ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ಸಂತೋಷವುಳ್ಳವರು. ಅವರ ಬೆದರಿಸುವಿಕೆಗೆ ಹೆದರಬೇಡಿರಿ ಮತ್ತು ಕಳವಳ ಪಡಬೇಡಿರಿ.
Cross references
ಇವರು ಯಾವದನ್ನು ಒಪ್ಪಂದ ಎಂದು ಹೇಳುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಅವರ ಭಯಕ್ಕೆ ನೀವು ಭಯಪಡಬೇಡಿರಿ, ಇಲ್ಲವೆ ಹೆದರಬೇಡಿರಿ.
ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?
ಅವರಿಗೆ ಭಯಪಡಬೇಡ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅಂದನು.
ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮಕ್ಕಳನ್ನು ಉತ್ತರ ದೇಶ ದೊಳಗಿಂದಲೂ ನಾನು ಅವರನ್ನು ಅಟ್ಟಿ ಬಿಟ್ಟಿದ್ದ ಸಮಸ್ತ ದೇಶಗಳೊಳಗಿಂದಲೂ ಬರಮಾಡಿ ನಾನು ಅವರ ಪಿತೃಗಳಿಗೆ ಕೊಟ್ಟಂಥ ಅವರ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು ಎಂದು ಹೇಳುವ ದಿನಗಳು ಬರುವವು.
ನಾನು ನಿನ್ನ ಹಣೆಯನ್ನು ಅಭೇದ್ಯವಾದ ಕಲ್ಲಿಗಿಂತ ಗಟ್ಟಿಯಾಗಿ ವಜ್ರದಂತೆ ಮಾಡಿದ್ದೇನೆ; ಇಲ್ಲವೆ ತಿರುಗಿ ಬೀಳುವ ಮನೆತನದವರಾದರೂ ನೀನು ಅವರಿಗೆ ಭಯಪಡ ಬೇಡ; ಮತ್ತು ಅವರ ನೋಟಕ್ಕೆ ನೀನು ಗಾಬರಿಯಾಗ ಬೇಡ.
ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.
ಇದಲ್ಲದೆ ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿ ಕಾರಿಗಳ ಮತ್ತು ಅರಸುಗಳ ಮುಂದಕ್ಕೆ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು.
ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.
ನೀವು ಬಹಳ ಗುಬ್ಬಿಗಳಿಗಿಂತ ಬಹು ಬೆಲೆಯುಳ್ಳವರಾಗಿದ್ದೀರಿ. ಆದದರಿಂದ ಭಯಪಡಬೇಡಿರಿ.
ತನ್ನ ಪ್ರಾಣವನ್ನು ಕಂಡು ಕೊಳ್ಳುವವನು ಅದನ್ನು ಕಳಕೊಳ್ಳುವನು; ನನ್ನ ನಿಮಿತ್ತ ವಾಗಿ ತನ್ನ ಪ್ರಾಣವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.
ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವವನು ಅದನ್ನು ಕಳ ಕೊಳ್ಳುವನು; ಮತ್ತು ನನ್ನ ನಿಮಿತ್ತವಾಗಿ ತನ್ನ ಪ್ರಾಣ ವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.
ಮತ್ತು ತನ್ನ ಮನೆಗಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯನ್ನಾಗಲೀ ನನ್ನ ಹೆಸರಿ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಹೊಂದಿಕೊಳ್ಳುವನು; ಮತ್ತು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವನುಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.
ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳ ಬೇಕೆಂದಿರುವ ಯಾವನಾದರೂ ಅದನ್ನು ಕಳಕೊಳ್ಳು ವನು; ಆದರೆ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಯಾವನು ತನ್ನ ಪ್ರಾಣವನ್ನು ಕಳ ಕೊಳ್ಳುವನೋ ಅವನು ಅದನ್ನು ಉಳಿಸಿಕೊಳ್ಳುವನು.
