ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.
Cross references
ಅವು ನಿನ್ನ ಮುಂದೆ ನಾಶವಾದ ಮೇಲೆ ನೀನು ಅವುಗಳನ್ನು ಅನುಸರಿಸಿ ಬಲೆಯಲ್ಲಿ ಸಿಕ್ಕಿಬೀಳದ ಹಾಗೆಯೂ--ಈ ಜನಾಂಗಗಳು ತಮ್ಮ ದೇವರುಗಳನ್ನು ಹೇಗೆ ಸೇವಿಸಿದವೋ ನಾನೂ ಹಾಗೆ ಮಾಡುತ್ತೇನೆಂದು ಹೇಳಿ ಅವರ ದೇವರುಗಳನ್ನು ಕುರಿತು ವಿಚಾರಿಸದ ಹಾಗೆಯೂ ನೋಡಿಕೋ.
ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು.
ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿಬಿಟ್ಟ ಅಮೋರಿಯರ ಎಲ್ಲಾ ಕೃತ್ಯಗಳ ಪ್ರಕಾರ ಅವನು ವಿಗ್ರಹಗಳನ್ನು ಹಿಂಬಾ ಲಿಸಿ ಬಹಳ ಅಸಹ್ಯವಾಗಿ ನಡೆದನು.
ಆಸನು ಈ ಮಾತುಗಳನ್ನೂ ಪ್ರವಾದಿಯಾದ ಓದೇದನ ಪ್ರವಾದನೆಯನ್ನೂ ಕೇಳಿದಾಗ ಅವನು ಬಲಗೊಂಡು ಯೆಹೂದ ಬೆನ್ಯಾವಿಾನನ ಸಮಸ್ತ ದೇಶದೊಳಗಿಂದಲೂ ಎಫ್ರಾಯಾಮಿನ ಬೆಟ್ಟದಲ್ಲಿ ತಾನು ಹಿಡಿದ ಪಟ್ಟಣಗಳೊಳಗಿಂದಲೂ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ ಕರ್ತನ ದ್ವಾರಾಂಗಳದ ಮುಂದೆ ಇದ್ದ ಕರ್ತನ ಬಲಿಪೀಠವನ್ನು ನೂತನ ಪಡಿಸಿದನು.
ಯಾರಿಗೆ ಅಯ್ಯೋ? ಯಾರಿಗೆ ದುಃಖ? ಯಾರಿಗೆ ಕಲಹಗಳು? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯ ಪಡುತ್ತಾರೆ? ಯಾರಿಗೆ ಕೆಂಪೇ ರಿದ ಕಣ್ಣುಗಳು?
ಮದ್ಯಪಾನವನ್ನು ಅತಿಯಾಗಿ ಕುಡಿಯಲು ಬೆಳ ಗಿನ ಜಾವದಲ್ಲಿ ಎದ್ದು ರಾತ್ರಿಯ ವರೆಗೂ ದ್ರಾಕ್ಷಾ ರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರಿಗೆ ಅಯ್ಯೋ!
ಆದರೆ ಇವರು ಸಹ ದ್ರಾಕ್ಷಾರಸದಿಂದ ತಪ್ಪಿ ಮಧ್ಯದಿಂದ ಮೋಸಹೋಗಿದ್ದಾರೆ; ಯಾಜಕನೂ ಪ್ರವಾದಿಯೂ ಮದ್ಯದಿಂದ ತಪ್ಪಿ ದ್ರಾಕ್ಷಾರಸದ ವಶ ವಾಗಿದ್ದು ಮದ್ಯದಿಂದ ಮೋಸಹೋಗಿದ್ದಾರೆ; ದರ್ಶನ ದಲ್ಲಿ ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ.
ಸಮಾ ಧಿಗಳಲ್ಲಿ ಉಳಿದು ಗವಿಗಳಲ್ಲಿ ತಂಗುವವರು; ಹಂದಿ ಯ ಮಾಂಸವನ್ನು ತಿನ್ನುವವರು ತಮ್ಮ ಪಾತ್ರೆಗಳಲ್ಲಿ ಅಸಹ್ಯವಾದವುಗಳ ಸಾರುಳ್ಳವರು; ಅವರು--
ನನ್ನನ್ನು ಹಿಂಸಿಸುವವರು ನಾಚಿಕೆ ಪಡಲಿ; ಆದರೆ ನನಗೆ ನಾಚಿಕೆಯಾಗದಿರಲಿ. ಅವರು ದಿಗಿಲುಪಡಲಿ; ಆದರೆ ನಾನು ದಿಗಿಲುಪಡದಂತೆ ಮಾಡುವ ಕೆಟ್ಟದಿನವನ್ನು ಅವರ ಮೇಲೆ ಬರಮಾಡು, ಎರಡರಷ್ಟು ಅವರನ್ನು ನಾಶಪಡಿಸು.
ತಿರುಗಿ ಬೀಳುವ ಇಸ್ರಾಯೇಲನ ಮನೆತನದವರಿಗೆ ನೀನು ಹೇಳಬೇಕಾ ದದ್ದೇನಂದರೆ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ಎಲ್ಲಾ ಅಸಹ್ಯಗಳನ್ನು ಸಾಕುಮಾಡಿರಿ;
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಇಸ್ರಾಯೇಲಿನ ಪ್ರಭುಗಳೇ, ನೀವು ಸಾಕುಮಾಡಿರಿ, ಬಲಾತ್ಕಾರವನ್ನು ಸುಲಿಗೆಯನ್ನು ಬಿಡಿರಿ; ನ್ಯಾಯವನ್ನೂ ನೀತಿಯನ್ನೂ ಮಾಡಿರಿ; ನನ್ನ ಜನರನ್ನು ಓಡಿಸಬೇಡಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನ
ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.
ಹೇಗೆಂದರೆ ಜಗದು ತ್ಪತ್ತಿಗೆ ಮೊದಲುಗೊಂಡು ಆತನ ಅದೃಶ್ಯವಾದವುಗಳು ಅಂದರೆ ಆತನ ನಿತ್ಯ ಶಕ್ತಿಯೂ ದೈವತ್ವವೂ ಸೃಷ್ಟಿಗಳನ್ನು ಗ್ರಹಿಸುವದರ ಮೂಲಕ ಸ್ಪಷ್ಟವಾಗಿ ಕಾಣಬರುತ್ತವೆ.ಆದಕಾರಣ ಅವರು ನೆವವಿಲ್ಲದವರಾಗಿದ್ದಾರೆ.
ಹೀಗಿರಲಾಗಿ ಸಹೋದರರೇ, ಶರೀರಕ್ಕನುಸಾರ ವಾಗಿ ಜೀವಿಸುವದಕ್ಕೆ ನಾವು ಶರೀರಕ್ಕೆ ಋಣಸ್ಥರಲ್ಲ.
ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
ನೀವು ಅನ್ಯರಾಗಿದ್ದಾಗ ನಿಮಗೆ ಪ್ರೇರಣೆಯಾದ ಹಾಗೆ ಮೂಕವಿಗ್ರಹಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.
ಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.
ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ
ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.
ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ;
ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ;
ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.
ದೇವರನ್ನರಿಯದ ಅನ್ಯಜನಗಳಂತೆ ಕಾಮಾಭಿಲಾಷೆಗೆ ಒಳಪಡಬಾರದು.
ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ
ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ
ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು