ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು?
Cross references
ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು.
ನಿಮ್ಮ ತಾಯಿ ಬಹಳವಾಗಿ ನಾಚಿಕೆಪಡುವಳು; ನಿಮ್ಮನ್ನು ಹೆತ್ತವಳು ಲಜ್ಜೆ ಹೊಂದುವಳು; ಇಗೋ, ಜನಾಂಗ ಗಳಲ್ಲಿ ಅಂತ್ಯವಾದದ್ದು ಕಾಡೂ ಒಣ ಭೂಮಿಯೂ ಅರಣ್ಯವೂ ಆಗುವದು.
ವೃದ್ಧ ಯುವಕ ಯುವತಿ ಯರನ್ನು ಎಳೆಕೂಸುಗಳನ್ನು ಮತ್ತು ಹೆಂಗಸರನ್ನು ಸಂಪೂರ್ಣವಾಗಿ ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ ಅವನ ಹತ್ತಿರ ಹೋಗ ಬೇಡಿರಿ; ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ ಅಂದಾಗ, ಅವರು ಆಲಯದ ಮುಂದಿದ್ದ ಹಿರಿಯರಿಂದ ಪ್ರಾರಂಭಿಸಿದರು.
ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ತಿಳಿದಿದ್ದೇನೆ; ಆದದರಿಂದ ನಾನು ನಿಮ್ಮ ಎಲ್ಲಾ ಅಕ್ರಮಗಳಿಗಾಗಿ ಶಿಕ್ಷಿಸುತ್ತೇನೆ.
ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
ತರುವಾಯ ತಾನು ಹೆಚ್ಚಾದ ಮಹತ್ಕಾರ್ಯ ಗಳನ್ನು ನಡಿಸಿದ ಪಟ್ಟಣಗಳು ಮಾನಸಾಂತರಪಡದೆ ಇದ್ದದರಿಂದ ಆತನು ಅವುಗಳನ್ನು ಗದರಿಸತೊ ಡಗಿ --
ಆದರೆ ಆ ದಿನದಲ್ಲಿ ಆ ಪಟ್ಟಣಕ್ಕಿಂತಲೂ ಸೊದೋಮಿನ ಗತಿಯು ಹೆಚ್ಚಾಗಿ ತಾಳಬಹುದಾಗಿರುವದು ಎಂದು ನಾನು ನಿಮಗೆ ಹೇಳುತ್ತೇನೆ.
ಇದಲ್ಲದೆ ತನ್ನ ಒಡೆಯನ ಚಿತ್ತವನ್ನು ತಿಳಿದು ತನ್ನನ್ನು ಸಿದ್ಧಮಾಡಿಕೊಳ್ಳದೆ ಇಲ್ಲವೆ ಅವನ ಚಿತ್ತಕ್ಕೆ ಅನುಸಾರವಾಗಿ ಮಾಡದೆ ಇದ್ದ ಸೇವಕನು ಬಹಳ ಪೆಟ್ಟುಗಳನ್ನು ತಿನ್ನುವನು.
ಅವರು ಹಸಿರಾಗಿರುವ ಮರಕ್ಕೆ ಇವುಗಳನ್ನು ಮಾಡಿದರೆ ಒಣಗಿದ ಮರಕ್ಕೆ ಏನು ಮಾಡಿಯಾರು ಅಂದನು.
ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ
ಓ ಬುದ್ಧಿಯಿಲ್ಲದ ಗಲಾತ್ಯದವರೇ, ಸತ್ಯಕ್ಕೆ ವಿಧೇಯರಾಗದಂತೆ ನಿಮ್ಮನ್ನು ಯಾರು ಮರುಳುಗೊಳಿಸಿದರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿ ಸ್ಪಷ್ಟವಾಗಿ ವರ್ಣಿಸಲ್ಪಟ್ಟನಲ್ಲವೇ?
ನೀವು ಚೆನ್ನಾಗಿ ಓಡುತ್ತಿದ್ದಿರಿ, ನೀವು ಸತ್ಯಕ್ಕೆ ವಿಧೇಯರಾಗದಂತೆ ಯಾರು ನಿಮ್ಮನ್ನು ತಡೆದರು?
ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;
ಯಾಕಂದರೆ ದೂತರ ಮೂಲಕ ಹೇಳಲ್ಪಟ್ಟ ವಾಕ್ಯವು ಸ್ಥಿರವಾಗಿದ್ದು ಅದನ್ನು ವಿಾರಿ ಮಾಡಿದ ಪ್ರತಿಯೊಂದು ತಪ್ಪಿಗೂ ಅವಿಧೇಯತ್ವಕ್ಕೂ ನ್ಯಾಯ ವಾದ ಪ್ರತಿಫಲ ಹೊಂದಿದ ಮೇಲೆ
ದೇವರು ಸಹ ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯ ಗಳನ್ನೂ ನಾನಾವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ತನ್ನ ಸ್ವಂತ ಚಿತ್ತಾನುಸಾರವಾಗಿ ಪವಿತ್ರಾತ್ಮ ದಾನಗಳಿಂದ ಅವರಿಗೆ ಸಾಕ್ಷಿ ಕೊಡುತ್ತಿದ್ದನು.
ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.
ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.
ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.