ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
Cross references
ಅಬ್ರಹಾಮನು ದಹನಬಲಿಯ ಕಟ್ಟಿಗೆಗಳನ್ನು ತಕ್ಕೊಂಡು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ ಬೆಂಕಿಯನ್ನೂ ಕತ್ತಿಯನ್ನೂ ತನ್ನ ಕೈಯಲ್ಲಿ ತೆಗೆದುಕೊಂಡು ಅವರಿಬ್ಬರೂ ಕೂಡಿಕೊಂಡು ಹೋದರು.
ಇಸ್ರಾಯೇಲ್ ಮಕ್ಕಳು ತಮ್ಮ ಪರಿಶುದ್ಧ ದಾನಗಳನ್ನೆಲ್ಲಾ ಪರಿಶುದ್ಧ ಮಾಡುವ ಪರಿಶುದ್ಧ ಕಾರ್ಯಗಳ ಅಕ್ರಮವನ್ನು ಆರೋನನು ಹೊರುವ ಹಾಗೆ ಅದು ಆರೋನನ ಹಣೆಯ ಮೇಲಿರಬೇಕು. ಕರ್ತನ ಮುಂದೆ ಅವುಗಳೆಲ್ಲಾ ಅಂಗೀಕಾರವಾಗುವ ಹಾಗೆ ಅದು ಯಾವಾಗಲೂ ಅವನ ಹಣೆಯ ಮೇಲೆ ಇರಬೇಕು.
ಆ ಆಡು ಅವರ ಎಲ್ಲಾ ಅಕ್ರಮಗಳನ್ನು ನಿರ್ಜನವಾದ ಸ್ಥಳಕ್ಕೆ ತೆಗೆದುಕೊಂಡು ಹೋಗುವಂತೆ ಆ ಆಡನ್ನು ಅಡವಿಗೆ ಬಿಟ್ಟುಬಿಡಬೇಕು.
ಆದದರಿಂದ ಅವರು ಅದನ್ನು ಅಪವಿತ್ರಪಡಿಸಿದರೆ ಅದರ ನಿಮಿತ್ತವಾಗಿ ಪಾಪವನ್ನು ಹೊತ್ತು ಸಾಯದಂತೆ ನನ್ನ ವಿಧಿಗಳನ್ನು ಕೈಕೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.
ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
ಇಸ್ರಾಯೇಲ್ ಮಕ್ಕಳು ಪಾಪವನ್ನು ಹೊತ್ತುಕೊಂಡು ಸಾಯದ ಹಾಗೆ ಇನ್ನು ಮೇಲೆ ಸಭೆಯ ಗುಡಾರದ ಸವಿಾಪಕ್ಕೆ ಬರಬಾರದು.
ಇದಲ್ಲದೆ ಒಬ್ಬ ಮನುಷ್ಯನ ಮೇಲೆ ಮರಣಕ್ಕೆ ಯೋಗ್ಯವಾದ ಪಾಪವಿರುವದರಿಂದ ಅವನಿಗೆ ಮರಣ ವನ್ನು ವಿಧಿಸಿ ಮರಕ್ಕೆ ತೂಗುಹಾಕಿದ್ದಾದರೆಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.
ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿಹೋಗಿವೆ; ಭಾರವಾದ ಹೊರೆಯ ಹಾಗೆ ನನಗೆ ವಿಾರಿದ ಭಾರವಾಗಿವೆ.
ಆತನು ಮುರಿದ ಹೃದಯದವರನ್ನು ಸ್ವಸ್ಥಮಾಡಿ ಅವರ ಗಾಯಗಳನ್ನು ಕಟ್ಟುತ್ತಾನೆ.
ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು.
ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
ನಾನು ನಿಮಗೆ ಹೇಳುವದೇನಂದರೆ-- ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ನಿಮ್ಮ ನೀತಿಯು ಹೆಚ್ಚಿನದಾಗಿರದ ಹೊರತು ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವದಕ್ಕಾಗುವದೇ ಇಲ್ಲ.
ಹೀಗೆ--ಆತನು ತಾನೇ ನಮ್ಮ ಬಲಹೀನತೆಗಳನ್ನು ತಕ್ಕೊಂಡು ರೋಗಗಳನ್ನು ಹೊತ್ತನು ಎಂಬದಾಗಿ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು.
ಆಗ ಅವನು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವಂತೆ ಒಪ್ಪಿಸಿದನು.
ಹೀಗೆ ಪಿಲಾತನು ಜನರನ್ನು ತೃಪ್ತಿಪಡಿಸಲು ಮನಸ್ಸುಳ್ಳವನಾಗಿ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಯಿಂದ ಹೊಡಿಸಿ ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿದನು.
ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ
ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ
ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.
