ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ; ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಅಂಥ ಬಾಧೆಗಳೇ ಸಂಭವಿಸುತ್ತವೆಯೆಂದು ನಿಮಗೆ ತಿಳಿದದೆಯಲ್ಲಾ.
Cross references
ಆಗ ಸೈತಾನನು ಆತ ನಿಗೆ--ನೀನು ದೇವಕುಮಾರನಾಗಿದ್ದರೆ ಈ ಕಲ್ಲು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.
ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು.
ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ
ಸೈತಾನನಿಗೆ ಅವಕಾಶ ಕೊಡಲೇಬೇಡಿರಿ.
ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ.
ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆ ಯೆಂಬ ಗುರಾಣಿಯನ್ನು ಹಿಡುಕೊಳ್ಳಿರಿ. ಆದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ಆರಿಸುವದಕ್ಕೆ ಶಕ್ತರಾಗುವಿರಿ.
ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮದಿಂದ ನಿಮ್ಮೊಂದಿಗಿದ್ದು ನೀವು ಕ್ರಮ ವಾಗಿ ನಡೆಯುವದನ್ನೂ ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಂತಿರುವದನ್ನೂ ನೋಡಿ ಸಂತೋಷಪಡುತ್ತೇನೆ.
ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.
ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ; ಯಾಕಂದರೆ ಸಂಕಟ ಗಳನ್ನು ಅನುಭವಿಸುವದಕ್ಕಾಗಿ ನಾವು ನೇಮಿಸಲ್ಪಟ್ಟವ ರೆಂದು ನೀವೇ ಬಲ್ಲಿರಷ್ಟೆ.
ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ನೀನು ಕರೆಯಲ್ಪಟ್ಟಿದ್ದೀ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಅರಿಕೆಯನ್ನು ಮಾಡಿದ್ದೀಯಲ್ಲಾ.
ಹೌದು, ಕ್ರಿಸ್ತ ಯೇಸುವಿನಲ್ಲಿ ಭಕ್ತಿ ಯುಳ್ಳವರಾಗಿ ಜೀವಿಸುವದಕ್ಕೆ ಮನಸ್ಸು ಮಾಡುವವ ರೆಲ್ಲರೂ ಹಿಂಸೆಗೊಳಗಾಗುವರು.
ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ.
ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನ ಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡ ಕೊಂಡರು; ಸಿಂಹಗಳ ಬಾಯಿ ಕಟ್ಟಿದರು.
ಹೀಗಿರಲಾಗಿ ದೇವರಿಗೆ ಒಳಗಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು.
ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವ ರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ.
ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು.
ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ಸಂತೋಷವುಳ್ಳವರು. ಅವರ ಬೆದರಿಸುವಿಕೆಗೆ ಹೆದರಬೇಡಿರಿ ಮತ್ತು ಕಳವಳ ಪಡಬೇಡಿರಿ.
ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ.
ನಿಮ್ಮ ಸಹೋದರನೂ ಯೇಸು ಕ್ರಿಸ್ತನ ನಿಮಿತ್ತ ಸಂಕಟದಲ್ಲಿ ರಾಜ್ಯದಲ್ಲಿ ಮತ್ತು ತಾಳ್ಮೆಯಲ್ಲಿ ಜೊತೆ ಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸು ಕ್ರಿಸ್ತನ ವಿಷಯವಾದ ಸಾಕ್ಷೀಗೋಸ್ಕರವೂ ಪತ್ಮೊಸ್ ಎಂದು ಕರೆಯಲ್ಪಟ್ಟ ದ್ವೀಪದಲ್ಲಿದ್ದೆನು.
ಅವರಲ್ಲಿ ಒಬ್ಬೊಬ್ಬನಿಗೆ ಬಿಳೀ ನಿಲುವಂಗಿಗಳು ಕೊಡಲ್ಪಟ್ಟಿದ್ದವು. ಇದಲ್ಲದೆ ಅವರ ಹಾಗೆ ಅವರ ಜೊತೆ ಸೇವಕರ ಮತ್ತು ಅವರ ಸಹೋದರರ ಕೊಲೆಯು ಪೂರೈಸುವ ತನಕ ಇನೂ ಸ್ವಲ್ಪ ಕಾಲ ವಿಶ್ರಮಿಸಿಕೊಂಡಿರಬೇಕೆಂದು ಅವರಿಗೆ ಹೇಳಲ್ಪಟ್ಟಿತು.
ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.