ಹೀಗಿರುವದರಿಂದ ದೇವರ ತ್ರಾಣವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ತರುವನು.
Cross references
ಆದಾಗ್ಯೂ ನೀವೆಷ್ಟು ಬಲವಂತ ಮಾಡಿದರೂ ಐಗುಪ್ತದ ಅರಸನು ನಿಮ್ಮನ್ನು ಹೋಗಗೊಡಿಸುವದಿಲ್ಲವೆಂದು ನನಗೆ ನಿಶ್ಚಯವಾಗಿ ತಿಳಿದದೆ.
ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ--ಇಬ್ರಿಯರ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಸನ್ನಿಧಿಯಲ್ಲಿ ತಗ್ಗಿಸಿಕೊಳ್ಳದೆ ಇರುವದು ಎಲ್ಲಿಯವರೆಗೇ? ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಹೋಗಗೊಡಿಸು.
ಅದಕ್ಕೆ ಮೋಶೆಯು ತನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನಂದರೆ--ಕರ್ತನೇ, ನೀನು ಮಹಾಶಕ್ತಿಯಿಂದಲೂ ಬಲವುಳ್ಳ ಕೈಯಿಂದಲೂ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನರ ಮೇಲೆ ನಿನ್ನ ಕೋಪವು ಯಾಕೆ ಉರಿಯುವದು?
ನಾನೂ ಅವರಿಗೆ ವಿರೋಧವಾಗಿ ನಡೆದುಕೊಂಡು ತಮ್ಮ ಶತ್ರುಗಳ ದೇಶಕ್ಕೆ ಬರಮಾಡಿದ್ದನ್ನು ಅರಿಕೆಮಾಡಿ ಪರಿಛೇದನೆ ಇಲ್ಲದ ಅವರ ಹೃದಯವು ತಗ್ಗಿಸಲ್ಪಟ್ಟು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಅವರು ಒಪ್ಪಿಕೊಳ್ಳುವದಾದರೆ
ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿದ್ದನ್ನು ಕಂಡಿಯಾ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ದಿವಸಗಳಲ್ಲಿ ಆ ಕೇಡನ್ನು ಬರಮಾಡದೆ ಅವನ ಮಗನ ದಿವಸಗಳಲ್ಲಿ ಅವನ ಮನೆಯ ಮೇಲೆ ಬರ ಮಾಡುವೆನು ಅಂದನು.
ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ವಿರೋಧವಾಗಿ ಅವರು ನಾಶವೂ ಶಾಪವೂ ಆಗುವದೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ನಿನ್ನನ್ನು ಕರ್ತನ ಮುಂದೆ ತಗ್ಗಿಸಿ ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದನ್ನು ನಾನೇ ಕೇಳಿದ್ದೇನೆಂದು ಕರ್ತನು ಹೇಳುತ್ತಾನೆ.ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.
ಆದದರಿಂದ ಇಸ್ರಾಯೇಲಿನ ಪ್ರಧಾನರೂ ಅರಸನೂ ತಮ್ಮನ್ನು ತಗ್ಗಿಸಿಕೊಂಡುಕರ್ತನು ನೀತಿವಂತನು ಅಂದರು.
ಅವನು ತನ್ನನ್ನು ತಗ್ಗಿಸಿಕೊಂಡಾಗ ಕರ್ತನ ಕೋಪವು ಅವನನ್ನು ಬಿಟ್ಟು ತಿರುಗಿತು; ಆತನು ಪೂರ್ಣವಾಗಿ ನಾಶಮಾಡಲು ಮನಸ್ಸಿಲ್ಲದೆ ಇದ್ದನು; ಯೆಹೂದದಲ್ಲಿ ಕಾರ್ಯಗಳು ಚೆನ್ನಾಗಿ ನಡೆದವು.
ಆದಾಗ್ಯೂ ಅಶೇರ, ಮನಸ್ಸೆ, ಜೆಬುಲೂನ್ ಇವರಲ್ಲಿ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು.