ಆಗ ಪಿಲಾತನು ಯೇಸುವನ್ನು ತೆಗೆದುಕೊಂಡು ಆತನನ್ನು ಕೊರಡೆ ಯಿಂದ ಹೊಡಿಸಿದನು.
ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.
ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.
ಆತನು ಯೆಹೂದ್ಯರ ಸೀಮೆಯಲ್ಲಿಯೂ ಯೆರೂಸ ಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ; ಅವರು ಆತನನ್ನು ಮರದ ಮೇಲೆ ತೂಗಹಾಕಿಕೊಂದರು;
ಆತನ ವಿಷಯವಾಗಿ ಬರೆಯಲ್ಪಟ್ಟದ್ದೆಲ್ಲವನ್ನು ನೆರ ವೇರಿಸಿದ ಮೇಲೆ ಅವರು ಆತನನ್ನು ಮರದಿಂದ ಇಳಿಸಿ ಸಮಾಧಿಯಲ್ಲಿಟ್ಟರು.
ಹಾಗೆ ಎಂದಿಗೂ ಅಲ್ಲ; ಪಾಪದ ಪಾಲಿಗೆ ಸತ್ತವರಾದ ನಾವು ಇನ್ನೂ ಅದರಲ್ಲಿ ಬದುಕು ವದು ಹೇಗೆ?
ಯಾಕಂದರೆ ಸತ್ತವನು ಪಾಪ ದಿಂದ ಬಿಡುಗಡೆ ಹೊಂದಿದ್ದಾನೆ.
ಅದೇ ಪ್ರಕಾರ ನೀವು ಸಹ ಪಾಪದ ಪಾಲಿಗೆ ನಿಜವಾಗಿ ಸತ್ತವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗಾಗಿ ಜಿವಿಸುವವರೂ ಎಂದು ಎಣಿಸಿಕೊಳ್ಳಿರಿ.
ಇಲ್ಲವೆ ನೀವು ನಿಮ್ಮ ಅಂಗಗಳನ್ನು ಪಾಪಕ್ಕೆ ಒಳಪಡಿಸುವವರಾಗಿದ್ದು ಅನೀತಿಯನ್ನು ನಡಿಸುವ ಸಾಧನಗಳಾಗಮಾಡಬೇಡಿರಿ; ಆದರೆ ಸತ್ತವರೊಳಗಿಂದ ಜೀವಿಸುವವರೋ ಎಂಬಂತೆ ನೀತಿಕಾರ್ಯಗಳನ್ನು ನಡಿಸುವ ಸಾಧನಗಳನ್ನಾಗಿ ನಿಮ್ಮ ಅಂಗಗಳನ್ನು ದೇವರಿಗೆ ಒಳಪಡಿಸಿರಿ.
ನೀವು ಯಾರಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತಿರೋ ಅವರಿಗೆ ದಾಸರಾಗಿಯೇ ವಿಧೇ ಯರಾಗಿರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ; ಇಲ್ಲವೆ ವಿಧೇಯತ್ವಕ್ಕೆ ದಾಸ ರಾದರೆ ನೀತಿಯೇ.
ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
ಈಗಲಾದರೋ ನಮ್ಮನ್ನು ಹಿಡುಕೊಂಡಿದ್ದ ನ್ಯಾಯಪ್ರಮಾಣದ ಪಾಲಿಗೆ ನಾವು ಸತ್ತಕಾರಣ ಅದರಿಂದ ವಿಮುಕ್ತರಾಗಿದ್ದೇವೆ; ಹೀಗೆ ನಾವು ಅಕ್ಷರದ ಹಳೇ ರೀತಿಯಲ್ಲಿ ಆತನನ್ನು ಸೇವಿಸದೆ ಆತ್ಮನಿಂದ ಹೊಸ ರೀತಿಯಲ್ಲಿಯೇ ಸೇವಿಸುತ್ತೇವೆ.
ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.
ಆತ್ಮನ ಫಲವು ಎಲ್ಲಾ ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯ ದಲ್ಲಿಯೂ ಇರುತ್ತದೆ.
ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.
ಪ್ರಾಪಂಚಿಕ ಬಾಲಬೋಧೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದ ಮೇಲೆ ಇನ್ನೂ ಪ್ರಾಪಂಚಿಕರಾಗಿ ಬದುಕು ವವರೋ ಎಂಬಂತೆ
ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.
ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
ನಿಮ್ಮ ಪಾದ ಗಳಿಗೆ ನೀಟಾದ ದಾರಿಗಳನ್ನು ಮಾಡಿರಿ; ಹೀಗೆ ಮಾಡಿದರೆ ಕುಂಟಕಾಲು ಉಳುಕಿ ಹೋಗದೆ ವಾಸಿಯಾಗುವದು.