ಆಗ ಸಮುವೇಲನು ಜನರಿಗೆ--ನಾವು ಗಿಲ್ಗಾಲಿಗೆ ಹೋಗಿ ಅಲ್ಲಿ ರಾಜ್ಯವನ್ನು ನೂತನಪಡಿ ಸೋಣ ಬನ್ನಿರಿ ಅಂದನು.ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ ಆ ಸ್ಥಳದಲ್ಲಿ ಕರ್ತನ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ ಕರ್ತನಿಗೆ ಸಮಾ ಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲ್ಯರೂ ಬಹಳವಾಗಿ ಸಂತೋಷ ಪಟ್ಟರು.
Cross references
ಆದರೆ ಅಷ್ಡೋದ್ಯರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು.
ಅವನು ಪ್ರತಿವರುಷ ಹೊರಟು ಬೇತೇಲ್ ಗಿಲ್ಗಾಲ್ ಮಿಚ್ಪೆಯನ್ನೂ ಸುತ್ತಿಕೊಂಡುಹೋಗಿ ಆ ಸ್ಥಳಗಳಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು.ಅವನು ರಾಮಕ್ಕೆ ತಿರಿಗಿ ಬರುತ್ತಿದ್ದನು. ಯಾಕಂದರೆ ಅಲ್ಲಿ ಅವನ ಮನೆ ಇತ್ತು; ಅಲ್ಲಿ ಇಸ್ರಾಯೇಲಿಗೆ ನ್ಯಾಯ ತೀರಿಸಿ ದನು; ಕರ್ತನಿಗೆ ಅಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು.
ಆದರೆ ನೀನು ನನಗೆ ಮುಂದಾಗಿ ಗಿಲ್ಗಾಲಿಗೆ ಇಳಿದುಹೋಗಬೇಕು; ಇಗೋ, ನಾನು ದಹನಬಲಿಗಳನ್ನೂ ಸಮಾಧಾನದ ಬಲಿ ಗಳನ್ನೂ ಅರ್ಪಿಸುವದಕ್ಕಾಗಿ ನಿನ್ನ ಬಳಿಗೆ ಬರುವೆನು. ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸುವ ವರೆಗೂ ನೀನು ಅಲ್ಲಿ ಏಳು ದಿವಸ ಕಾದುಕೊಳ್ಳಬೇಕು ಅಂದನು.
ಆಗ ಸಮುವೇಲನು ಸಮಸ್ತ ಜನರಿಗೆ--ಕರ್ತನು ಆದುಕೊಂಡವನನ್ನು ನೋಡಿರಿ; ಎಲ್ಲಾ ಜನರಲ್ಲಿ ಇವನಿಗೆ ಸಮಾನನಾದವನು ಯಾವನೂ ಇಲ್ಲವಲ್ಲಾ ಅಂದನು. ಜನರೆಲ್ಲರೂ ಆರ್ಭಟಿಸಿ--ಅರಸನಾದವನು ಬಾಳಲಿ ಅಂದರು.
ಯುದ್ಧಕ್ಕೆ ಸಿದ್ಧರಾದ ಈ ಸಮಸ್ತ ಸೈನಿಕರು ದಾವೀದನನ್ನು ಸಮಸ್ತ ಇಸ್ರಾಯೇಲ್ಯರ ಮೇಲೆ ಅರಸನಾಗ ಮಾಡಲು ಪೂರ್ಣಹೃದಯದಿಂದ ಹೆಬ್ರೋನಿಗೆ ಬಂದರು. ಇದಲ್ಲದೆ ಇಸ್ರಾಯೇಲಿ ನಲ್ಲಿದ್ದ ಮಿಕ್ಕಾದವರೆಲ್ಲರೂ ದಾವೀದನನ್ನು ಅರಸ ನಾಗ ಮಾಡಲು ಒಂದೇ ಹೃದಯವುಳ್ಳವರಾಗಿದ್ದರು.