ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
Cross references
ಮನೆ ಕಟ್ಟುವವರು ತಳ್ಳಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
ಇತರ ಪ್ರಿಯನಿಗಿಂತ ನಿನ್ನ ಪ್ರಿಯನ ಅತಿಶಯ ವೇನು? ಸ್ತ್ರೀಯರಲ್ಲಿ ಅತಿ ಸುಂದರಿಯೇ, ನೀನು ನಮಗೆ ಹೀಗೆ ಆಣೆ ಇಡುವದಕ್ಕೆ ಇತರ ಪ್ರಿಯನಿಗಿಂತ ನಿನ್ನ ಪ್ರಿಯನ ಅತಿಶಯವೇನು?
ಆ ದಿನದಲ್ಲಿ ಸೈನ್ಯಗಳ ಕರ್ತನು ತನ್ನ ಜನರಲ್ಲಿ ಉಳಿದವರಿಗೆ ಮಹಿಮೆಯ ಕಿರೀಟವು ಮತ್ತು ಸುಂದರವಾದ ಮುಕಟವೂ ಆಗಿರುವನು.
ಎಲ್ಲಾ ಜನಾಂಗಗಳನ್ನು ಅದುರಿಸುತ್ತೇನೆ; ಎಲ್ಲಾ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಓ ಮಹಾ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬೈಲಾಗುವಿ; ಅದಕ್ಕೆ--ಕೃಪೆಯೇ, ಕೃಪೆಯೇ ಎಂದು ಅರ್ಭಟಗಳ ಸಂಗಡ ಮುಖ್ಯ ಕಲ್ಲನ್ನು ಅವನು ಹೊರಗೆ ತರುವನು.
ಪರಲೋಕರಾಜ್ಯವು ಹೊಲದಲ್ಲಿ ಬಚ್ಚಿಟ್ಟಿದ ಸಂಪತ್ತಿಗೆ ಹೋಲಿಕೆಯಾಗಿದೆ; ಅದನ್ನು ಒಬ್ಬ ಮನು ಷ್ಯನು ಕಂಡುಕೊಂಡು ಬಚ್ಚಿಟ್ಟು ಅದರ ಸಂತೋಷದ ನಿಮಿತ್ತ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.
ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?
ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು.
ಆಗ ಆತನು ಅವರನ್ನು ನೋಡಿ--ಹಾಗಾದರೆ ಮನೇ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂದು ಬರೆದಿರು ವದು ಏನು?
ಆ ಸ್ತ್ರೀಗೆ-- ನಾವು ಈಗ ನಂಬುವದು ನಿನ್ನ ಮಾತಿನಿಂದಲ್ಲ; ಯಾಕಂದರೆ ನಾವೇ ಸ್ವತಃ ಈತನ ಮಾತನ್ನು ಕೇಳಿದ್ದೇವೆ ಮತ್ತು ಈತನು ನಿಜವಾಗಿಯೂ ಲೋಕರಕ್ಷಕನಾದ ಕ್ರಿಸ್ತನೆಂದು ಬಲ್ಲೆವು ಅಂದರು.
ಸೀಮೋನ್ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ.
ಮನೆ ಕಟ್ಟುವವರಾದ ನಿಮ್ಮಿಂದ ಹೀನೈಸಲ್ಪಟ್ಟ ಈ ಕಲ್ಲೇ ಮುಖ್ಯವಾದ ಮೂಲೆಗಲ್ಲಾ ಯಿತು.
ಆದ ಕಾರಣ ಓ ಅಗ್ರಿಪ್ಪ ರಾಜನೇ, ಪರಲೋಕದ ಆ ದರ್ಶನಕ್ಕೆ ನಾನು ಅವಿಧೇಯನಾಗಲಿಲ್ಲ.
ಆದರೆ ಅವನು ಇಸ್ರಾಯೇಲ್ಯರ ವಿಷಯವಾಗಿ--ನನಗೆ ಅವಿಧೇಯ ರಾಗಿ ಎದುರು ಮಾತನಾಡುವ ಜನರ ಕಡೆಗೆ ನಾನು ದಿನವೆಲ್ಲಾ ಕೈ ಚಾಚಿದೆನು ಎಂದು ಹೇಳುತ್ತಾನೆ.
ಯೂದಾಯದಲ್ಲಿ ನಂಬದವರಿಂದ ನನ್ನನ್ನು ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನನ್ನ ಸೇವೆಯು ಆ ಪರಿಶುದ್ಧರಿಗೆ ಹಿತಕರವಾಗಿ ತೋರಬೇಕೆಂತಲೂ
ನಾವು ನಾಶವಾಗುವವರಿಗೆ ಮರಣದಿಂದಾದ ಮರಣದ ವಾಸನೆಯಾಗಿಯೂ ರಕ್ಷಿಸಲ್ಪಟ್ಟವರಿಗೆ ಜೀವದಿಂದಾದ ಜೀವದ ಸುವಾಸನೆ ಯಾಗಿಯೂ ಇದ್ದೇವೆ; ಹೀಗಿರುವಾಗ ಇವುಗಳಿಗೆ ಯೋಗ್ಯನು ಯಾರು?ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ.
ನೀವು ಆತನಲ್ಲಿದ್ದು ಕೊಂಡೇ ಪರಿಪೂರ್ಣತೆಯನ್ನು ಹೊಂದಿದವರಾಗಿ ದ್ದೀರಿ. ಆತನು ಎಲ್ಲಾ ದೊರೆತನಕ್ಕೂ ಅಧಿಕಾರಕ್ಕೂ ಶಿರಸ್ಸಾಗಿದ್ದಾನೆ.
ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
ಆದದರಿಂದ ನಾವು ಅವರ ಅಪನಂಬಿಕೆಯನ್ನು ಅನುಸರಿಸುವವ ರಾಗದಂತೆ ಆ ವಿಶ್ರಾಂತಿಯಲ್ಲಿ ಸೇರುವದಕ್ಕೆ ಪ್ರಯಾಸ ಪಡೋಣ.
ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿ ಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.
ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.