ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು.
Cross references
ನಿನ್ನ ಚಿತ್ತದಂತೆ ಮಾಡುವದಕ್ಕೆ ನನಗೆ ಬೋಧಿಸು; ನೀನು ನನ್ನ ದೇವರು; ಒಳ್ಳೇದಾಗಿರುವ ನಿನ್ನ ಆತ್ಮವು ನನ್ನನ್ನು ನೆಟ್ಟನೆಯ ಭೂಮಿಯಲ್ಲಿ ನಡಿಸಲಿ.
ಆದರೆ ಅವರು ಒಡಂಬಡಿಕೆಯನ್ನು ವಿಾರಿದ ಮನುಷ್ಯರ ಹಾಗೆ ಇದ್ದಾರೆ; ಅಲ್ಲಿ ಅವರು ನನಗೆ ವಿರುದ್ಧವಾಗಿ ದ್ರೋಹದಿಂದ ನಡೆದುಕೊಂಡಿದ್ದಾರೆ.
ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು.
ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು.
ಅವರಿಗೆ--ನೀವು ಸಹ ದ್ರಾಕ್ಷೇ ತೋಟಕ್ಕೆ ಹೋಗಿರಿ; ಸರಿಯಾದ ಕೂಲಿಯನ್ನು ನಾನು ನಿಮಗೆ ಕೊಡುವೆನು ಎಂದು ಹೇಳಿದನು. ಆಗ ಅವರು ಹೊರಟು ಹೋದರು.
ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
ಯಾಕಂದರೆ ಯಾವನು ದೇವರ ಚಿತ್ತದಂತೆ ಮಾಡುವನೋ ಅವನೇ ನನ್ನ ಸಹೋದರನೂ ನನ್ನ ಸಹೋದರಿಯೂ ನನ್ನ ತಾಯಿಯೂ ಆಗಿದ್ದಾರೆ ಅಂದನು.
ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು
ಇವರು ರಕ್ತದಿಂದಾಗಲಿ ಇಲ್ಲವೆ ಶರೀರದ ಇಚ್ಛೆಯಿಂದಾಗಲಿ ಇಲ್ಲವೆ ಮನುಷ್ಯನ ಇಚ್ಛೆಯಿಂದಾ ಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.
ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.
ಹಾಗೆ ಎಂದಿಗೂ ಅಲ್ಲ; ಪಾಪದ ಪಾಲಿಗೆ ಸತ್ತವರಾದ ನಾವು ಇನ್ನೂ ಅದರಲ್ಲಿ ಬದುಕು ವದು ಹೇಗೆ?
ಅದೇ ಪ್ರಕಾರ ನೀವು ಸಹ ಪಾಪದ ಪಾಲಿಗೆ ನಿಜವಾಗಿ ಸತ್ತವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗಾಗಿ ಜಿವಿಸುವವರೂ ಎಂದು ಎಣಿಸಿಕೊಳ್ಳಿರಿ.
ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ನ್ಯಾಯಪ್ರಮಾಣದ ಪಾಲಿಗೆ ಸತ್ತಿರಿ. ದೇವರಿಗೆ ಫಲಫಲಿಸುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತುಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.
ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
ನಮ್ಮಲ್ಲಿ ಒಬ್ಬನಾದರೂ ತನಗಾಗಿ ಬದುಕುವದೂ ಇಲ್ಲ, ತನಗಾಗಿ ಸಾಯುವದೂ ಇಲ್ಲ.
ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ ತಮಗೋಸ್ಕರ ಸತ್ತು ತಿರಿಗಿ ಎದ್ದು ಬಂದಾತನಿಗಾಗಿ ಜೀವಿಸಬೇಕೆಂತಲೇ ಆತನು ಎಲ್ಲರಿಗೋಸ್ಕರ ಸತ್ತನು.
ಯಾಕಂ ದರೆ ನಾನಂತೂ ದೇವರಿಗಾಗಿ ಜೀವಿಸುವದಕ್ಕೊಸ್ಕರ ನ್ಯಾಯಪ್ರಮಾಣದ ಮೂಲಕವಾಗಿ ನ್ಯಾಯಪ್ರಮಾ ಣದ ಪಾಲಿಗೆ ಸತ್ತೆನು.
ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು.
ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ;
ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು.
ಆದದರಿಂದ ನೀವು ಅವರೊಂದಿಗೆ ಪಾಲುಗಾರ ರಾಗಿರಬೇಡಿರಿ.
ಬುದ್ದಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬದನ್ನು ವಿಚಾರಿಸಿ ತಿಳಿದವರಾಗಿರ್ರಿ.
ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ಕಣ್ಣಿಗೆ ಕಾಣುವಾಗ ಮಾತ್ರ ಸೇವೆ ಮಾಡದೆ ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಹೃದಯ ಪೂರ್ವಕವಾಗಿ ನಡಿಸಿರಿ.
ಆದಕಾರಣ ನಾವು ಸಹ ಅದನ್ನು ಕೇಳಿದ ದಿವಸ ದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲಜ್ಞಾನವನ್ನೂ ಆತ್ಮೀಯ ಗ್ರಹಿಕೆಯನ್ನೂ ಹೊಂದಿ ಆತನ ಚಿತ್ತದ ವಿಷಯವಾದ ತಿಳುವಳಿಕೆ ಯಿಂದ ತುಂಬಿಕೊಂಡು
ಪೂರ್ವದಲ್ಲಿ ನೀವು ಸಹ ಅಂಥವುಗಳಲ್ಲಿ ಜೀವಿಸುತ್ತಿ ದ್ದಾಗ ಅವುಗಳಂತೆ ನಡೆದಿರಿ.
ನಿಮ್ಮಲ್ಲಿ ಒಬ್ಬನಾದ ಕ್ರಿಸ್ತನ ಸೇವಕನಾಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ಪರಿಪೂರ್ಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ಇವನು ನಿಮಗೋಸ್ಕರ ಕಷ್ಟಪಟ್ಟು ಪ್ರಾರ್ಥನೆಗಳಲ್ಲಿ ಹೋರಾಡುತ್ತಾನೆ.
ಎಲ್ಲಾದರಲ್ಲಿಯೂ ಕೃತಜ್ಞತಾ ಸ್ತುತಿ ಮಾಡಿರಿ; ಯಾಕಂದರೆ ಇದೇ ನಿಮ್ಮ ವಿಷಯ ವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.
ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.
ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ
ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ.
ಅಧಿಪತಿಗಳು ಕೆಟ್ಟವರನ್ನು ದಂಡಿಸು ವದಕ್ಕೂ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವದಕ್ಕೂ (ಅರಸನಿಂದ) ಅವರು ಕಳುಹಿಸಲ್ಪಟ್ಟವರೆಂತಲೂ ತಿಳಿದು ಅವರಿಗೆ ಅಧೀನರಾಗಿರ್ರಿ.
ಲೋಕವು ಅದರ ಆಶೆಯೂ ಗತಿಸಿಹೋಗುತ್ತವೆ, ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಇರುವನು.