ಆದದರಿಂದ ಅವನು ಈಗ ಇಲ್ಲಿ ಬರುವನೋ ಎಂದು ಕರ್ತನನ್ನು ವಿಚಾರಿಸಿದರು. ಕರ್ತನು--ಇಗೋ, ಅವನು ಸಾಮಗ್ರಿ ಯಲ್ಲಿ ಅಡಗಿಕೊಂಡಿದ್ದಾನೆ ಎಂದು ಹೇಳಿದನು.
Cross references
ಅವನು ಯಾಜಕನಾದ ಎಲ್ಲಾಜಾರನ ಮುಂದೆ ನಿಲ್ಲಬೇಕು; ಇವನು ಕರ್ತನ ಮುಂದೆ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ಆಲೋಚನೆಯ ಸಭೆಯನ್ನು ಕೇಳಬೇಕು; ಅವನ ಆಜ್ಞೆಯ ಪ್ರಕಾರವೇ ಅವನೂ ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲ್ ಮಕ್ಕಳೂ ಸಮಸ್ತ ಸಭೆಯೂ ಹೋಗುತ್ತಾ ಬರುತ್ತಾ ಇರಬೇಕು ಅಂದನು.
ಯೆಹೋಶುವನು ಸತ್ತ ತರುವಾಯ ಆದದ್ದೇನಂದರೆ, ಇಸ್ರಾಯೇಲ್ ಮಕ್ಕಳು ಕರ್ತನಿಗೆ--ಕಾನಾನ್ಯರ ಮೇಲೆ ಮೊದಲು ನಮಗಾಗಿ ಯುದ್ಧಕ್ಕೆ ಹೋಗುವವರು ಯಾರು ಎಂದು ಕೇಳಿದರು.
ಆಗ ಇಸ್ರಾಯೇಲಿನ ಮಕ್ಕಳು ಎದ್ದು ದೇವರ ಮನೆಗೆ ಹೋಗಿ ತಮ್ಮಲ್ಲಿ ಮೊದಲು ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗ ಬೇಕಾ ದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಕರ್ತನು -- ಯೊಹೂದ ಕುಲದವರು ಮೊದಲು ಹೋಗಬೇಕು ಅಂದನು.
ಅದಕ್ಕೆ ಕರ್ತನು--ಅವನ ಮೇಲೆ ಹೋಗಿರಿ ಅಂದನು). ಎರಡನೇ ದಿನದಲ್ಲಿ ಇಸ್ರಾಯೇಲ್ ಮನು ಷ್ಯರು ಬೆನ್ಯಾವಿಾನನ ಮಕ್ಕಳ ಬಳಿಗೆ ಬಂದರು.
ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳಿಗೆ ವಿರೋಧವಾಗಿ ಇನ್ನೂ ಯುದ್ಧಮಾಡುವದಕ್ಕೆ ಹೋಗ ಬೇಕೋ ಬೇಡವೋ ಎಂದು ದೇವರನ್ನು ಕೇಳಿ ಕೊಂಡರು. ಕರ್ತನು--ಹೋಗಿರಿ; ನಾಳೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು.
ಅದಕ್ಕೆ ಸೌಲನು ಅವನಿಗೆ ಪ್ರತ್ಯುತ್ತರ ವಾಗಿ--ನಾನು ಇಸ್ರಾಯೇಲ್ಯರ ಗೋತ್ರಗಳಲ್ಲೆಲ್ಲಾ ಚಿಕ್ಕದಾದ ಬೆನ್ಯಾವಿಾನನ ಗೋತ್ರದವನಲ್ಲವೇ? ಇದ ಲ್ಲದೆ ಬೆನ್ಯಾವಿಾನನ ಗೋತ್ರವು ಸಮಸ್ತ ಗೋತ್ರಗಳಲ್ಲಿ ನನ್ನ ಗೋತ್ರವು ಚಿಕ್ಕದಾದದ್ದಲ್ಲವೇ? ನೀನು ಯಾಕೆ ಹೀಗೆ ನನ್ನ ಸಂಗಡ ಮಾತನಾಡುತ್ತೀ ಅಂದನು.
ಸಮುವೇಲನು--ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಇಸ್ರಾಯೇಲ್ ಗೋತ್ರಗಳ ಮೇಲೆ ಯಜಮಾನನಾಗಿ ಮಾಡಲ್ಪಟ್ಟಿಯಲ್ಲವೋ? ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿ ಅಭಿಷೇಕಿಸಿ ದನಲ್ಲವೋ?
