ಆದರೆ ನೀನು ನನಗೆ ಮುಂದಾಗಿ ಗಿಲ್ಗಾಲಿಗೆ ಇಳಿದುಹೋಗಬೇಕು; ಇಗೋ, ನಾನು ದಹನಬಲಿಗಳನ್ನೂ ಸಮಾಧಾನದ ಬಲಿ ಗಳನ್ನೂ ಅರ್ಪಿಸುವದಕ್ಕಾಗಿ ನಿನ್ನ ಬಳಿಗೆ ಬರುವೆನು. ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸುವ ವರೆಗೂ ನೀನು ಅಲ್ಲಿ ಏಳು ದಿವಸ ಕಾದುಕೊಳ್ಳಬೇಕು ಅಂದನು.
Cross references
ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಯೊರ್ದನನ್ನು ದಾಟಿ ಬಂದು ಯೆರಿಕೋವಿನ ಮೂಡಣ ಮೇರೆಯಾದ ಗಿಲ್ಗಾಲಿನಲ್ಲಿ ಇಳಿದು ಕೊಂಡರು.
ಆಗ ಸಮುವೇಲನು ಜನರಿಗೆ--ನಾವು ಗಿಲ್ಗಾಲಿಗೆ ಹೋಗಿ ಅಲ್ಲಿ ರಾಜ್ಯವನ್ನು ನೂತನಪಡಿ ಸೋಣ ಬನ್ನಿರಿ ಅಂದನು.ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ ಆ ಸ್ಥಳದಲ್ಲಿ ಕರ್ತನ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ ಕರ್ತನಿಗೆ ಸಮಾ ಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲ್ಯರೂ ಬಹಳವಾಗಿ ಸಂತೋಷ ಪಟ್ಟರು.
ಫಿಲಿಷ್ಟಿಯರ ಠಾಣ ವನ್ನು ಸೌಲನು ಹೊಡೆದನೆಂದೂ ಫಿಲಿಷ್ಟಿಯರಿಗೆ ಇಸ್ರಾಯೇಲ್ಯರು ಅಸಹ್ಯವಾದವರಾದರೆಂದೂ ಸಮಸ್ತ ಇಸ್ರಾಯೇಲ್ಯರು ಕೇಳಿದಾಗ ಸೌಲನ ಹಿಂದೆ ಹೋಗಲು ಗಿಲ್ಗಾಲಿಗೆ ಕರೆಸಿಕೊಳ್ಳಲ್ಪಟ್ಟರು.
ಸೌಲನು ತನಗೆ ಸಮುವೇಲನು ನೇಮಿಸಿದ ಕಾಲದ ಪ್ರಕಾರ ಏಳು ದಿವಸ ಕಾದಿದ್ದನು. ಸಮುವೇಲನು ಗಿಲ್ಗಾಲಿಗೆ ಬಾರದೆ ಇದ್ದದರಿಂದ ಜನರು ಅವನನ್ನು ಬಿಟ್ಟು ಚದರಿಹೋದರು.
ಆದರೆ ಸಮುವೇಲನು ಅವನಿಗೆನಿನ್ನ ಕತ್ತಿಯು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗ ಮಾಡಿತೋ ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು ಎಂದು ಹೇಳಿ ಸಮುವೇಲನು ಗಿಲ್ಗಾಲಿನಲ್ಲಿ ಕರ್ತನ ಮುಂದೆ ಅಗಾಗನನ್ನು ತುಂಡು ತುಂಡಾಗಿ ಮಾಡಿಬಿಟ್ಟನು.
ಇದಲ್ಲದೆ ಬಹುರೀಮಿನವನೂ ಬೆನ್ಯಾವಿಾನ್ಯನೂ ಗೇರನ ಮಗನಾದ ಶಿಮ್ಮಿಯು ತ್ವರೆಯಾಗಿ ಯೆಹೂದ ಜನರ ಸಂಗಡ ಅರಸನಾದ ದಾವೀದನನ್ನು ಎದುರು ಗೊಳ್ಳುವದಕ್ಕೆ ಬಂದನು.