ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
Cross references
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
ಆ ದಿನದಲ್ಲಿ ದಾವೀದನ ಮನೆತನದ ವರಿಗೂ ಯೆರೂಸಲೇಮಿನ ನಿವಾಸಿಗ ಳಿಗೂ ಪಾಪದ ನಿಮಿತ್ತ ಮತ್ತು ಅಶುದ್ಧತ್ವದ ನಿಮಿತ್ತ ಬುಗ್ಗೆ ತೆರೆಯಲ್ಪಡುವದು.
ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.
ಅದಕ್ಕೆ ಸೀಮೋನ ಪೇತ್ರನು ಆತ ನಿಗೆ--ಕರ್ತನೇ, ನನ್ನ ಪಾದಗಳನ್ನು ಮಾತ್ರವಲ್ಲದೆ ನನ್ನ ಕೈಗಳನ್ನು ಮತ್ತು ತಲೆಯನ್ನು ಸಹ ತೊಳೆ ಅಂದನು.
ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು--ಅಗೋ, ನೀರು; ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕೆ ನನಗೆ ಅಡ್ಡಿ ಏನು ಅಂದನು.
ಅದಕ್ಕೆ ಫಿಲಿಪ್ಪನು--ನೀನು ನಿನ್ನ ಹೃದಯಪೂರ್ವಕವಾಗಿ ನಂಬುವದಾದರೆ ಆಗ ಬಹುದು ಎಂದು ಹೇಳಿದನು. ಅದಕ್ಕೆ ಅವನು ಪ್ರತ್ಯು ತ್ತರವಾಗಿ--ಯೇಸು ಕ್ರಿಸ್ತನನ್ನು ದೇವಕುಮಾರನೆಂದು ನಾನು ನಂಬುತ್ತೇನೆ ಎಂದು ಹೇಳಿ
ಆಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರಕೊಂಡು ಹೋಗಿ ಅವರ ಗಾಯಗಳನ್ನು ತೊಳೆದನು; ಕೂಡಲೆ ತಾನು ತನ್ನವ ರೆಲ್ಲರ ಸಹಿತವಾಗಿ ಬಾಪ್ತಿಸ್ಮ ಮಾಡಿಸಿಕೊಂಡನು.
ಈಗ ನೀನು ತಡಮಾಡುವದು ಯಾಕೆ? ಎದ್ದು ಬಾಪ್ತಿಸ್ಮ ಮಾಡಿಸಿ ಕೊಂಡು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ ನಿನ್ನ ಪಾಪಗಳನ್ನು ತೊಳೆದುಕೋ ಎಂದು ಹೇಳಿದನು.
ಆದರೂ ಆದಾಮನಿಂದ ಮೋಶೆಯವರೆಗೂ ಮರಣದ ಆಳಿಕೆಯು ನಡೆಯುತ್ತಿತ್ತು. ಆದಾಮನ ಆ ಅತಿಕ್ರಮಣಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಿಗೆ ಸೂಚನೆ ಯಾಗಿದ್ದಾನೆ.
ಯೇಸು ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡವರಾದ ನಾವೆಲ್ಲರು ಆತನ ಮರಣದಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?
ನೀನು ಕರ್ತನಾದ ಯೇಸು ವನ್ನು ಬಾಯಿಂದ ಅರಿಕೆಮಾಡಿ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ್ದಾನೆಂದು ನಿನ್ನ ಹೃದಯದಲ್ಲಿ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ.
ಸಹೋದರರೇ, ನಾನು ನಿಮಗೋಸ್ಕರವೇ ಸಾಮ್ಯರೂಪವಾಗಿ ನನ್ನ ವಿಷಯದಲ್ಲಿಯೂ ಅಪೊಲ್ಲೋಸನ ವಿಷಯದಲ್ಲಿಯೂ ಹೇಳಿದ್ದೇನೆ; ಬರೆದಿರುವದನ್ನು ನೀವು ವಿಾರಿಹೋಗದೆ ನಿಮ್ಮಲ್ಲಿ ಯಾರೂ ಒಬ್ಬನಿಗೆ ವಿರೋಧವಾಗಿ ಮತ್ತೊಬ್ಬನು ಉಬ್ಬಿಕೊಳ್ಳಬಾರದೆಂಬದನ್ನು ನಮ್ಮಲ್ಲಿ ಕಲಿತುಕೊಳ್ಳ ಬೇಕು.
ಯೆಹೂದ್ಯರಾಗಲಿ ಅನ್ಯರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗು ವದಕ್ಕಾಗಿ ಒಬ್ಬನೇ ಆತ್ಮನಿಂದ ಬಾಪ್ತಿಸ್ಮ ಮಾಡಿಸಿ ಕೊಂಡೆವು; ಆ ಒಬ್ಬನೇ ಆತ್ಮನು ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿದ್ದಾನೆ.
ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.
ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿ ಕೊಂಡಿರಿ.
ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ
ಾಪ್ತಿಸ್ಮದಲ್ಲಿ ಆತನೊಂದಿಗೆ ಹೂಣಲ್ಪಟ್ಟು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಕಾರ್ಯದಲ್ಲಿ ನಂಬಿಕೆಯಿಟ್ಟಿರುವದರಿಂದ ನೀವು ಸಹ ಅದರಲ್ಲಿ (ಬಾಪ್ತಿಸ್ಮದಲ್ಲಿ) ಎಬ್ಬಿಸಲ್ಪಟ್ಟಿದ್ದೀರಿ.
ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ನೀನು ಕರೆಯಲ್ಪಟ್ಟಿದ್ದೀ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಅರಿಕೆಯನ್ನು ಮಾಡಿದ್ದೀಯಲ್ಲಾ.
ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.
ತನ್ನ ಮಗನನ್ನು ಸತ್ತವರೊಳಗಿಂದಲೂ ದೇವರು ಎಬ್ಬಿಸ ಸಮರ್ಥನಾಗಿದ್ದಾನೆಂದು ಎಣಿಸಿದನು. ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಉಪಮಾನವಾಗಿ ಹೊಂದಿದನು.
ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