ಆದಾಗ್ಯೂ ಹಿಜ್ಕೀಯನೂ ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ ಹಿಜ್ಕೀಯನ ದಿವಸಗಳಲ್ಲಿ ಕರ್ತನ ರೌದ್ರವು ಅವರ ಮೇಲೆ ಬರಲಿಲ್ಲ.
ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು.
ಇದಲ್ಲದೆ ಅವನ ಪ್ರಾರ್ಥನೆಯೂ ಅವನು ದೇವ ರಿಗೆ ಭಿನ್ನವಿಸಿದ್ದೂ ಅವನ ಸಮಸ್ತ ಪಾಪವೂ ಅವನ ಅಪರಾಧವೂ ಅವನು ತಗ್ಗಿಸಿಕೊಳ್ಳುವದಕ್ಕಿಂತ ಮುಂಚೆ ಉನ್ನತ ಸ್ಥಳಗಳಲ್ಲಿ ಕಟ್ಟಿಸಿದ ತೋಪುಗಳೂ ಕೆತ್ತಿಸಿದ ವಿಗ್ರಹಗಳೂ ಸ್ಥಾಪಿಸಿದ ಸ್ಥಳಗಳೂ ಇಗೋ, ಪ್ರವಾದಿ ಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿವೆ.
ತನ್ನ ತಂದೆಯಾದ ಮನಸ್ಸೆಯು ತನ್ನನ್ನು ತಗ್ಗಿಸಿಕೊಂಡ ಹಾಗೆ ಆಮೋನನು ಕರ್ತನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ; ಆದರೆ ಆಮೋನನು ಅಧಿಕ ವಾಗಿ ಅಪರಾಧ ಮಾಡಿದನು.
ಅವನು ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಕರ್ತನ ಬಾಯಿ ಮಾತು ಹೇಳಿದ ಪ್ರವಾದಿ ಯಾದ ಯೆರೆವಿಾಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳದೆ ಇದ್ದನು.
ಇಗೋ, ದೇವರು ತನ್ನ ಶಕ್ತಿಯಲ್ಲಿ ಉನ್ನತನಾಗಿ ದ್ದಾನೆ; ಆತನ ಹಾಗೆ ಬೋಧಿಸುವವನು ಯಾರು?
ದುಷ್ಟರ ಕೊಂಬುಗಳನ್ನೆಲ್ಲಾ ಕಡಿದುಬಿಡುವೆನು; ಆದರೆ ನೀತಿವಂತರ ಕೊಂಬುಗಳು ಎತ್ತಲ್ಪಡುವವು.
ನಿನಗೆ ಪರಾಕ್ರಮವುಳ್ಳ ತೋಳು ಉಂಟು; ಕೈ ಬಲವುಳ್ಳದ್ದು. ನಿನ್ನ ಬಲಗೈ ಉನ್ನತವಾ ದದ್ದು.
ನಿನ್ನ ಹೆಸರಿನಿಂದ ದಿನವೆಲ್ಲಾ ಉಲ್ಲಾಸಪಟ್ಟು ನಿನ್ನ ನೀತಿಯಲ್ಲಿ ಅವರು ಉನ್ನತಕ್ಕೇರು ವರು.
ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು; ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು.
ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು.
ಎಲ್ಲಾ ತಗ್ಗುಗಳು ಮುಚ್ಚಲ್ಪಡಲಿ, ಎಲ್ಲಾ ಬೆಟ್ಟ ಗುಡ್ಡ ಗಳು ತಗ್ಗಿಸಲ್ಪಡಲಿ, ಕೊರಕಲ ನೆಲವು ಸಮವಾಗು ವದು; ಕರ್ತನ ಮಹಿಮೆಯು ಗೋಚರವಾಗುವದು.
ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
ನಾನು ಹೊಲಕ್ಕೆ ಹೋದರೆ, ಇಗೋ, ಕತ್ತಿಯಿಂದ ಕೊಲ್ಲಲ್ಪಟ್ಟವರು ಪಟ್ಟಣದಲ್ಲಿ ಪ್ರವೇಶಿಸಿದರೆ, ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು. ಹೌದು, ಪ್ರವಾದಿಯೂ ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.
ಅವನ ಸೈನ್ಯಗಳೆಲ್ಲಾ ಚದರಿಸಲ್ಪಟ್ಟು ಓಡಿಹೋಗಿ ಅವನ ಸಂಗಡ ಕತ್ತಿಯಿಂದ ಬೀಳುವರು; ಉಳಿದವರು ಎಲ್ಲಾ ದಿಕ್ಕುಗಳಿಗೆ ಚದರಿಸ ಲ್ಪಡುವರು; ಆಗ ಕರ್ತನಾದ ನಾನೇ ಅದನ್ನು ಹೇಳಿ ದೆನೆಂದು ನಿಮಗೆ ತಿಳಿಯುವದು.
ಆದದರಿಂದ ಮನುಷ್ಯಪುತ್ರನೇ, ನಿನ್ನ ನಡು ಮುರಿದಂತೆ ನಿಟ್ಟುಸಿರಿಡು, ಕಹಿಯಾದ ಮನಸ್ಸಿ ನಿಂದ ಅವರ ಕಣ್ಣುಗಳ ಮುಂದೆಯೇ ನಿಟ್ಟುಸಿರಿಡು.
ಅವನ ಮಗನಾದ ಓ ಬೇಲ್ಯಚ್ಚರನೇ--ನೀನು ಇದನ್ನೆಲ್ಲಾ ತಿಳಿದರೂ ನಿನ್ನ ಹೃದಯವನ್ನು ತಗ್ಗಿಸದೆ
ಮನುಷ್ಯನೇ, ಉತ್ತಮವಾದ ದ್ದನ್ನು ನಿನಗೆ ಆತನು ತಿಳಿಸಿದ್ದಾನೆ; ಹೌದು, ನ್ಯಾಯ ವನ್ನು ಮಾಡುವದೂ ಕರುಣೆಯನ್ನು ಪ್ರೀತಿಮಾಡು ವದೂ ನಿನ್ನ ದೇವರ ಸಂಗಡ ವಿನಯವಾಗಿ ನಡ ಕೊಳ್ಳುವದೂ ಇದನ್ನೇ ಹೊರತು ಕರ್ತನು ಇನ್ನೇನು ನಿನ್ನಿಂದ ಕೇಳುತ್ತಾನೆ.
ಯಾವನಾದರೂ ತನ್ನನ್ನು ಹೆಚ್ಚಿಸಿಕೊಂಡರೆ ಅವನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.
ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ.
ಯಾವನು ತನ್ನನ್ನು ತಾನೇ ಹೆಚ್ಚಿಸಿಕೊಳ್ಳು ತ್ತಾನೋ ಅವನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.
ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲ ದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.
ಕರ್ತ ನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?
ಆತನು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು; ಇದೇ ತಕ್ಕಕಾಲದಲ್ಲಿ ಹೇಳ ಬೇಕಾದ ಸಾಕ್ಷಿಯಾಗಿದೆ.
ತನ್ನ ವಾಕ್ಯ ಸಾರೋಣದ ಮೂಲಕ ತಕ್ಕ ಕಾಲದಲ್ಲಿ ಪ್ರಕಟಿಸಿ ನಮ್ಮ ರಕ್ಷಕನಾದ ದೇವರ ಆಜ್ಞೆಗನುಸಾರ ಆ ಸಾರೋಣ ವನ್ನು ಒಪ್ಪಿಸಿದನು.
ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ;
ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿ ಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆತ್ತುವನು.
ನನ್ನ ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿ ಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಿಂದ ಮಾತ ನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ.