ಕರ್ತನ ದೃಷ್ಟಿ ನೀತಿವಂತರ ಮೇಲಿದೆ. ಆತನು ಅವರ ಪ್ರಾರ್ಥನೆಗಳಿಗೆ ಕಿವಿ ಗೊಡುತ್ತಾನೆ; ಕೆಟ್ಟದ್ದನ್ನು ಮಾಡುವವರಿಗೆ ಕರ್ತನ ಮುಖವು ವಿರೋಧವಾಗಿದೆ.
Cross references
ಇದಲ್ಲದೆ ಇಸ್ರಾಯೇಲ್ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾ ದರೂ ಯಾವದೇ ತರದ ರಕ್ತವನ್ನು ತಿಂದರೆ ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು; ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು; ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಹೊಲೆಮಾಡುವಂತೆ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟಿದ್ದಾನೆ.
ಮಂತ್ರವಾದಿಗಳ ಕಡೆಗೆ ತಿರುಗಿ ಕೊಳ್ಳುವವನಿಗೂ ವ್ಯಭಿಚಾರಮಾಡುವಂತೆ ಮಾಟಗಾರರನ್ನು ಹಿಂಬಾಲಿಸುವವನಿಗೂ ನಾನು ವಿಮುಖನಾಗಿರುವೆನು, ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ.
ಅದು ನಿನ್ನ ದೇವರಾದ ಕರ್ತನು ಪರಾಂಬರಿಸುವ ದೇಶವೇ; ವರುಷದ ಆರಂಭ ದಿಂದ ಅಂತ್ಯದ ವರೆಗೂ ಯಾವಾಗಲೂ ನಿನ್ನ ದೇವ ರಾದ ಕರ್ತನ ಕಣ್ಣುಗಳು ಅದರ ಮೇಲೆ ಇವೆ.
ಈಗ ಈ ಸ್ಥಳದ ಪ್ರಾರ್ಥನೆಗೆ ನನ್ನ ಕಣ್ಣುಗಳು ತೆರೆದಿರುವವು, ನನ್ನ ಕಿವಿಗಳು ಆಲೈಸುತ್ತಿರುವವು.
ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು.
ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಕರ್ತನ ಸಿಂಹಾಸನವು ಪರಲೋಕದಲ್ಲಿ ಅದೆ; ಆತನ ಕಣ್ಣುಗಳು ದೃಷ್ಟಿಸುತ್ತವೆ; ಆತನ ರೆಪ್ಪೆಗಳು ಮನು ಷ್ಯನ ಮಕ್ಕಳನ್ನು ಶೋಧಿಸುತ್ತವೆ;
ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ.
ಪ್ರಾರ್ಥನೆಯನ್ನು ಕೇಳು ವಾತನೇ, ನಿನ್ನ ಬಳಿಗೆ ಎಲ್ಲಾ ಜನರು ಬರುವರು.
ಅದು ಈಗ ಕೊಯ್ಯಲ್ಪಟ್ಟು ಬೆಂಕಿಯಿಂದ ಸುಡಲ್ಪಟ್ಟಿದೆ; ನಿನ್ನ ಬಾಯಿ ಗದರಿಕೆಯಿಂದ ಅವರು ನಾಶವಾಗುತ್ತಾರೆ.
ಕೆಟ್ಟವರನ್ನು ಒಳ್ಳೆಯವರನ್ನು ನೋಡುತ್ತಾ ಕರ್ತನ ಕಣ್ಣುಗಳು ಪ್ರತಿಯೊಂದು ಸ್ಥಳ ದಲ್ಲಿವೆ.
ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
ಕರ್ತನು ದುಷ್ಟರಿಗೆ ದೂರ; ನೀತಿವಂತರ ಪ್ರಾರ್ಥನೆಯನ್ನು ಆತನು ಕೇಳುತ್ತಾನೆ.
ಸತ್ತವನಿಗಾಗಿ ಅಳಬೇಡಿರಿ; ಅವನಿಗಾಗಿ ಗೋಳಾ ಡಬೇಡಿರಿ; ಹೊರಟುಹೋದವನಿಗಾಗಿ ಬಹಳವಾಗಿ ಅಳಿರಿ. ಅವನು ತಿರುಗಿ ಬರುವದೇ ಇಲ್ಲ. ತಾನು ಹುಟ್ಟಿದ ದೇಶವನ್ನು ಇನ್ನು ನೋಡುವದೇ ಇಲ್ಲ.
ಗೆದಲ್ಯನನ್ನು ಅವರ ಮೇಲೆ ಇಟ್ಟಿದ್ದಾ ನೆಂದು ಕೇಳಿದಾಗ ಯೆಹೂದ್ಯರೆಲ್ಲರೂ ಅವರು ಓಡಿಸ ಲ್ಪಟ್ಟ ಎಲ್ಲಾ ಸ್ಥಳಗಳಿಂದ ತಿರುಗಿಕೊಂಡು ಯೆಹೂದ ದೇಶಕ್ಕೆ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು ಬಹು ಅಧಿಕವಾಗಿ ದ್ರಾಕ್ಷಾರಸವನ್ನೂ ಹಣ್ಣುಗಳನ್ನೂ ಕೂಡಿಸಿದರು.
ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಹೊರಗೆ ಬಂದು ಬೆಂಕಿಯೊಳಗಿಂದ ತಪ್ಪಿಸಿ ಕೊಂಡರೂ ಮತ್ತೊಂದು ಬೆಂಕಿಯು ಅವರನ್ನು ನುಂಗಿ ಬಿಡುವದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ.ಅವರು ಅತಿಕ್ರಮಿಸಿದ್ದರಿಂದ ನಾನು ಆ ದೇಶವನ್ನು ಹಾಳು ಮಾಡುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
ಸಣ್ಣ ಕಾರ್ಯಗಳ ದಿನವನ್ನು ತಿರಸ್ಕರಿಸಿದವನ್ಯಾರು? ಆ ಏಳು ಅಂದರೆ ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಕರ್ತನ ಕಣ್ಣುಗಳು ನೂಲು ಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುತ್ತವೆ.
ದೇವರು ಪಾಪಿಗಳ ಪ್ರಾರ್ಥನೆ ಯನ್ನು ಕೇಳುವದಿಲ್ಲ; ಆದರೆ ಯಾವನಾದರೂ ದೇವ ರನ್ನು ಆರಾಧಿಸುವವನಾಗಿದ್ದು ಆತನ ಚಿತ್ತದಂತೆ ನಡೆದರೆ ಅವನ ಪ್ರಾರ್ಥನೆಯನ್ನು ಆತನು ಕೇಳು ತ್ತಾನೆಂದು ನಾವು ಬಲ್ಲೆವು.
ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.