ಒಳ್ಳೇಮನಸ್ಸಾಕ್ಷಿ ಯುಳ್ಳವರಾಗಿರ್ರಿ; ಆಗ ನೀವು ಕೆಟ್ಟದ್ದನ್ನು ಮಾಡುವವ ರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೆಪಡುವವರು.
Cross references
ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು.
ಈ ವಿಷಯ ದೇವರ ಮುಂದೆಯೂ ಮನುಷ್ಯರ ಮುಂದೆಯೂ ಯಾವಾಗಲೂ ನಾನು ದೋಷರಹಿತವಾದ ಮನಸ್ಸಾಕ್ಷಿಯುಳ್ಳವನಾಗಿರುವಂತೆ ಅಭ್ಯಾಸಮಾಡಿಕೊಳ್ಳುತ್ತೇನೆ.
ಈ ಮಾತನ್ನು ನಾನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ; ಪವಿ ತ್ರಾತ್ಮನಲ್ಲಿ ನನ್ನ ಮನಸ್ಸಾಕ್ಷಿಯು ನನಗೆ ಸಾಕ್ಷಿ ಕೊಡುತ್ತದೆ.
ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ
ಶುದ್ಧ ಹೃದಯದಿಂದಲೂ ಒಳ್ಳೇಮನಸ್ಸಾಕ್ಷಿ ಯಿಂದಲೂ ನಿಷ್ಕಪಟವಾದ ನಂಬಿಕೆಯಿಂದಲೂ ಉಂಟಾಗುವ ಪ್ರೀತಿಯೇ ಆಜ್ಞೆಯ ಅಂತ್ಯವಾಗಿದೆ.
ನಂಬಿಕೆಯನ್ನೂ ಒಳ್ಳೇ ಮನಸ್ಸಾಕ್ಷಿಯನ್ನೂ ಹಿಡಿದುಕೋ; ಕೆಲವರು ನಂಬಿಕೆ ಯನ್ನು ತಳ್ಳಿಬಿಟ್ಟು ಅದರ ವಿಷಯದಲ್ಲಿ ಹಡಗು ಒಡೆದ ವರಂತೆ ಇದ್ದಾರೆ;ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.
ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಕ ಮಾಡುತ್ತೇನೆ. ಇದಲ್ಲದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ನಾನು ನನ್ನ ಪೂರ್ವಿಕ ರನ್ನು ಅನುಸರಿಸಿ ದೇವರನ್ನು ಸೇವಿಸಿ ಸ್ತೋತ್ರ ಸಲ್ಲಿಸು ತ್ತೇನೆ.
ಇದರಿಂದ ವಿರೋಧಪಕ್ಷ ದವನು ನಿಮ್ಮ ವಿಷಯದಲ್ಲಿ ಕೆಟ್ಟದ್ದು ಹೇಳುವದಕ್ಕೆ ಯಾವದೂ ಇಲ್ಲದೆ ನಾಚಿಕೆಪಡುವನು.
ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.
ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳ ಬೇಕೆಂದು ಅಪೇಕ್ಷಿಸುವವರಾದ ನಮಗೆ ಒಳ್ಳೇ ಮನಸ್ಸಾಕ್ಷಿ ಇದೆಯೆಂದು ನಂಬಿದ್ದೇವೆ.
ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.
ನೀವು ಒಳ್ಳೇ ನಡತೆಯಿಂದ ತಿಳುವಳಿಕೆಯಿಲ್ಲದ ಮೂಢಜನರ ಬಾಯಿ ಮುಚ್ಚುವಂತೆ ಮಾಡುವದೇ ದೇವರ ಚಿತ್ತ.
ಒಬ್ಬನು ಅನ್ಯಾಯವಾಗಿ ಬಾಧೆಪಡುವವ ನಾಗಿದ್ದು ದೇವರ ವಿಷಯವಾದ ಮನಸ್ಸಾಕ್ಷಿಗೋಸ್ಕರ ಆ ದುಃಖವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ.
ಅದೇ ರೀತಿಯಾಗಿ ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ. ಯಾರಾದರೂ ವಾಕ್ಯಕ್ಕೆ ಅವಿಧೇಯರಾಗಿದ್ದರೂ ಹೆಂಡತಿಯರ ನಡತೆಯಿಂದ ವಾಕ್ಯವಿಲ್ಲದೆ ಅವರನ್ನು ಗೆಲ್ಲುವಂತೆ
ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.