ಆಗ ಸಮುವೇಲನು ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು ಮುದ್ದಿಟ್ಟು ಅವನಿಗೆ--ಕರ್ತನು ನಿನ್ನನ್ನು ತನ್ನ ಬಾಧ್ಯತೆಯ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾನಲ್ಲವೋ?
Cross references
ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.
ಕರ್ತನ ಪಾಲು ಆತನ ಜನವೇ; ಯಾಕೋಬು ಆತನ ಸ್ವಾಸ್ತ್ಯದ ಪಾಲು.
ಅದಕ್ಕೆ ಅವನು--ಅಲ್ಲ; ನಾನು ಈಗ ಕರ್ತನ ಸೈನ್ಯದ ಅಧಿಪತಿ ಯಾಗಿ ಬಂದಿದ್ದೇನೆ ಅಂದನು; ಆಗ ಯೆಹೋಶುವನು ಬೋರಲು ಬಿದ್ದು ಆತನನ್ನು ಆರಾಧಿಸಿ ಆತನಿಗೆನನ್ನ ಒಡೆಯನು ತನ್ನ ಸೇವಕನಿಗೆ ಏನು ಹೇಳುತ್ತಾನೆ ಅಂದನು.ಅದಕ್ಕೆ ಕರ್ತನ ಸೈನ್ಯದ ಅಧಿಪತಿಯು ಯೆಹೋಶುವನಿಗೆ--ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ವಾದದ್ದು ಅಂದನು. ಹಾಗೆಯೇ ಯೆಹೋಶುವನು ಮಾಡಿದನು.
ಕರ್ತನ ಸಂಗಡ ವಿವಾದಿಸುವವರು ಮುರಿದು ಚೂರಾಗುವರು. ಆತನು ಆಕಾಶದಲ್ಲಿಂದ ಅವರ ಮೇಲೆ ಗುಡುಗುವನು. ಕರ್ತನು ಲೋಕಾಂತ್ಯದ ವರೆಗೂ ನ್ಯಾಯತೀರಿಸಿ ತನ್ನ ಅರಸನಿಗೆ ಬಲಕೊಡುವನು, ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು ಎಂಬದು.
ಈಗ ಅವರ ಮಾತನ್ನು ಕೇಳು; ಆದರೆ ನೀನು ಅವರಿಗೆ ಕಟ್ಟಳೆಯನ್ನು ಕೊಟ್ಟು ಅವರನ್ನು ಆಳುವ ಅರಸನ ಅಧಿಕಾರವು ಎಂಥದ್ದೆಂಬದನ್ನು ತಿಳಿಸು ಅಂದನು.
ಆದರೂ ಜನರು ಸಮುವೇಲನ ಮಾತನ್ನು ಕೇಳಲ್ಲೊಲ್ಲದೆ ಅವರು--ಹಾಗಲ್ಲ; ನಮ್ಮ ಮೇಲೆ ಅರಸನು ಇರಬೇಕು; ನಾವು ಸಕಲ ಜನಾಂಗಗಳ ಹಾಗೆ ಇರಬೇಕು;
ನಾಳೆ ಇಷ್ಟು ಹೊತ್ತಿಗೆ ಬೆನ್ಯಾ ವಿಾನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು; ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸ ಬೇಕು; ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು; ನನ್ನ ಜನರ ಕೂಗು ನನ್ನ ಬಳಿಗೆ ಬಂದದರಿಂದ ಅವರನ್ನು ನೋಡಿದ್ದೇನೆ ಎಂಬದು.
ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಕರ್ತನು ನಿನಗೆ ಆಜ್ಞಾಪಿಸಿ ದ್ದನ್ನು ನೀನು ಕೈಕೊಳ್ಳದೆ ಹೋದದರಿಂದ ಆತನು ತನ್ನ ಹೃದಯಕ್ಕೆ ಅನುಸರಣೆಯಾದ ಒಬ್ಬ ಮನುಷ್ಯ ನನ್ನು ಹುಡುಕಿ ಅವನನ್ನು ತನ್ನ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾನೆ ಅಂದನು.
ಸಮುವೇಲನು ಸೌಲನಿಗೆ--ಕರ್ತನು ತನ್ನ ಜನರಾದ ಇಸ್ರಾಯೇಲ್ಯರ ಮೇಲೆ ನಿನ್ನನ್ನು ಅರಸನನ್ನಾಗಿ ಅಭಿಷೇಕಿಸಲು ನನ್ನನ್ನು ಕಳುಹಿಸಿದನು. ಈಗ ನೀನು ಕರ್ತನ ಮಾತುಗಳನ್ನು ಕೇಳು.