ಆದದರಿಂದ ದಾವೀದನು--ನಾನು ಈ ಫಿಲಿಷ್ಟಿ ಯರನ್ನು ಹೊಡೆಯಲು ಹೋಗಲೋ ಎಂದು ಕರ್ತ ನನ್ನು ಕೇಳಿದನು; ಅದಕ್ಕೆ ಕರ್ತನು--ನೀನು ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯಾಲಾವನ್ನು ರಕ್ಷಿಸು ಅಂದನು.
ದಾವೀ ದನು ತಿರಿಗಿ ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ--ನೀನೆದ್ದು ಕೆಯಾಲಾಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡು ವೆನು ಅಂದನು.
ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿ ದ್ದರಿಂದ ಯಾಜಕನಾದ ಎಬ್ಯಾತಾರನಿಗೆ--ಎಫೋದನ್ನು ಇಲ್ಲಿಗೆ ತಕ್ಕೊಂಡು ಬಾ ಅಂದನು.
ಕೆಯಾಲಾ ಪಟ್ಟಣದವರು ನನ್ನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡುವರೋ? ನಿನ್ನ ಸೇವಕನು ಕೇಳಿದ ಹಾಗೆ ಸೌಲನು ಇಲ್ಲಿಗೆ ಬರುವನೋ? ಇಸ್ರಾಯೇಲಿನ ದೇವರಾದ ಕರ್ತನೇ, ದಯ ಮಾಡಿ ಇದನ್ನು ನಿನ್ನ ಸೇವಕನಿಗೆ ತಿಳಿಸು ಅಂದನು. ಅದಕ್ಕೆ ಕರ್ತನು--ಅವನು ಬರುವನು ಅಂದನು.
ಆಗ ದಾವೀದನು ಅಹೀಮೆಲೆಕನ ಮಗನಾದ ಎಬ್ಯಾತಾರನೆಂಬ ಯಾಜಕ ನಿಗೆ--ನೀನು ದಯಮಾಡಿ ಏಫೋದನ್ನು ನನಗಾಗಿ ತಕ್ಕೊಂಡು ಬಾ ಅಂದನು. ಹಾಗೆಯೇ ಎಬ್ಯಾತಾರನು ಎಫೋದನ್ನು ದಾವೀದನ ಬಳಿಗೆ ತಂದನು.
ದಾವೀದನು ಕರ್ತನಿಗೆ--ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ನಾನು ಅವರನ್ನು ಹಿಂದಟ್ಟಬಹುದೋ ಎಂದು ಕೇಳಿದನು. ಅದಕ್ಕೆ ಆತನು--ನೀನು ಹಿಂದಟ್ಟು; ನಿಶ್ಚಯವಾಗಿ ನೀನು ಅವರನ್ನು ಹಿಂದಟ್ಟಿ ಎಲ್ಲರನ್ನು ಬಿಡಿಸಿಕೊಳ್ಳುವಿ ಅಂದನು.
ಇದಾದ ಮೇಲೆ ದಾವೀದನು ಕರ್ತನನ್ನು -- ಯೆಹೂದದ ಪಟ್ಟಣಗಳಲ್ಲಿ ಯಾವದಕ್ಕಾದರೂ ಹೋಗಲೋ ಎಂದು ಕೇಳಿದನು. ಕರ್ತನು ಅವನಿಗೆ--ಹೋಗು ಅಂದನು. ದಾವೀ ದನು--ನಾನು ಎಲ್ಲಿಗೆ ಹೋಗಲಿ ಎಂದು ಕೇಳಿದಕ್ಕೆ ಆತನು -- ಹೆಬ್ರೋನಿಗೆ ಅಂದನು.
ದಾವೀದನ ದಿವಸಗಳಲ್ಲಿ ವರುಷದಿಂದ ವರುಷಕ್ಕೆ ಮೂರು ವರುಷ ಬರ ಉಂಟಾ ಗಿತ್ತು. ಆಗ ದಾವೀದನು ಕರ್ತನನ್ನು ವಿಚಾರಿಸಿದನು. ಕರ್ತನು--ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿ ದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಇದಾಗಿದೆ ಎಂದು ಹೇಳಿದನು.
ಯಾವನು ತನ್ನನ್ನು ತಾನೇ ಹೆಚ್ಚಿಸಿಕೊಳ್ಳು ತ್ತಾನೋ ಅವನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.