ಹಾಗೆಯೇ ಸಾರಳು ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು. ನೀವು ಸಾರಳ ಕುಮಾರ್ತೆಗಳಾಗಿದ್ದೀರಲ್ಲಾ; ನೀವು ಒಳ್ಳೇದನ್ನು ಮಾಡುವದಾದರೆ ಯಾವ ಭೀತಿಗೂ ಗಾಬರಿ ಪಡುವದಿಲ್ಲ.
Cross references
ಆದದರಿಂದ ಸಾರಳು ತನ್ನೊಳಗೆ ನಕ್ಕು--ನಾನು ವೃದ್ಧಳಾಗಿದ್ದೇನೆ. ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರು ವಲ್ಲಿ ನನಗೆ ಸಂತೋಷವಾದೀತೇ? ಅಂದಳು.
ಆದರೆ ಸಾರಳು ಭಯ ಪಟ್ಟು--ನಾನು ನಗಲಿಲ್ಲ ಎಂದು ಹೇಳಿ ಬೊಂಕಿದಾಗ ಆತನು--ಹಾಗಲ್ಲ, ನೀನು ನಕ್ಕದ್ದುಂಟು ಅಂದನು.
ಆ ಸ್ತ್ರೀ ಉದಯ ಕಾಲಕ್ಕೆ ಮುಂಚೆ ಬಂದು ಬೆಳಕಾಗುವ ಮಟ್ಟಿಗೂ ಅಲ್ಲಿ ತನ್ನ ಯಜಮಾನನು ಇರುವ ಮನೆಯ ಬಾಗಿಲ ಬಳಿಯಲ್ಲಿ ಬಿದ್ದಿದ್ದಳು.
ನೀನು ಸುಳ್ಳು ಹೇಳಿ ನನ್ನನ್ನು ಜ್ಞಾಪಕ ಮಾಡದೆ ಇಲ್ಲವೆ ಅದನ್ನು ಮನಸ್ಸಿಗೆ ತಾರದೆ ಇರುವಾಗ ಯಾರಿಗೆ ಅಂಜಿಕೊಂಡು ಭಯಪಟ್ಟಿ?
ಆಗ ಶದ್ರಕ್ ಮೇಷಕ್ ಅಬೇದ್ ನೆಗೋ ಎಂಬವರು ಅರಸನಿಗೆ ಪ್ರತ್ಯುತ್ತರವಾಗಿ--ಓ ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ.
ಆಗ ಪೇತ್ರನು ಭವನದ ಹೊರಗೆ ಕೂತಿರಲು ಒಬ್ಬ ಹುಡುಗಿಯು ಅವನ ಬಳಿಗೆ ಬಂದು-- ನೀನೂ ಗಲಿಲಾಯದ ಯೇಸುವಿನೊಂದಿಗೆ ಇದ್ದವನು ಅಂದಳು.
ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ--ಜನರ ಅಧಿಕಾರಿಗಳೇ, ಇಸ್ರಾಯೇಲಿನ ಹಿರಿಯರೇ,
ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ.
ಇಲ್ಲವೆ ಅವರು ಅಬ್ರಹಾಮನ ಸಂತತಿಯವರಾದ ಕಾರಣ ಅವರೆ ಲ್ಲರೂ ಮಕ್ಕಳಲ್ಲ; ಆದರೆ--ಇಸಾಕನಲ್ಲಿಯೇ ನಿನ್ನ ಸಂತ ತಿಯು ಕರೆಯಲ್ಪಡುವದು ಎಂಬದೇ.
ಯಾಕಂದರೆ ದಾಸಿಯಿಂದ ಒಬ್ಬನು, ಸ್ವತಂತ್ರಳಿಂದ ಒಬ್ಬನು ಹೀಗೆ ಅಬ್ರಹಾಮನಿಗೆ ಇಬ್ಬರು ಪುತ್ರರಿದ್ದರೆಂದು ಬರೆಯಲ್ಪಟ್ಟಿದೆ.
ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ಸಂತೋಷವುಳ್ಳವರು. ಅವರ ಬೆದರಿಸುವಿಕೆಗೆ ಹೆದರಬೇಡಿರಿ ಮತ್ತು ಕಳವಳ ಪಡಬೇಡಿರಿ.