ಸಮುವೇಲನು--ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಇಸ್ರಾಯೇಲ್ ಗೋತ್ರಗಳ ಮೇಲೆ ಯಜಮಾನನಾಗಿ ಮಾಡಲ್ಪಟ್ಟಿಯಲ್ಲವೋ? ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿ ಅಭಿಷೇಕಿಸಿ ದನಲ್ಲವೋ?
ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು.
ಅವನು ತನ್ನ ಮನುಷ್ಯರಿಗೆ--ಅವನು ಕರ್ತನ ಅಭಿಷಿಕ್ತನಾದದ್ದರಿಂದ ನನ್ನ ಕೈ ಅವನಿಗೆ ವಿರೋಧವಾಗಿ ಚಾಚಿ ಕರ್ತನಿಂದ ಅಭಿಷಿಕ್ತನಾದ ನನ್ನ ಒಡೆಯನಿಗೆ ಈ ಕಾರ್ಯಮಾಡುವದನ್ನು ಕರ್ತನು ತಡೆಯಲಿ ಅಂದನು.
ನಾನು ನನ್ನ ಕೈಯನ್ನು ಕರ್ತನ ಅಭಿಷಿಕ್ತನ ಮೇಲೆ ಹಾಕದಹಾಗೆ ಕರ್ತನು ನನಗೆ ಆಟಂಕಮಾಡಲಿ. ಆದರೆ ನೀನು ಅವನ ತಲೆದಿಂಬಿನ ಬಳಿಯಲ್ಲಿರುವ ಈಟಿಯನ್ನೂ ನೀರಿನ ತಂಬಿಗೆಯನ್ನೂ ತೆಗೆದುಕೋ;
ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವನಾಗಿಯೂ ಆಗಿದ್ದಿ. ಆದದರಿಂದ ಕರ್ತನು ನಿನಗೆ--ನೀನು ನನ್ನ ಜನರಾದ ಇಸ್ರಾಯೇ ಲನ್ನು ಮೇಯಿಸುವಿ; ಇಸ್ರಾಯೇಲಿನ ಮೇಲೆ ನಾಯಕನಾಗಿರುವಿ ಎಂದು ಹೇಳಿದನು ಅಂದರು.
ಜನರೆಲ್ಲರು ಯೊರ್ದನನ್ನು ದಾಟಿದರು. ಅರಸನು ದಾಟಿ ಬಂದಾಗ ಬರ್ಜಿಲ್ಲೈ ಯನ್ನು ಮುದ್ದಿಟ್ಟು ಅವನನ್ನು ಆಶೀರ್ವದಿಸಿದನು.
ನಾನು ಇಸ್ರಾಯೇಲಿನ ಸಮಾ ಧಾನವುಳ್ಳವರಲ್ಲಿಯೂ ನಂಬಿಗಸ್ತರಲ್ಲಿಯೂ ಒಬ್ಬ ಳಾಗಿದ್ದೇನೆ. ನೀನು ಇಸ್ರಾಯೇಲಿನಲ್ಲಿ ತಾಯಿಯಂತಿ ರುವ ಈ ಪಟ್ಟಣವನ್ನು ನಾಶಮಾಡಲು ಹುಡುಕುತ್ತೀ. ನೀನು ಕರ್ತನ ಬಾಧ್ಯತೆಯನ್ನು ನುಂಗುವದೇಕೆ ಅಂದಳು.
ಅಲ್ಲಿ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಅವ ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿ ಷೇಕಿಸಲಿ. ತುತೂರಿಯನ್ನು ಊದಿ--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅನ್ನಿರಿ.
ಆದರೆ ಬಾಳನಿಗೆ ಬೊಗ್ಗದೆ ಇರುವ ಸಕಲ ಮೊಣ ಕಾಲುಗಳೂ ಅದನ್ನು ಮುದ್ದಿಡದ ಸಕಲ ಬಾಯಿಗಳೂ ಆಗಿರುವ ಏಳು ಸಾವಿರ ಮಂದಿಯನ್ನು ಇಸ್ರಾಯೇ ಲಿನಲ್ಲಿ ನನಗೋಸ್ಕರ ಉಳಿಸಿಕೊಂಡಿದ್ದೇನೆ ಅಂದನು.
ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಕ್ಕಳಲ್ಲಿ ಒಬ್ಬನನ್ನು ಕರೆದು ಅವನಿಗೆ--ನಡುವನ್ನು ಕಟ್ಟಿಕೊಂಡು ಈ ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋಗು.