ಅದಕ್ಕೆ ಯೇಸು ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ; ಯಾವನಾದರೂ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಮನೆಯನ್ನಾಗಲೀ ಸಹೋದರರನ್ನಾಗಲೀ ಸಹೋದರಿಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯ ನ್ನಾಗಲೀ ಬಿಟು
ಮನುಷ್ಯಕುಮಾರನ ನಿಮಿತ್ತ ಜನರು ನಿಮ್ಮನ್ನು ಹಗೆಮಾಡಿ ನಿಮ್ಮನ್ನು ಬಹಿಷ್ಕರಿಸಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದ್ದೆಂದು ತೆಗೆದುಹಾಕಿದರೆ ನೀವು ಧನ್ಯರು.
ನನ್ನ ಸ್ನೇಹಿತರಾದ ನಿಮಗೆ ನಾನು ಹೇಳುವದೇನಂದರೆ--ದೇಹವನ್ನು ಕೊಂದು ಅದಕ್ಕಿಂತ ಹೆಚ್ಚೇನೂ ಮಾಡಲಾರ ದವರಿಗೆ ಹೆದರಬೇಡಿರಿ.
ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.
ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.
ಇದಲ್ಲದೆ ಕರ್ತನು ರಾತ್ರಿಯಲ್ಲಿ ಪೌಲನಿಗೆ ದರ್ಶನ ಕೊಟ್ಟು--ನೀನು ಹೆದರಬೇಡ; ಸುಮ್ಮನಿರದೆ ಮಾತ ನಾಡುತ್ತಲೇ ಇರು.
ಆದದರಿಂದ ನಾನು ಕ್ರಿಸ್ತನ ನಿಮಿತ್ತ ನಿರ್ಬಲಾವಸ್ಥೆಗಳಲ್ಲಿ ಅವಮಾನಗಳಲ್ಲಿ ಕೊರತೆ ಗಳಲ್ಲಿ ಹಿಂಸೆಗಳಲ್ಲಿ ಇಕ್ಕಟ್ಟುಗಳಲ್ಲಿ ಸಂತೋಷವಾಗಿ ದ್ದೇನೆ; ಯಾಕಂದರೆ ನಾನು ಯಾವಾಗ ನಿರ್ಬಲ ನಾಗಿದ್ದೇನೋ ಅವಾಗಲೇ ಬಲವುಳ್ಳವನಾಗಿದ್ದೇನೆ.
ಹೇಗೆಂದರೆ ಕ್ರಿಸ್ತನ ಮೇಲೆ ನಂಬಿಕೆಯಿಡುವದೂ ಆತನಿಗೋಸ್ಕರ ಬಾಧೆಯನ್ನನುಭವಿಸುವದೂ ಆತನ ಪರವಾಗಿ ನಿಮಗೆ ಅನುಗ್ರಹವಾಗಿ ದೊರೆಯಿತು.ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನಲ್ಲಿರುವದೆಂದು ನೀವು ಕೇಳುವಂಥ ಹೋರಾಟವೇ ನಿಮಗುಂಟು.
ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನ ಮಾಡಿದ ಜೀವದ ಕಿರೀಟ ವನ್ನು ಹೊಂದುವನು;
ಒಬ್ಬನು ಅನ್ಯಾಯವಾಗಿ ಬಾಧೆಪಡುವವ ನಾಗಿದ್ದು ದೇವರ ವಿಷಯವಾದ ಮನಸ್ಸಾಕ್ಷಿಗೋಸ್ಕರ ಆ ದುಃಖವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ.
ಹಾಗೆಯೇ ಸಾರಳು ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು. ನೀವು ಸಾರಳ ಕುಮಾರ್ತೆಗಳಾಗಿದ್ದೀರಲ್ಲಾ; ನೀವು ಒಳ್ಳೇದನ್ನು ಮಾಡುವದಾದರೆ ಯಾವ ಭೀತಿಗೂ ಗಾಬರಿ ಪಡುವದಿಲ್ಲ.
ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ.