ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು.
Cross references
ಮನೆ ಕಟ್ಟುವವರು ತಳ್ಳಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು.
ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).
ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
ಹಿಂಜರಿದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಹಿಂಜರಿಯುವಿಕೆಯನ್ನು ನಾನು ಸ್ವಸ್ಥಮಾಡುವೆನು ಎಂದು ಕರ್ತನು ಅನ್ನುತ್ತಾನೆ. ಇಗೋ, ನಿನ್ನ ಬಳಿಗೆ ಬರುತ್ತೇವೆ; ನೀನು ದೇವರಾದ ನಮ್ಮ ಕರ್ತನಾಗಿದ್ದೀ.
ನೀನು ನೋಡುತ್ತಿರಲಾಗಿ, ಒಂದು ಕಲ್ಲು ಕೈಗಳ ಸಹಾಯವಿಲ್ಲದೆ ಒಡೆಯಲ್ಪಟ್ಟು ಅರ್ಧ ಕಬ್ಬಿ ಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದ ಗಳನ್ನು ಬಡಿದು ಅವುಗಳನ್ನು ಚೂರುಚೂರು ಮಾಡಿತು.
ಆ, ಕಲ್ಲು ಕೈಗಳ ಸಹಾಯವಿಲ್ಲದೆ ಬೆಟ್ಟದೊಳಗಿಂದ ಒಡೆಯಲ್ಪಟ್ಟು ಕಬ್ಬಿಣವನ್ನೂ ಹಿತ್ತಾಳೆಯನ್ನೂ ಮಣ್ಣನ್ನೂ ಬೆಳ್ಳಿಯನ್ನೂ ಬಂಗಾರವನ್ನೂ ಧ್ವಂಸ ಮಾಡಿತೆಂದು ನೀನು ನೋಡಿದ್ದು ಇದೇ. ಮಹಾದೇವರು ಇನ್ನು ಮೇಲೆ ಸಂಭವಿಸುವಂಥದ್ದನ್ನು ಅರಸನಿಗೆ ತಿಳಿಯಪಡಿಸಿ ದ್ದಾನೆ; ಕನಸು ನಿಶ್ಚಯವಾಗಿದೆ; ಅದರ ಅರ್ಥಗಳೂ ಸತ್ಯವಾಗಿವೆ ಅಂದನು.
ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡು. ಒಂದು ಕಲ್ಲಿನ ಮೇಲೆ ಏಳು ಕಣ್ಣುಗಳು ಇರುವವು; ಇಗೋ, ನಾನು ಅದರ ಕೆತ್ತನೆಯಿಂದ ಕೆತ್ತುವೆನು; ಆ ದೇಶದ ಅಪರಾಧ ವನ್ನು ಒಂದೇ ದಿನದಲ್ಲಿ ತೊಲಗಿಸುವೆನು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.ಆ ದಿನದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷೇಬಳ್ಳಿಯ ಕೆಳಗೂ ಅಂಜೂರ ಮರದ ಕೆಳಗೂ ಕರೆಯುವಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
ಓ ಮಹಾ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬೈಲಾಗುವಿ; ಅದಕ್ಕೆ--ಕೃಪೆಯೇ, ಕೃಪೆಯೇ ಎಂದು ಅರ್ಭಟಗಳ ಸಂಗಡ ಮುಖ್ಯ ಕಲ್ಲನ್ನು ಅವನು ಹೊರಗೆ ತರುವನು.
ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.
ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು; ನನ್ನ ಪ್ರಾಣವು ಬಹಳವಾಗಿ ಮೆಚ್ಚಿಕೊಂಡಿರುವ ನನ್ನ ಪ್ರಿಯನು; ನಾನು ಆತನ ಮೇಲೆ ನನ್ನ ಆತ್ಮನನ್ನು ಇರಿಸುವೆನು ಮತ್ತು ಆತನು ಅನ್ಯಜನಗಳಿಗೆ ನ್ಯಾಯವನ್ನು ತೋರಿ ಸುವನು.
ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?
ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
ಆಗ ಆತನು ಅವರನ್ನು ನೋಡಿ--ಹಾಗಾದರೆ ಮನೇ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂದು ಬರೆದಿರು ವದು ಏನು?
ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ.
ಆದರೆ ನೀವು ಜೀವವನ್ನು ಹೊಂದುವಂತೆ ನನ್ನ ಬಳಿಗೆ ಬರುವದಿಲ್ಲ.
ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರು ವರು; ನನ್ನ ಬಳಿಗೆ ಬರುವವನನ್ನು ನಾನು ಹೊರಗೆ ತಳ್ಳಿಬಿಡುವದೇ ಇಲ್ಲ.
ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿ ರಲಾಗಿ ನಾನು ತಂದೆಯ ಮೂಲಕ ಜೀವಿಸುವಂತೆಯೇ ನನ್ನನ್ನು ತಿನ್ನುವವನು ನನ್ನ ಮೂಲಕವಾಗಿಯೇ ಜೀವಿ ಸುವನು.
ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು;
ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ; ನಾನು ಜೀವಿಸುವ ದರಿಂದ ನೀವು ಸಹ ಜೀವಿಸುವಿರಿ.
ಮನೆ ಕಟ್ಟುವವರಾದ ನಿಮ್ಮಿಂದ ಹೀನೈಸಲ್ಪಟ್ಟ ಈ ಕಲ್ಲೇ ಮುಖ್ಯವಾದ ಮೂಲೆಗಲ್ಲಾ ಯಿತು.
ವೈರಿ ಗಳಾಗಿದ್ದ ನಾವು ದೇವರ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿದ್ದರೆ ಸಮಾಧಾನವಾದ ನಮಗೆ ಆತನ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.
ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆ ಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷ ರಾಗುವಿರಿ.
ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.
ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ--
ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಆತನು ಅತ್ಯಂತ ಮಹತ್ವ ವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯ ಪಾಲಿಸಿದ್ದಾನೆ.