ಅಮ್ಮೋನ್ಯನಾದ ನಾಹಾಷನು ಅವರಿಗೆ--ಇಸ್ರಾಯೇ ಲ್ಯರನ್ನು ಅವಮಾನ ಪಡಿಸುವದಕ್ಕಾಗಿ ನಿಮ್ಮೆಲ್ಲರ ಬಲ ಕಣ್ಣುಗಳನ್ನು ಕಿತ್ತುಹಾಕಿ ನಿಮ್ಮ ಸಂಗಡ ಒಡಂಬಡಿಕೆ ಮಾಡುತ್ತೇನೆ ಅಂದನು.
Cross references
ಯಾಕೋಬನ ಮಕ್ಕಳು ಅವರಿಗೆ--ನಾವು ಈ ಕಾರ್ಯವನ್ನು ಮಾಡಲಾರೆವು, ಸುನ್ನತಿಯಿಲ್ಲದ ಮನುಷ್ಯನಿಗೆ ನಮ್ಮ ತಂಗಿಯನ್ನು ಕೊಡಲಾರೆವು, ಅದು ನಮಗೆ ಅವಮಾನ.
ಇದಲ್ಲದೆ ಆತನು ಅವನಿಗೆ--ನಾನು ನಿನ್ನ ತಂದೆಯ ದೇವರು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಆಗಿದ್ದೇನೆ ಎಂದು ಹೇಳಿದನು. ಆಗ ಮೋಶೆಯು ದೇವರನ್ನು ನೋಡುವದಕ್ಕೆ ಭಯ ಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.
ಇದಲ್ಲದೆ ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ತಕ್ಕೊಂಡು ಬರಲಿಲ್ಲ; ಇಲ್ಲವೆ ಹೊಲಗಳನ್ನೂ ದ್ರಾಕ್ಷೇ ತೋಟಗಳನ್ನೂ ನಮಗೆ ಸ್ವಾಸ್ತ್ಯವಾಗಿ ಕೊಡಲಿಲ್ಲ; ಈ ಮನುಷ್ಯರ ಕಣ್ಣುಗಳನ್ನು ಕಿತ್ತುಬಿಡುವಿಯೋ? ನಾವು ಬರುವದಿಲ್ಲ ಅಂದರು.
ಆದರೆ ಫಿಲಿಷ್ಟಿ ಯರು ಅವನನ್ನು ಹಿಡಿದು ಅವನ ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಎರಡು ಹಿತ್ತಾಳೆಯ ಸಂಕೋಲೆಗಳನ್ನು ಹಾಕಿದರು, ಅವನು ಸೆರೆಮನೆಯಲ್ಲಿ ಬೀಸುತ್ತಿದ್ದನು.
ತರುವಾಯ ಯಾಬೇಷಿನ ಜನರು ನಾಹಾಷನಿಗೆ--ನಾಳೆ ನಿನ್ನ ಬಳಿಗೆ ಹೊರಟು ಬರುವೆವು; ಆಗ ನಿನಗೆ ಒಳ್ಳೇದಾಗಿ ತೋರುವದನ್ನೆಲ್ಲಾ ನಮಗೆ ಮಾಡು ಅಂದರು.
ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ--ಈ ಫಿಲಿಷ್ಟಿಯನನ್ನು ಕೊಂದು ಇಸ್ರಾಯೇಲಿನ ಮೇಲಿನಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಮಾಡಲ್ಪಡುವದು? ಯಾಕಂದರೆ ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಹೀಯಾ ಳಿಸುವದಕ್ಕೆ ಎಷ್ಟರವನು ಅಂದನು.
ಹಿಜ್ಕೀಯನ ಮಾತು ಕೇಳಬೇಡಿರಿ. ಅಶ್ಶೂರಿನ ಅರ ಸನು ಹೇಳುವದೇನಂದರೆ--ನೀವು ಸಾಯದೆ ಬದು ಕುವ ಹಾಗೆ ಕಾಣಿಕೆಯಿಂದ ನನ್ನ ಸಂಗಡ ಒಡಂಬಡಿಕೆ ಮಾಡಿ ನನ್ನ ಬಳಿಗೆ ಹೊರಟು ಬನ್ನಿರಿ.
ನೀತಿವಂತನು ತನ್ನ ಪಶುವಿನ ಪ್ರಾಣವನ್ನು ರಕ್ಷಿಸುತ್ತಾನೆ. ಆದರೆ ದುಷ್ಟರ ಅಂತಃಕರುಣೆಯು ಕ್ರೂರತನವೇ.
ಆಗ ಸೀಮೆಯಲ್ಲಿರುವ ಸೈನ್ಯಾಧಿಪತಿಗಳೆಲಾ ಅವರೂ ತಮ್ಮ ಮನುಷ್ಯರೂ ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶದ ಮೇಲೆ ನೇಮಿಸಿದನೆಂದು ಬಾಬೆಲಿಗೆ ಒಯ್ಯಲ್ಪಡದೆ ಇದ್ದ ಗಂಡ ಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ದೇಶದ ಬಡವ ರನ್ನೂ ಅವನಿಗೆ ಒಪ್ಪಿಸಿದ್ದನೆಂದು ಕೇಳಿದಾಗ;