ಆಗ ಸೌಲನು--ಕರ್ತನು ಈ ದಿವಸ ಇಸ್ರಾಯೇಲಿನಲ್ಲಿ ರಕ್ಷಣೆಯನ್ನುಂಟುಮಾಡಿ ದ್ದರಿಂದ ಈ ಹೊತ್ತು ಯಾವನೂ ಕೊಲ್ಲಲ್ಪಡಬಾರದು ಅಂದನು.
Cross references
ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ.
ಆ ದಿನದಲ್ಲಿ ಕರ್ತನು ಈ ಪ್ರಕಾರ ಇಸ್ರಾಯೇಲ್ಯ ರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಇಸ್ರಾಯೇ ಲ್ಯರು ಸಮುದ್ರತೀರದಲ್ಲಿ ಸತ್ತ ಐಗುಪ್ತ್ಯರನ್ನು ನೋಡಿ ದರು.ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.
ಆದರೆ ಜನರು ಸೌಲನಿಗೆ--ಇಸ್ರಾಯೇಲಿನಲ್ಲಿ ಈ ದೊಡ್ಡ ರಕ್ಷಣೆ ಯನ್ನುಂಟು ಮಾಡಿದ ಯೋನಾತಾನನು ಸಾಯ ಬಹುದೋ? ಅದು ಎಂದಿಗೂ ಆಗದು; ಅವನು ಇಂದು ಕರ್ತನ ಸಹಾಯದ ಮೂಲಕ ಕಾರ್ಯವನ್ನು ನಡಿಸಿದ್ದರಿಂದ ಕರ್ತನ ಆಣೆ, ಅವನ ತಲೆಯಲ್ಲಿರುವ ಒಂದು ಕೂದಲಾದರೂ ನೆಲದ ಮೇಲೆ ಬೀಳಬಾರದು ಅಂದರು. ಜನರು ಯೋನಾತಾನನನ್ನು ಸಾಯದ ಹಾಗೆ ಬಿಡಿಸಿಕೊಂಡರು.
ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನನ್ನು ಕೊಂದನು. ಕರ್ತನು ಎಲ್ಲಾ ಇಸ್ರಾಯೇಲಿಗೋಸ್ಕರ ದೊಡ್ಡ ರಕ್ಷಣೆ ಯನ್ನುಂಟು ಮಾಡಿದನು. ನೀನೂ ನೋಡಿ ಸಂತೋಷ ಪಟ್ಟೆ; ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರಪರಾಧಿಯ ರಕ್ತಕ್ಕೆ ವಿರೋಧವಾಗಿ ಪಾಪವನ್ನು ಮಾಡುವದು ಯಾಕೆ ಅಂದನು.
ಆದರೆ ದಾವೀದನು--ಚೆರೂಯಳ ಮಕ್ಕಳೇ, ಈಹೊತ್ತು ನೀವು ನನಗೆ ಶತ್ರುಗಳಾಗಿರುವ ಹಾಗೆ ನಿಮ್ಮೊಂದಿಗೆ ನನಗೆ ಏನು? ಈಹೊತ್ತು ಇಸ್ರಾಯೇಲಿನಲ್ಲಿ ಯಾವನಾದರೂ ಕೊಲೆಯಾಗಬಾರದು; ಯಾಕಂದರೆ ಈಹೊತ್ತು ನಾನು ಇಸ್ರಾಯೇಲಿನ ಮೇಲೆ ಅರಸನಾಗಿದ್ದೇನೆಂದು ನಾನು ತಿಳಿಯುತ್ತೇನಲ್ಲಾ ಅಂದನು.
ಆಗ ಅರಸನು ಶಿಮ್ಮಿಗೆ --ನೀನು ಸಾಯುವದಿಲ್ಲ ಅಂದನು. ಇದಲ್ಲದೆ ಅರಸನು ಅವನಿಗೆ ಆಣೆ ಇಟ್ಟನು.
ಓ ದೇವರೇ, ನೀನೇ ನನ್ನ ಅರಸನು; ಯಾಕೋಬ ನಿಗೆ ಬಿಡುಗಡೆಗಳನ್ನು ಆಜ್ಞಾಪಿಸು.
ಯಾವ ಮನುಷ್ಯನೂ ಇಲ್ಲದೆ ಇರುವದನ್ನು ಆತನು ನೋಡಿ, ಮಧ್ಯಸ್ಥಗಾರನು ಇಲ್ಲವೆಂದು ಆಶ್ಚರ್ಯಪಟ್ಟನು; ಆಗ ಆತನ ಬಾಹು ತನಗೋಸ್ಕರ ರಕ್ಷಣೆಯನ್ನೂ ನೀತಿಯನ್ನೂ ತಂದಿತು. ಅದೇ ಆತನನ್ನು ಉದ್ಧಾರಮಾಡಿತು.
ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.