಮಾಪುರದವರಿಗೆ 6:7

ಯಾಕಂದರೆ ಸತ್ತವನು ಪಾಪ ದಿಂದ ಬಿಡುಗಡೆ ಹೊಂದಿದ್ದಾನೆ.

ರೋಮಾಪುರದವರಿಗೆ 6:11

ಅದೇ ಪ್ರಕಾರ ನೀವು ಸಹ ಪಾಪದ ಪಾಲಿಗೆ ನಿಜವಾಗಿ ಸತ್ತವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗಾಗಿ ಜಿವಿಸುವವರೂ ಎಂದು ಎಣಿಸಿಕೊಳ್ಳಿರಿ.

ರೋಮಾಪುರದವರಿಗೆ 6:13

ಇಲ್ಲವೆ ನೀವು ನಿಮ್ಮ ಅಂಗಗಳನ್ನು ಪಾಪಕ್ಕೆ ಒಳಪಡಿಸುವವರಾಗಿದ್ದು ಅನೀತಿಯನ್ನು ನಡಿಸುವ ಸಾಧನಗಳಾಗಮಾಡಬೇಡಿರಿ; ಆದರೆ ಸತ್ತವರೊಳಗಿಂದ ಜೀವಿಸುವವರೋ ಎಂಬಂತೆ ನೀತಿಕಾರ್ಯಗಳನ್ನು ನಡಿಸುವ ಸಾಧನಗಳನ್ನಾಗಿ ನಿಮ್ಮ ಅಂಗಗಳನ್ನು ದೇವರಿಗೆ ಒಳಪಡಿಸಿರಿ.

ರೋಮಾಪುರದವರಿಗೆ 6:16

ನೀವು ಯಾರಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತಿರೋ ಅವರಿಗೆ ದಾಸರಾಗಿಯೇ ವಿಧೇ ಯರಾಗಿರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ; ಇಲ್ಲವೆ ವಿಧೇಯತ್ವಕ್ಕೆ ದಾಸ ರಾದರೆ ನೀತಿಯೇ.

ರೋಮಾಪುರದವರಿಗೆ 6:22

ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.

ರೋಮಾಪುರದವರಿಗೆ 7:6

ಈಗಲಾದರೋ ನಮ್ಮನ್ನು ಹಿಡುಕೊಂಡಿದ್ದ ನ್ಯಾಯಪ್ರಮಾಣದ ಪಾಲಿಗೆ ನಾವು ಸತ್ತಕಾರಣ ಅದರಿಂದ ವಿಮುಕ್ತರಾಗಿದ್ದೇವೆ; ಹೀಗೆ ನಾವು ಅಕ್ಷರದ ಹಳೇ ರೀತಿಯಲ್ಲಿ ಆತನನ್ನು ಸೇವಿಸದೆ ಆತ್ಮನಿಂದ ಹೊಸ ರೀತಿಯಲ್ಲಿಯೇ ಸೇವಿಸುತ್ತೇವೆ.

2 ಕೊರಿಂಥದವರಿಗೆ 6:17

ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.

ಗಲಾತ್ಯದವರಿಗೆ 3:13

ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.

ಎಫೆಸದವರಿಗೆ 5:9

ಆತ್ಮನ ಫಲವು ಎಲ್ಲಾ ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯ ದಲ್ಲಿಯೂ ಇರುತ್ತದೆ.

ಫಿಲಿಪ್ಪಿಯವರಿಗೆ 1:11

ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.

ಕೊಲೊಸ್ಸೆಯವರಿಗೆ 2:20

ಪ್ರಾಪಂಚಿಕ ಬಾಲಬೋಧೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದ ಮೇಲೆ ಇನ್ನೂ ಪ್ರಾಪಂಚಿಕರಾಗಿ ಬದುಕು ವವರೋ ಎಂಬಂತೆ

ಕೊಲೊಸ್ಸೆಯವರಿಗೆ 3:3

ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.

ಹೆಬ್ರಿಯರಿಗೆ 7:26

ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.

ಹೆಬ್ರಿಯರಿಗೆ 9:28

ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.

ಹೆಬ್ರಿಯರಿಗೆ 12:13

ನಿಮ್ಮ ಪಾದ ಗಳಿಗೆ ನೀಟಾದ ದಾರಿಗಳನ್ನು ಮಾಡಿರಿ; ಹೀಗೆ ಮಾಡಿದರೆ ಕುಂಟಕಾಲು ಉಳುಕಿ ಹೋಗದೆ ವಾಸಿಯಾಗುವದು.

Interlinear

Choose Theme