ಅವನಿಗೆ--ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ ಎಂದು ಕರ್ತನು ಹೇಳುತ್ತಾನೆಂಬದಾಗಿ ಹೇಳಿ ಕದವನ್ನು ತೆರೆದು ತಡಮಾಡದೆ ಓಡಿಹೋಗು ಅಂದನು.
ಅವನು ಎದ್ದು ಮನೆಯೊಳಕ್ಕೆ ಹೋದನು. ಆಗ ಇವನು ಎಣ್ಣೆ ಯನ್ನು ಅವನ ತಲೆಯ ಮೇಲೆ ಹೊಯ್ದು ಅವನಿಗೆ ಹೇಳಿದ್ದು--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ, ಕರ್ತನ ಜನರಾದ ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇ ಕಿಸಿದ್ದೇನೆ.
ಅದಕ್ಕವರು--ಅದು ಸುಳ್ಳು, ದಯಮಾಡಿ ನಮಗೆ ತಿಳಿಸು ಅಂದರು. ಆದದರಿಂದ ಅವನು--ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿ ಸಿದ್ದೇನೆಂಬದಾಗಿ ಕರ್ತನು ಹೇಳುತ್ತಾನೆಂದು ಹೀಗೆ ನನಗೆ ಹೇಳಿದನು ಅಂದನು.
ನೀನು ತಿರುಗಿಕೊಂಡು ನನ್ನ ಜನರ ನಾಯಕನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇ ನಂದರೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ; ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವಿ.
ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
ತನ್ನ ಪ್ರಜೆಯಾದ ಯಾಕೋಬನ್ನೂ ಭಾದ್ಯತೆಯಾದ ಇಸ್ರಾಯೇಲನ್ನೂ ಮೇಯಿಸುವ ಹಾಗೆ, ಅವನನ್ನು ಕುರಿಮರಿಗಳ ಹಿಂಡಿ ನಿಂದ ತಂದನು.ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.
ಕರ್ತನು ಯಾಕೋಬನನ್ನು ತನಗೋ ಸ್ಕರವೂ ಇಸ್ರಾಯೇಲನ್ನು ತನ್ನ ಅಸಾಮಾನ್ಯವಾದ ಸಂಪತ್ತಾಗಿಯೂ ಆದುಕೊಂಡಿದ್ದಾನೆ.
ಸೌಂದರ್ಯವಾದ ಒಳ್ಳೇ ಹಣ್ಣುಗಳುಳ್ಳ ಹಸುರಾದ ಇಪ್ಪೇ ಗಿಡವೆಂದು ಕರ್ತನು ನಿನಗೆ ಹೆಸ ರಿಟ್ಟನು; ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸಿದ್ದಾನೆ ಅದರ ಕೊಂಬೆಗಳು ಮುರಿದು ಹೋಗಿವೆ.
ಈಗ ಅವರು ಹೆಚ್ಚೆಚ್ಚಾಗಿ ಪಾಪವನ್ನು ಮಾಡುತ್ತಾರೆ; ಸ್ವಂತ ಬುದ್ಧಿಯ ಪ್ರಕಾರ ತಮ್ಮ ಬೆಳ್ಳಿಯಿಂದ ಎರಕದ ವಿಗ್ರಹಗಳನ್ನೂ ಮೂರ್ತಿಗಳನ್ನೂ ಮಾಡಿಕೊಂಡಿದ್ದಾರೆ. ಅವೆಲ್ಲವೂ ಶಿಲ್ಪಿಗಳ ಕೈಕೆಲಸವೇ, ಬಲಿ ಅರ್ಪಿಸುವ ಮನುಷ್ಯರು ಹಸುಗಳಿಗೆ ಮುದ್ದಿಡಲೆಂದು ಅವರು ಅವರ ವಿಷಯ ವಾಗಿ ಹೇಳಿದರು.
ತರುವಾಯ ಅವರು ತಮಗೆ ಅರಸನು ಬೇಕೆಂದು ಅಪೇಕ್ಷೆಪಟ್ಟಾಗ ದೇವರು ಅವರಿಗೆ ಬೆನ್ಯಾವಿಾನನ ಗೋತ್ರದ ಕೀಷನ ಮಗನಾದ ಸೌಲನನ್ನು ನಾಲ್ವತ್ತು ವರುಷದ ವರೆಗೆ ಕೊಟ್ಟನು.
ಪವಿತ್ರವಾದ ಮುದ್ದಿಟ್ಟು ಸಹೋದರ ರೆಲ್ಲರನ್ನೂ ವಂದಿಸಿರಿ.
ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.
ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು.